By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅಪರ ಜಿಲ್ಲಾಧಿಕಾರಿಗೆ ರೈತರ ಮನವಿ
    ರೈತರ ಕೃಷಿ ಪಂಪ್‍ಸೆಟ್‍ಗೆ ಸೋಲಾರ್ ಅಳವಡಿಕೆ | ಕಂಪನಿಯಿಂದ ಸಿವಿಲ್ ಕಾಮಗಾರಿ ಪೂರ್ಣಗೊಳಿಸಿ | ರೈತರ ಮನವಿ 
    39 minutes ago
    ವಿಕಲಚೇತನರ ಜಿಲ್ಲಾಮಟ್ಟದ ಸಮಿತಿ ಸಭೆ
    ನಕಲಿ ವಿಕಲಚೇತನರ ಪ್ರಮಾಣಪತ್ರ ಪಡೆದವರ, ನೀಡಿದ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ | ADC ಬಿ.ಟಿ.ಕುಮಾರಸ್ವಾಮಿ
    8 hours ago
    ಸಿಬಿಎಸ್‌ಇ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿ ಅಭಿನಂದಿಸಿದರು
    ಸಿಬಿಎಸ್‌ಇ ಫಲಿತಾಂಶದಲ್ಲಿ ಎಸ್‌ಆರ್‌ಎಸ್‌ ವಿದ್ಯಾರ್ಥಿಗಳ ಸಾಧನೆ
    9 hours ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಬಾಮೈದನನ್ನೇ ಕೊಲೆ ಮಾಡಿದ್ದ ಅಕ್ಕ ಭಾವನಿಗೆ ಜೀವಾವಧಿ ಶಿಕ್ಷೆ
    11 hours ago
    ಬಾಬುಜಗಜೀವನ್ ರಾಮ್ ಭವನ ವೀಕ್ಷಿಸಿದ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) | ಉಳಿದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ 
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    3 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    7 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    21 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    7 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    11 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    3 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    5 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    7 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    9 hours ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    10 hours ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    1 day ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    2 days ago
Reading: Kannada Rajyothsava: ಕೋಟೆ ನಾಡಿನಲ್ಲಿ ಕನ್ನಡದ ಕಂಪು | ಭುವನೇಶ್ವರಿ ತಾಯಿ ಭಾವಚಿತ್ರದ ಮೆರವಣಿಗೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Kannada Rajyothsava: ಕೋಟೆ ನಾಡಿನಲ್ಲಿ ಕನ್ನಡದ ಕಂಪು | ಭುವನೇಶ್ವರಿ ತಾಯಿ ಭಾವಚಿತ್ರದ ಮೆರವಣಿಗೆ

chitradurganews.com
Last updated: 1 November 2024 16:22
chitradurganews.com
1 year ago
Share
kannada rajyothsava chitradurga
ಕನ್ನಡ ರಾಜ್ಯೋತ್ಸವ
SHARE

CHITRADURGA NEWS | 01 NOVEMBER 2024

ಚಿತ್ರದುರ್ಗ: ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವದ (Kannada Rajyothsava) ಹಿನ್ನೆಲೆಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲೂ ಕನ್ನಡದ ಕಂಪು ಎಲ್ಲೆಲ್ಲೂ ಪಸರಿಸಿತ್ತು.

ಚಿತ್ರದುರ್ಗ ಜಿಲ್ಲಾ ಆಡಳಿತ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದಲ್ಲಿ ತಾಯಿ ಭವನೇಶ್ವರಿಯ ವಿಜೃಂಭಣೆಯ ಮೆರವಣಿಗೆ ನಡೆಯಿತು.

ಇದನ್ನೂ ಓದಿ: ನಾಲ್ವರು ಪತ್ರಕರ್ತರಿಗೆ ರಾಜ್ಯೋತ್ಸವ ಪ್ರಶಸ್ತಿ

ಹೊಳಲ್ಕೆರೆ ರಸ್ತೆಯಲ್ಲಿರುವ ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದ ಬಳಿ ಭವನೇಶ್ವರಿ ತಾಯಿ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳಿಂದ ಕನ್ನಡ ನಾಡು, ನುಡಿಗೆ ಸಂಬಂಧಿಸಿದ ಸ್ಥಬ್ದಚಿತ್ರಗಳನ್ನು ತಯಾರಿಸಿ ತರಲಾಗಿತ್ತು. ‘ಹೊನ್ನ ಬಿತ್ತೇವು ಹೊಲಕೆಲ್ಲಾ’ ಎಂಬ ನಾಣ್ನುಡಿಯಂತೆ ಜೋಡೆತ್ತುಗಳೊಂದಿಗೆ ಹೊಲದಲ್ಲಿ ಬಿತ್ತನೆ ಮಾಡುತ್ತಿರುವ ರೈತನ ಪ್ರತಿಮೆ ಇರುವ ಕೃಷಿ ಇಲಾಖೆಯ ಸ್ತಬ್ದಚಿತ್ರ ಮೆರವಣಿಗೆಯಲ್ಲಿ ಜನರ ಗಮನ ಸೆಳೆಯುತು.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ | 28 ಜನರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಕನ್ನಡಗರ ಅಸ್ಮಿತೆ ಹಣತೆ ಹಚ್ಚಿ ವಿಶಾಲ ಕನ್ನಡ ಸಾಮ್ರಾಜ್ಯ ಸ್ಥಾಪನೆಗೆ ನಾಂದಿ ಹಾಡಿದ ಕದಂಬ ರಾಜ ಮಯೂರ ವರ್ಮನ ಪುತ್ಥಳಿ ಜೊತೆಗೆ, ಜಿಲ್ಲೆಯ ತೋಟಗಾರಿಕೆ ಬೆಳೆಗಳ ಮಾಹಿತಿ ನೀಡುವ ತೋಟಗಾರಿಕೆ ಇಲಾಖೆ ಸ್ತಬ್ದಚಿತ್ರ ನೋಡುಗರಲ್ಲಿ ಕನ್ನಡ ಅಭಿಮಾನವನ್ನು ಮೂಡಿಸಿತು.

ಮಹಿಳೆಯರ ಸಬಲೀಕರಣಕ್ಕೆ ಇಂಬಾಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗೃಹಲಕ್ಷ್ಮೀ ಹಾಗೂ ತಾಯಿ ಭುವನೇಶ್ವರಿ ಭಾವಚಿತ್ರದೊಂದಿಗೆ ಪುμÁ್ಪಲಂಕೃತಗೊಂಡ ಕೆ.ಎಸ್.ಆರ್.ಟಿ.ಸಿ ಶಕ್ತಿ ಸ್ತಬ್ದಚಿತ್ರಗಳು ಯೋಜನೆಗಳ ಮಹತ್ವ ಸಾರಿದವು.

kannada rajyothsava
ಕನ್ನಡ ರಾಜ್ಯೋತ್ಸವ

ಸಾರಿಗೆ ಇಲಾಖೆ ಸ್ಥಬ್ದಚಿತ್ರಕ್ಕೆ ಪ್ರಥಮ ಬಹುಮಾನ:

ಸಾರಿಗೆ ಇಲಾಖೆಯ ಪ್ರಾದೇಶಿಕ ಕಚೇರಿಯಿಂದ ರಸ್ತೆ ಸುರಕ್ಷತೆ ಹಾಗೂ ಬ್ಯಾಟರಿ ಚಾಲಿತ ವಿದ್ಯುತ್ ವಾಹನಗಳ ಬಳಕೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಸ್ತಬ್ದಚಿತ್ರ ಎಲ್ಲರ ಮೆಚ್ಚುಗೆ ಗಳಿಸುವುದರೊಂದಿಗೆ ಪ್ರಥಮ ಬಹುಮಾನಕ್ಕೆ ಭಾಜವಾಯಿತು.

ಇದನ್ನೂ ಓದಿ: ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣಕ್ಕೆ ಮೂಲಭೂತ ಸೌಕರ್ಯ ಒದಗಿಸಿ, ಶುಲ್ಕ ನಿಗದಿಪಡಿಸಿ | ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚನೆ 

ತೋಟಗಾರಿಕೆ ಹಾಗೂ ksrtc ಸ್ಥಬ್ದ ಚಿತ್ರಗಳು ಅನುಕ್ರಮವಾಗಿ ದ್ವೀತಿಯ ಹಾಗೂ ತೃತೀಯ ಬಹುಮಾನ ಗಳಿಸಿದವು. ಶಿಕ್ಷಣ ಹಾಗೂ ಕೃಷಿ ಇಲಾಖೆ ಸ್ತಬ್ದಚಿತ್ರಗಳು ಸಮಾದಾನಕರ ಬಹುಮಾನ ಪಡೆದವು. ಜಿಲ್ಲಾ ಕೈಗಾರಿಕೆ ತರಬೇತಿ ಕೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅರಣ್ಯ, ಪ್ರವಾಸೋದ್ಯಮ ಇಲಾಖೆಗಳ ಸ್ತಬ್ದಚಿತ್ರಗಳು ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸಿದವು.

ಮೆರವಣಿಗೆಯಲ್ಲಿ ಸೇವಾದಳ, ಶಾಲಾ ಮಕ್ಕಳ ವಾದ್ಯ ತಂಡ, ಗೊಂಬೆ ಹಾಗೂ ಪಟ ಕುಣಿತ, ಡೊಳ್ಳು, ವೇಷಗಾರ, ಬ್ಯಾಂಡ್ ಸೇರಿದಂತೆ ಇತರೆ ಸಾಂಸ್ಕøತಿಕ ಕಲಾ ತಂಡಗಳು ಪಾಲ್ಗೊಂಡಿದ್ದವು. ಮೆರವಣಿಗೆಯು ನಗರದ ಮಹಾತ್ಮ ಗಾಂಧಿ, ಎಸ್.ಬಿ.ಎಂ, ಅಂಬೇಡ್ಕರ್ ಹಾಗೂ ಓಬವ್ವ ವೃತ್ತದ ಮೂಲಕ ಪೆÇಲೀಸ್ ಕವಾಯತು ಮೈದಾನ ತಲುಪಿದವು.

ಇದನ್ನೂ ಓದಿ: ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ | ವಿದೇಶಿ ಕರೆನ್ಸಿ ಪತ್ತೆ | 45 ಲಕ್ಷ ಸಂಗ್ರಹ 

ಈ ವೇಳೆ ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್, SP ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಧಿಕಾರಿ ಎಂ.ಕಾರ್ತಿಕ್, ನಗರ ಸಭೆ ಆಯುಕ್ತೆ ರೇಣುಕಾ, ತಹಶೀಲ್ದಾರ್ ಡಾ.ನಾಗವೇಣಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
Halmidi shasana
ಹಲ್ಮಿಡಿ ಶಾಸನದ ಪ್ರತಿಕೃತಿ

ಹಲ್ಮಿಡಿ ಶಾಸನದ ಪ್ರತಿಕೃತಿಯ ಅನಾವರಣ

ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ ಅಭಿಯಾನದಡಿ, ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅನಾವರಣಗೊಳಿಸಿದರು.

ಇದನ್ನೂ ಓದಿ:  ಅತ್ತೆ ಮಾವನ ಕೊಲೆ ಮಾಡಿದ್ದ ಅಳಿಯನ ಬಂಧನ | ತೆಲಂಗಾಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ತಲಾಶ್..!

ಕನ್ನಡದ ಮೊದಲ ಶಿಲಾ ಶಾಸನ ಬೇಲೂರು ತಾಲೂಕಿನ ಹಲ್ಮಿಡಿಯಲ್ಲಿ 1936ರಲ್ಲಿ ಪತ್ತೆಯಾದ ಶಾಸನವನ್ನು ಕನ್ನಡ ಲಿಪಿಯಲ್ಲಿ ಲಭ್ಯವಾದ ಮೊಟ್ಟ ಮೊದಲ ಶಾಸನವೆಂದು ಪರಿಗಣಿಸಲಾಗಿದೆ. 16 ಸಾಲುಗಳ ಬರಹ ಇದರಲ್ಲಿತ್ತು.

ಇದು ಕ್ರಿ.ಶಕ 450ರ ಸುಮಾರಿನದ್ದು ಎಂದು ಅಂದಾಜಿಸಲಾಗಿದೆ. ಇದರ ಬಗ್ಗೆ ಸಾಕಷ್ಟು ಅಧ್ಯಯನ-ಅವಲೋಕನಗಳು ನಡೆದಿದೆ. ಹೀಗಾಗಿ ಈ ಶಿಲಾ ಶಾಸನದ ಮಹತ್ವವನ್ನು ಶಾಶ್ವತವಾಗಿ ಜನರ ನೆನಪಿನಲ್ಲಿ ಉಳಿಯುವಂತೆ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಕೃತಿ ಸ್ವರೂಪದಲ್ಲಿ ಇದನ್ನು ಕನ್ನಡ ಸಂಸ್ಕøತಿ ಇಲಾಖೆಯಿಂದ ಸ್ಥಾಪಿಸಲಾಗಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BhubaneswariChitradurgaChitradurga newsChitradurga UpdatesKannadaKannada NewsKannada RajyotsavaRajyotsavaStillsಕನ್ನಡಕನ್ನಡ ರಾಜ್ಯೋತ್ಸವಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಭುವನೇಶ್ವರಿರಾಜ್ಯೋತ್ಸವಸ್ಥಬ್ಧಚಿತ್ರ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | 01 ನವೆಂಬರ್ | ಆಧ್ಯಾತ್ಮಿಕ ಚಿಂತನೆ, ನಿರುದ್ಯೋಗಿಗಳಿಗೆ ಶುಭ ಸುದ್ದಿ, ಮಕ್ಕಳ ಅರೋಗ್ಯದಲ್ಲಿ ಎಚ್ಚರ
Next Article ಸಚಿವ ಡಿ.ಸುಧಾಕರ್ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು CHITRADURGA: ಕನ್ನಡಕ್ಕೆ ಚಿತ್ರದುರ್ಗ ಜಿಲ್ಲೆಯ ಕೊಡುಗೆ ಅಪಾರ | ಡಿ.ಸುಧಾಕರ್
Leave a Comment

Leave a Reply Cancel reply

Your email address will not be published. Required fields are marked *

ಅಪರ ಜಿಲ್ಲಾಧಿಕಾರಿಗೆ ರೈತರ ಮನವಿ
ರೈತರ ಕೃಷಿ ಪಂಪ್‍ಸೆಟ್‍ಗೆ ಸೋಲಾರ್ ಅಳವಡಿಕೆ | ಕಂಪನಿಯಿಂದ ಸಿವಿಲ್ ಕಾಮಗಾರಿ ಪೂರ್ಣಗೊಳಿಸಿ | ರೈತರ ಮನವಿ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
ಮಾರುಕಟ್ಟೆ ಧಾರಣೆ
ವಿಕಲಚೇತನರ ಜಿಲ್ಲಾಮಟ್ಟದ ಸಮಿತಿ ಸಭೆ
ನಕಲಿ ವಿಕಲಚೇತನರ ಪ್ರಮಾಣಪತ್ರ ಪಡೆದವರ, ನೀಡಿದ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ | ADC ಬಿ.ಟಿ.ಕುಮಾರಸ್ವಾಮಿ
ಮುಖ್ಯ ಸುದ್ದಿ
ಸಿಬಿಎಸ್‌ಇ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿ ಅಭಿನಂದಿಸಿದರು
ಸಿಬಿಎಸ್‌ಇ ಫಲಿತಾಂಶದಲ್ಲಿ ಎಸ್‌ಆರ್‌ಎಸ್‌ ವಿದ್ಯಾರ್ಥಿಗಳ ಸಾಧನೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up