
CHITRADURGA NEWS | 22 FEBRUARY 2024
ಚಿತ್ರದುರ್ಗ: ಚಿತ್ರದುರ್ಗದ ಯುವ ನಾಯಕಿ ಭಾರ್ಗವಿ ದ್ರಾವಿಡ್ ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ನಿಯುಕ್ತಿಗೊಂಡಿದ್ದಾರೆ.
ಫೆಬ್ರವರಿ 22 ರಂದು ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾರ್ಗವಿ ಅವರನ್ನು ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ: ಜಗದೊಡಯ ತಿಪ್ಪೇಶನ ಮಹಾರಥೋತ್ಸವ ವೈಭವಕ್ಕೆ ದಿನಗಣನೆ
ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜ್ ಈ ಆಯ್ಕೆ ಮಾಡಿದ್ದು, ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಭಾರ್ಗವಿ ದ್ರಾವಿಡ್ ಅವರಿಗೆ ನಿಯುಕ್ತಿ ಮಾಡಿರುವ ಪತ್ರ ನೀಡಿದ್ದಾರೆ.

ಮೂಲತಃ ಎಬಿವಿಪಿ ಕಾರ್ಯಕರ್ತೆಯಾಗಿ ಜಿಲ್ಲೆ, ರಾಜ್ಯ ಮಟ್ಟದ ಜವಾಬ್ದಾರಿ ನಿರ್ವಹಿಸಿದ್ದ ಭಾರ್ಗವಿ, ಕಳೆದ ಅವಧಿಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಜವಾಬ್ದಾರಿ ನಿರ್ವಹಿಸಿದ್ದರು.
ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ದಿನಗಣನೆ | ಚಿತ್ರದುರ್ಗದಲ್ಲಿ ಶುರುವಾಯ್ತು ಟಿಕೇಟ್ ಅಂದರ್-ಬಾಹರ್ ಆಟ


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
