
CHITRADURGA NEWS | 20 JANUARY 2024
ಚಿತ್ರದುರ್ಗ: ಅಧಿಕಾರ, ಸಂಪತ್ತಿನ ಯಾವ ಮದವು ಮರ್ಯಾದಾ ಪುರುಷ ಶ್ರೀರಾಮನಲ್ಲಿ ಇರಲಿಲ್ಲ. ಅಂತಹ ಯಾವುದಾದರೂ ಒಂದು ಗುಣವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಮನುಷ್ಯ ಜನ್ಮ ಸಾರ್ಥಕವಾಗುತ್ತದೆ ಎಂದು ಭೀಮಸೇತು ಮುನಿವೃಂದ ಮಠ ಭೀಮನಕಟ್ಟೆಯ ರಘುವರೇಂದ್ರ ತೀರ್ಥ ಶ್ರೀಪಾದರು ಹೇಳಿದರು.

ನಗರದ ವಾಸವಿ ವಿದ್ಯಾಸಂಸ್ಥೆ ಆವರಣದಲ್ಲಿ ಶ್ರೀ ಹರಿವಾಯು ಗುರು ಸೇವಾ ಟ್ರಸ್ಟ್ ಹಮ್ಮಿಕೊಂಡಿರುವ ಹರಿವಾಯುಸ್ತುತಿ ಪಾರಾಯಣದ 23ನೇ ವಾರ್ಷಿಕೋತ್ಸವದ ಅಂಗವಾಗಿ ಹರಿದಾಸ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು.
ಇದನ್ನೂ ಓದಿ: ಹರಿವಾಯುಸ್ತುತಿ ಪಾರಾಯಣದ ಹರಿದಾಸ ಹಬ್ಬಕ್ಕೆ 23ನೇ ಸಂಭ್ರಮ
ಐದು ಶತಮಾನಗಳಿಂದ ತಿಕ್ಕಾಟ, ಕೋರ್ಟ್ ವ್ಯಾಜ್ಯದ ನಂತರ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿμÁ್ಠಪನೆಯಾಗುತ್ತಿದೆ. ಇದು ನಾವೆಲ್ಲರೂ ಸಂಭ್ರಮಿಸಬೇಕಾದ ಸಂದರ್ಭ ಎಂದರು.
ಮಹರ್ಷಿ ವಾಲ್ಮೀಕಿ ರಾಮಾಯಣದಲ್ಲಿ ರಾಮನ ಗುಣಗಳ ಪಟ್ಟಿ ಕೊಟ್ಟಿದ್ದಾರೆ. ಸ್ಥಿತಪೂರ್ವ ಭಾಷಿ ರಾಮನ ಗುಣ. ರಾಮರಾಜ್ಯ, ರಾಮನ ಪ್ರಾಣ ಪ್ರತಿμÉ್ಟ ನಮ್ಮಲ್ಲಾಗಬೇಕು. ರಾಮ ಮತ್ತು ಕೃಷ್ಣ ಮನುಷ್ಯರಂತೆ ಬಾಳಿ ತೋರಿದ ಅವತಾರ ಪುರುಷರು. ಮನುಷ್ಯ ಹೇಗೆ ಬದುಕಬೇಕೆಂಬುದನ್ನು ಹೇಳಿಕೊಟ್ಟಿದ್ದು ರಾಮ. ಚಂದ್ರನನ್ನು ಕಂಡರೆ ಮನಸ್ಸಿಗೆ ನೆಮ್ಮದಿಯಾಗುತ್ತದೆ. ಚಂದ್ರನಿಗೆ ಹುಟ್ಟುಂಟು. ಭಗವಂತನಿಗೆ ಹುಟ್ಟಿಲ್ಲ. ಕೃಷ್ಣನನ್ನು ಅರ್ಥ ಮಾಡಿಕೊಳ್ಳುವುದು ಕಷ್ಟ. ರಾಮ ತನ್ನಲ್ಲಿನ ಸಾಮಥ್ರ್ಯದಿಂದ ಬೆಳೆದವನು. ದೇವರು ಅನುಗ್ರಹ ಮಾಡುವುದು ಭಕ್ತರಿಗೆ ಮಾತ್ರ. ಚಂದ್ರನಿಗಿಂತ ವಿಶಿಷ್ಟವಾದ ಗುಣ ರಾಮನಲ್ಲಿತ್ತು ಎಂದು ತಿಳಿಸಿದರು.
ಇದನ್ನೂ ಓದಿ: ಅಯೋಧ್ಯೆಗೆ ತೆರಳಿದ ಕೋಟೆನಾಡಿನ ಮಠಾಧೀಶರು
ಸುಖದ ಹಿಂದೆ ದುಃಖವಿದೆ. ಹರಿದಾಸರು ಸಂತೋಷ ಪಡುವ ಕಾಲವಿದು. ರಾಮ ಎಲ್ಲರಿಗೂ ಒಡೆಯ. ರಾಮರಾಜ್ಯ ಆಗಬೇಕು. ರಾಮನೆಂದರೆ ಪ್ರತಿಯೊಬ್ಬರಲ್ಲಿಯೂ ಎಲ್ಲಿಲ್ಲದ ಭಕ್ತಿ. ಏಕೆಂದರೆ ಅಂತಹ ಗುಣ ರಾಮನಲ್ಲಿತ್ತು ಎಂದು ಸ್ಮರಿಸಿದರು.

ಬ್ರಾಹ್ಮಣ ಸಂಘದ ಅಧ್ಯಕ್ಷ ಪಿ.ಎಸ್.ಮಂಜುನಾಥ್ ಮಾತನಾಡಿ, ಹರಿದಾಸ ಹಬ್ಬದ ಮೂಲಕ ಜ್ಞಾನ ವಿಕಾಸವಾಗಬೇಕು. ಜೀವನದಲ್ಲಿ ಏನು ಬದಲಾವಣೆ ತಂದುಕೊಂಡಿದ್ದೇವೆನ್ನುವುದು ಮುಖ್ಯ. ಮನುಷ್ಯ ಜೀವನ ಅತ್ಯಂತ ಶ್ರೇಷ್ಟ. ಧರ್ಮ, ಅಧರ್ಮ, ಹಿಂಸೆ ಇವೆಲ್ಲವು ರಾಜ-ಮಹಾರಾಜರುಗಳ ಕಾಲದಿಂದಲೂ ಇದೆ. ಆಸೆ-ದುರಾಸೆ ಇರುತ್ತದೆ. ಅತಿಯಾದರೆ ಒಂದಲ್ಲ ಒಂದು ರೀತಿಯ ಅನಾಹುತಗಳಾಗುತ್ತವೆ. ದೇಶದ ಪ್ರಧಾನಿ ನರೇಂದ್ರಮೋದಿರವರ ಆಡಳಿತದಲ್ಲಿ ರಾಮ ಮಂದಿರ ನಿರ್ಮಾಣ ಅಲ್ಪ ಕಾಲದಲ್ಲಿಯೇ ಆಗುತ್ತಿರುವುದನ್ನು ಎಲ್ಲರೂ ಮೆಚ್ಚಲೇಬೇಕು. ಮನುಷ್ಯ ಧರ್ಮದಿಂದ ನಡೆದಾಗ ಮಾತ್ರ ಒಳಿತಾಗಲಿದೆ ಎಂದು ಹೇಳಿದರು.
ಇದನ್ನೂ ಓದಿ: ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಮುಹೂರ್ತದಲ್ಲೇ ಚಿತ್ರದುರ್ಗದಲ್ಲಿ ಮಗುವಿಗೆ ರಾಮನೆಂದು ನಾಮಕರಣ
ಪೂರ್ಣಪ್ರಜ್ಞಾ ವಿದ್ಯಾಪೀಠ ಬೆಂಗಳೂರಿನ ವಿದ್ವಾನ್ ಕೃಷ್ಣರಾಜ ಕುತ್ಪಾಡಿ, ರಾಘವೇಂದ್ರಸ್ವಾಮಿ ಮಠದ ವ್ಯವಸ್ಥಾಪಕ ಪ್ರಾಣೇಶಾಚಾರ್ಯ ಕೊಪ್ರ, ಉತ್ತರಾಧಿ ಮಠದ ವ್ಯವಸ್ಥಾಪಕ ಉಪಾಧ್ಯ ಪ್ರಭಂಜನಾಚಾರ್ಯ ಕೊಸನೂರು, ನಗರಸಭೆ ಸದಸ್ಯ ಜಿ.ಹರೀಶ್, ಗುರುರಾಜ ಸೇವಾ ಸಂಘದ ಅಧ್ಯಕ್ಷ ವೇದವ್ಯಾಸಚಾರ್ಯ, ಬಡಗನಾಡು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎ.ಶೇಷಗಿರಿರಾವ್, ವೈಷ್ಣವಸಭಾ ಅಧ್ಯಕ್ಷ ಜಗದೀಶ್ ಜೆ.ಅಯ್ಯಂಗಾರ್, ಸದ್ಗುರು ಬ್ರಹ್ಮಚೈತನ್ಯ ಭಕ್ತ ಮಂಡಳಿ ಅಧ್ಯಕ್ಷ ಕಟೀಲ್ ದಿವಾಕರ್, ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಎ.ಸತ್ಯನಾರಾಯಣಶೆಟ್ಟಿ, ಆರ್ಯವೈಶ್ಯ ವಿದ್ಯಾಭಿವೃದ್ದಿ ಸಂಘದ ಅಧ್ಯಕ್ಷ ಪಿ.ಮೋಹನಕುಮಾರ್ ಗುಪ್ತ, ತಾಲ್ಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಡಾ.ಅನಂತರಾಮ್ ಗೌತಮ್, ಆರ್ಯವೈಶ್ಯ ಸಂಘದ ಅಧ್ಯಕ್ಷ ಎಲ್.ಇ.ಶ್ರೀನಿವಾಸಬಾಬು ವೇದಿಕೆಯಲ್ಲಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
