By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಭೂಮಿ ಪೂಜೆ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಭೂಮಿ ಪೂಜೆ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಮುಖ್ಯ ಸುದ್ದಿ

ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಭೂಮಿ ಪೂಜೆ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

News Desk Chitradurga News
Last updated: 17 May 2025 19:25
News Desk Chitradurga News
4 weeks ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 17 MAY 2025

ಚಿತ್ರದುರ್ಗ: ಚಿತ್ರದುರ್ಗ ನಗರಸಭೆಯ ಘನತ್ಯಾಜ್ಯ ವಸ್ತು ವಿಲೇವಾರಿ ಘಟಕ ನಿರ್ಮಾಣ ಹಾಗೂ ವಾರ್ಡ್ ನಂ. 35 ರಲ್ಲಿನ ವಿವಿಧ ಮೂಲಭೂತ ಸೌಕರ್ಯ ನಿರ್ಮಾಣದ ಕಾಮಗಾರಿಗಳಿಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಶನಿವಾರದಂದು ಚಾಲನೆ ನೀಡಿದರು.

Also Read: 1001 ಆಶ್ರಯ ಮನೆ ನಿರ್ಮಾಣ | ಕಾಮಗಾರಿ ಪರಿಶೀಲಿಸಿದ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) | ತ್ವರಿತ ನಿರ್ಮಾಣಕ್ಕೆ ತಾಕೀತು

ನಗರಸಭೆಯ ಘನತ್ಯಾಜ್ಯ ವಸ್ತು ವಿಲೇವಾರಿ ಘಟಕದಲ್ಲಿ 3.22 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಒಣ ತ್ಯಾಜ್ಯ ಸಂಸ್ಕರಣಾ ಘಟಕದ M.R.F (Material Recovery Fascility) ಕಾಮಗಾರಿಗೆ ಶಾಸಕ ವೀರೇಂದ್ರ ಪಪ್ಪಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಒಣ ತ್ಯಾಜ್ಯ ವಸ್ತು ಸಂಸ್ಕರಣೆ ಘಟಕ ನಿರ್ಮಾಣವಾದ ನಂತರ, ಪ್ರತಿ ದಿನ ನಗರ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಒಣ ತ್ಯಾಜ್ಯದಲ್ಲಿ ಮರು ಬಳಕೆ ವಸ್ತುಗಳಾದ ಪ್ಲಾಸ್ಟಿಕ್ ಕವರ್, ನ್ಯೂಸ್ ಪೇಪರ್, ಪ್ಲಾಸ್ಟಿಕ್ ಬಾಟಲ್, ರಟ್ಟು ಕ್ಯಾನ್, ಲೋಹದ ವಸ್ತುಗಳು ಇತ್ಯಾದಿಗಳನ್ನು 20 ಹೆಚ್ಚು ವಿಧವಾಗಿ ಇಲ್ಲಿ ವಿಂಗಡಿಸಲಾಗುವುದು.

ಪ್ರಸ್ತುತ ಘನತ್ಯಾಜ್ಯ ವಸ್ತು ವಿಲೇವಾರಿ ಘಟಕದಲ್ಲಿ ಸುಮಾರು 20 ವರ್ಷಗಳಿಂದ ಶೇಖರಣೆಯಾಗಿರುವ ಅಂದಾಜು 90 ಸಾವಿರ ಟನ್ ಗಳಷ್ಟು ತ್ಯಾಜ್ಯವನ್ನು ಸಂಸ್ಕರಿಸಿ ವಿಲೇವಾರಿ ಮಾಡಲು ರೂ.755 ಲಕ್ಷಗಳಿಗೆ ಟೆಂಡರ್ ಕರೆದಿದ್ದು, ಅನುಮೋದನೆಯ ಹಂತದಲ್ಲಿರುತ್ತದೆ.

Also Read: ಭೀಕರ ಅಪಘಾತ | ಸ್ಥಳದಲ್ಲೇ ನಾಲ್ಕು‌ ಜನ ಸಾವು | ಕಾರು ಟ್ರ್ಯಾಕ್ಟರ್ ನಡುವೆ ಡಿಕ್ಕಿ

ಅನುಮೋದನೆಯ ನಂತರ ಈಗಾಗಲೇ ಸಂಗ್ರಹವಾಗಿರುವ ಘನತ್ಯಾಜ್ಯ ಒಂದು ವರ್ಷದಲ್ಲಿ ವಿಲೇಗೊಳಿಸಲಾಗುವುದು. ಇದರಿಂದ ಈಗಾಗಲೇ ಸಂಗ್ರಹವಾಗಿರುವ ಸುಮಾರು 10 ಎಕರೆಯಷ್ಟು ಜಾಗ ಮರು ಉಪಯೋಗಕ್ಕೆ ಬಳಸಬಹುದಾಗಿದೆ.

ಒಣ ತ್ಯಾಜ್ಯ ವಸ್ತು ವಿಲೇವಾರಿ ಘಟಕ ಪ್ರಾರಂಭವಾದ ನಂತರ ತ್ಯಾಜ್ಯವು ಶೇಖರಣೆಯಾಗದಂತೆ ಸಂಪೂರ್ಣವಾಗಿ ವಿಂಗಡಿಸಿ ಸಂಸ್ಕರಿಸಿ ಪರಿಸರ ಮಾಲಿನ್ಯವಾಗದಂತೆ ವಿಲೇವಾರಿ ಮಾಡಲಾಗುವುದು ಎಂದು ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಜೆ. ಜಾಫರ್ ಸಾಬ್ ಇವರು ಶಾಸಕರಿಗೆ ಮಾಹಿತಿ ನೀಡಿದರು.

ಬಳಿಕ, 2023- 24 ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅನುದಾನದ ಸುಮಾರು 50 ಲಕ್ಷ ರೂ.ಗಳ ಅನುದಾನದಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಉದ್ದೇಶದಿಂದ ಅನುಮೋದನೆಯಾದ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ವಾರ್ಡ್ ನಂಬರ್ 35ರಲ್ಲಿ ಶಾಸಕ ವೀರೇಂದ್ರ ಪಪ್ಪಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.

Also Read: ಮೊಸರನ್ನು ಪ್ರತಿದಿನ ಮುಖಕ್ಕೆ ಹಚ್ಚಿದರೆ ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ

ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಪೌರಾಯುಕ್ತೆ ಎಂ.ರೇಣುಕಾ, ನಗರಸಭೆ ಸದಸ್ಯ ಹೆಚ್.ಎನ್.ಮಂಜುನಾಥ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರಾಜು, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ನಸ್ರುಲ್ಲಾ, ನಗರಸಭೆ ಸದಸ್ಯರುಗಳಾದ ಎಸ್. ಭಾಸ್ಕರ್ ರವರು, ತಾರಕೇಶ್ವರಿ, ಗೋಪ್ಪೆ ಮಂಜುನಾಥ, ಮೊಹಮ್ಮದ್ ದಾವುದ್, ಎಸ್ ಜಯಪ್ಪ ಹಾಗೂ ನಾಮ ನಿರ್ದೇಶಿತ ಸದಸ್ಯ ಶಬ್ಬೀರ್ ಸೇರಿದಂತೆ ನಗರಸಭೆಯ ಸಿಬ್ಬಂದಿ ವರ್ಗದವರು ಹಾಗೂ ಸ್ಥಳೀಯ ಸಾರ್ವಜನಿಕರು ಹಾಜರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesCity CouncilDevelopmentKannada Latest NewsKannada NewsMLA KC VirendraSolid WasteWorksಅಭಿವೃದ್ಧಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕಾಮಗಾರಿಘನತ್ಯಾಜ್ಯಚಿತ್ರದುರ್ಗಚಿತ್ರದುರ್ಗ ನ್ಯೂಸ್ನಗರಸಭೆಶಾಸಕ ಕೆ.ಸಿ.ವೀರೇಂದ್ರ
Share This Article
Facebook Email Print
Previous Article ತುರುವನೂರು ರಸ್ತೆಯ ನೂತನ ಬೆಸ್ಕಾಂ ಕಚೇರಿ | ಸಚಿವ ಡಿ.ಸುಧಾಕರ್ ಉದ್ಘಾಟನೆ
Next Article ಒಂದು ವಾರದೊಳಗೆ ಚಿತ್ರದುರ್ಗ-ದಾವಣಗೆರೆ ರಸ್ತೆಯ ರೈಲ್ವೆ ಗೇಟ್‍ಗೆ ಟೆಂಡರ್ | ಸಚಿವ ವಿ.ಸೋಮಣ್ಣ ಸೂಚನೆ
Leave a Comment

Leave a Reply Cancel reply

Your email address will not be published. Required fields are marked *

ಋತುಚಕ್ರದ ಸಮಯದಲ್ಲಿ ತಣ್ಣನೆಯ ಆಹಾರವನ್ನು ಸೇವಿಸಿದರೆ ಏನಾಗುತ್ತದೆ ಗೊತ್ತಾ?
Life Style
ದೇಹದಲ್ಲಿ ಫೈಬರ್ ಅಂಶ ಹೆಚ್ಚಿಸಲು ಊಟ-ಉಪಾಹಾರದಲ್ಲಿ ಈ ಆಹಾರಗಳನ್ನು ಸೇರಿಸಿ
Life Style
today bhavishya
Astrology: ದಿನ ಭವಿಷ್ಯ | 13 ಜೂನ್ 2025 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
Dina Bhavishya
Shivananda patil meating
ಹೊಸದುರ್ಗದಲ್ಲಿ ಗಾರ್ಮೆಂಟ್ಸ್‌ | ಬೆಂಗಳೂರಿನಲ್ಲಿ ಸಭೆ ನಡೆಸಿದ ಸಚಿವ ಶಿವಾನಂದ ಪಾಟೀಲ್‌ | ಜವಳಿ ಪಾರ್ಕ್‌ ಸ್ಥಳ ನಿಗಧಿ
ಹೊಸದುರ್ಗ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up