BREAKING NEWS ಮುರುಘಾ ಶರಣರಿಗೆ ಬಿಗ್ ರಿಲೀಫ್ | ಬಿಡುಗಡೆಗೆ ಆದೇಶ | ಬಿಡುಗಡೆಗೆ ಆದೇಶ

ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಪೀಠಾಧಿಪತಿ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು

ಚಿತ್ರದುರ್ಗ ನ್ಯೂಸ್.ಕಾಂ: ಕಳೆದ 14 ತಿಂಗಳಿಂದ ಜಿಲ್ಲಾ ಕಾರಾಗೃಹದಲ್ಲಿದ್ದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ಬಿಡುಗಡೆಗೆ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.

ಮೊದಲ ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ಮಾಡಿದ್ದು, ಶ್ಯೂರಿಟಿಗಳ ಪರಿಶೀಲನೆ ನಂತರ ಬಿಡುಗಡೆಗೆ‌ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಕೆ.ಕೋಮಲ ಆದೇಶ ಮಾಡಿದರು.

ಮುರುಘಾ ಶರಣರ ಪರವಾಗಿ ಹೈಕೋರ್ಟ್ ನ್ಯಾಯವಾದಿ ಸಂದೀಪ್ ಪಾಟೀಲ್ ನ್ಯಾಯಾಲಯಕ್ಕೆ ಹಾಜರಾಗಿ ವಾದ ಮಂಡಿಸಿದರು‌.

ನ್ಯಾಯಾಲಯದ ಎಲ್ಲ ಪ್ರಕ್ರಿಯೆಗಳು ಮುಗಿದು ಕಾರಾಗೃಹಕ್ಕೆ ಆದೇಶ ಪ್ರತಿ ತಲುಪಿದರೆ ಶರಣರು ಇಂದೇ ಹೊರಗೆ ಬರಲಿದ್ದಾರೆ.

ನ್ಯಾಯಾಲಯದ ಕಲಾಪಗಳ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಂದೀಪ್ ಪಾಟೀಲ್, ಹೈಕೋರ್ಟ್ ಜಾಮೀನು ಆದೇಶದಂತೆ ಇಂದು ಮೊದಲನೇ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರಿಗೆ ಜಾಮೀನು ಮಂಜೂರಾಗಿದ್ದು, ಜಿಲ್ಲಾ ನ್ಯಾಯಾಲಯ ಬಿಡುಗಡೆ ಆಗಲಿದ್ದಾರೆ‌ ಎಂದು ತಿಳಿಸಿದರು.

ಇನ್ನೂ ಎರಡನೇ ಪ್ರಕರಣದಲ್ಲಿ ಅರೆಸ್ಟ್ ಅಥವಾ ಕಸ್ಟಡಿಗೆ ಹೋಗಿರಲಿಲ್ಲ. ಅದರಲ್ಲಿ ತನಿಖೆ ಮುಗಿದಿದೆ, ಚಾರ್ಜ್ ಶೀಟ್ ಹಾಕಲಾಗಿದೆ. ಆದರೂ, ಸರ್ಕಾರಿ ವಕೀಲರು ನ್ಯಾಯಾಂಗ ಬಂಧನಕ್ಕೆ ಕೇಳಿದ್ದರು.

ತನಿಖೆಯ ವ್ಯಾಪ್ತಿ ಮುಗಿದು ಹೋಗಿದೆ. ಬಾಡಿ ವಾರೆಂಟ್ (ಪ್ರೊಡಕ್ಷನ್ ಅಂಡ್ ಟ್ರಾನ್ಸಿಟ್) ಆದೇಶ ಇದ್ದರೂ ಅವರನ್ನು ಕಾರಾಗೃಹದಲ್ಲಿ ಇಡುವಂತಿಲ್ಲ ಎಂದು ಅಭಿಪ್ರಾಯಪಟ್ಟರು.

ಎರಡನೇ ಪ್ರಕರಣದ ತೊಡಕು: 

ಮೊದಲನೇ ಪ್ರಕರಣದಡಿ ಶ್ರೀಗಳು ಬಿಡುಗಡೆ ಆಗಲಿದ್ದಾರೆ. ಆದರೆ, ಸರ್ಕಾರಿ ವಕೀಲರು ಎರಡನೇ ಪೋಕ್ಸೋ ಪ್ರಕರಣದಡಿ ನ್ಯಾಯಾಂಗ ಬಂಧನಕ್ಕೆ ತೆಗೆದುಕೊಳ್ಳುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನ.16 ಅಂದರೆ ನಾಳೆ ವಿಚಾರಣೆಗೆ ಬರಲಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version