CHITRADURGA NEWS | 30 APRIL 2025
ಚಿತ್ರದುರ್ಗ: ವೀರಶೈವ ಅರ್ಬನ್ ಕೋ-ಆಪರೇಟಿವ್ ಸೊಸೈಟಿಯ ರಜತ ಮಹೋತ್ಸವದ ಅಂಗವಾಗಿ ನಗರದ ಧವಳಗಿರಿ ಬಡಾವಣೆಯಲ್ಲಿ ವಿರಶೈವ ಸಮುದಾಯ ಭವನ ನಿರ್ಮಾಣಕ್ಕೆ ಬಸವ ಜಯಂತಿ ದಿನದಂದೇ ಭೂಮಿ ಪೂಜೆ ಸಲ್ಲಿಸಲಾಯಿತು.
ವೀರಶೈವ ಅರ್ಬನ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಟೇಲ್ ಶಿವಕುಮಾರ್ ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು ಭೂಮಿ ಪೂಜೆಯಲ್ಲಿ ಭಾಗವಹಿಸಿದ್ದು ಅಭಿಮಾನಿಗಳು ಹಿತೈಷಿಗಳು, ಸ್ನೇಹಿತರು ಆಗಮಿಸಿ ಸಮುದಾಯ ಭವನ ನಿರ್ಮಾಣಕ್ಕೆ ಶುಭ ಕೋರಿದರು.
ಇದನ್ನೂ ಓದಿ: ಅಡಿಕೆ ಧಾರಣೆ | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
ಈ ಸಂದರ್ಭದಲ್ಲಿ ಮಾತನಾಡಿದ ಪಟೇಲ್ ಶಿವಕುಮಾರ್, ಸೊಸೈಟಿಯ ಷೇರುದಾರರಿಗೆ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ನಗರಾಭಿವೃದ್ದಿ ಪ್ರಾಧಿಕಾರದಿಂದ ದೂರೆತ್ತಿದ್ದು, ದಾವಣಗೆರೆ ಇಂಜಿನಿಯರ್ ಶಿವಕುಮಾರ್ ನೀಲಿ ನಕಾಶೆಯನ್ನು ತಯಾರು ಮಾಡಿದ್ದಾರೆ ಎಂದರು.
ಸುಮಾರು 60*180ಅಡಿ ಅಳತೆಯಲ್ಲಿ ಸುಮಾರು 2.50 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣವಾಗಲಿದ್ದು, ಇದರಲ್ಲಿ 300 ರಿಂದ 400 ಜನ ಕುಳಿತುಕೊಳ್ಳುವ ಹಾಲು ಅಡುಗೆ ಮನೆ, ವಾಹನಗಳಿಗೆ ಪಾರ್ಕಿಂಗ್ ಸೌಲಭ್ಯ, 5 ಕೊಠಡಿಗಳು, ಊಟದ ಮನೆಯನ್ನು ಸೇರಿದಂತೆ ಇತರೆ ಸೌಲಭ್ಯಗಳನ್ನು ಹೊಂದಿದೆ ಎಂದರು.
ಇದನ್ನೂ ಓದಿ: ನೀವು ಹೆಚ್ಚು ಒತ್ತಡದಲ್ಲಿದ್ದರೆ ಚರ್ಮದ ಮೇಲೆ ಈ ಚಿಹ್ನೆಗಳು ಕಾಣಿಸಿಕೊಳ್ಳುತ್ತದೆಯಂತೆ
ಈ ಭಾಗದಲ್ಲಿ ಈ ರೀತಿಯಾದ ಸಮುದಾಯ ಭವನ ಇರಲ್ಲಿಲ್ಲ ಇಲ್ಲಿಗೆ ಅಗತ್ಯವಾಗಿತ್ತು ಇದನ್ನು ಮನಗಂಡು ಸೊಸೈಟಿ ವತಿಯಿಂದ ನಿರ್ಮಾಣ ಮಾಡಲು ಆಡಳಿತ ಮಂಡಳಿ ಮುಂದಾಗಿದೆ, ಮುಂದಿನ ಒಂದು ತಿಂಗಳೊಳಗಾಗಿ ಕಟ್ಟಡ ಕಾಮಗಾರಿಯನ್ನು ಪ್ರಾರಂಭ ಮಾಡಲಾಗುವುದು. ಮುಂದಿನ ಆರು ತಿಂಗಳೊಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್ ಆಗಮಿಸಿ ಶುಭ ಹಾರೈಸಿದರು.
ವೀರಶೈವ ಅರ್ಬನ್ ಕೋ-ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷರಾದ ಜಿ.ಟಿ.ಸುರೇಶ್ ನಿರ್ದೇಶಕರಾದ ಎಸ್.ಪರಮೇಶ್ವರಪ್ಪ, ಟಿ.ಮಹಾಂತೇಶ್, ಎಸ್.ವಿ.ನಾಗರಾಜಪ್ಪ, ಎಸ್.ಷಣ್ಮುಖಪ್ಪ, ಡಿ.ಎಸ್.ಮಲ್ಲಿಕಾರ್ಜನ್, ಜಿ.ಎಂ.ಕರಿಬಸವಯ್ಯ, ಸಿ.ಚಂದ್ರಪ್ಪ, ಜಯಶ್ರೀ, ಆರ್, ಶೈಲಜಾ ಸೇರಿದಂತೆ ಸೊಸೈಟಿಯ ಸಿಬ್ಬಂದಿ ವರ್ಗ ಹಾಜರಿದ್ದರು.
ಇದನ್ನೂ ಓದಿ: SSLC ಪರೀಕ್ಷೆ ಅಕ್ರಮ | ಹತ್ತು ಜನ ಶಿಕ್ಷಕರ ಅಮಾನತು | ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಾ ?
ಜಂಗಮ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜನಯ್ಯ, ವೀರಶೈವ ಸಮಾಜದ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ, ನಿರ್ದೇಶಕರಾದ ನಿರ್ಮಲ ಬಸವರಾಜು, ಮಹಿಳಾ ಘಟಕದ ಕಾರ್ಯದರ್ಶಿ ಉಮಾರಮೇಶ್, ವೀರಶೈವ ಸಮಾಜದ ಮುಖಂಡರಾದ ಕವಿತಾ ಶಿವಕುಮಾರ್, ಮಲ್ಲಿಕಾರ್ಜನ್, ಕೊಟ್ರೇಶ್, ನಗರಸಭಾ ಸದಸ್ಯರಾದ ಬಿ.ಸುರೇಶ್, ರೀನಾ ವೀರಭದ್ರಪ್ಪ, ಜಯ್ಯಣ್ಣ, ಕೆ.ಎನ್.ವಿಶ್ವನಾಥಯ್ಯ, ಜಯಕುಮಾರ್, ಸರೋಜಮ್ಮ ನಾಗಣ್ಣ, ಕೆ.ವಿ.ಪ್ರಭಾಕರ್, ಶಶಿಕಲಾ ಪರಮೇಶ್, ಹಿರಿಯ ಪತ್ರಕರ್ತ ಉಜ್ಜಿನಪ್ಪ ಮತ್ತಿತರರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number