By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮುರುಘಾ ಶರಣರು RELIEF | ಬಂಧನವಾದ ಮೂರೇ ತಾಸಲ್ಲಿ ಬಿಡುಗಡೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮುರುಘಾ ಶರಣರು RELIEF | ಬಂಧನವಾದ ಮೂರೇ ತಾಸಲ್ಲಿ ಬಿಡುಗಡೆ

ಮುಖ್ಯ ಸುದ್ದಿ

ಮುರುಘಾ ಶರಣರು RELIEF | ಬಂಧನವಾದ ಮೂರೇ ತಾಸಲ್ಲಿ ಬಿಡುಗಡೆ

chitradurganews.com
Last updated: 20 November 2023 22:21
chitradurganews.com
2 years ago
Share
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ: ಬಂಧನವಾದ ಮೂರೇ ತಾಸಿನಲ್ಲಿ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು‌ ಜಿಲ್ಲಾ‌ ಕಾರಾಗೃಹದಿಂದ ಬಿಡುಗಡೆಯಾದರು.

ಎರಡನೇ ಪೋಕ್ಸೋ ಪ್ರಕರಣದ ವಿಚಾರಣೆ ನಡೆಸಿದ ಚಿತ್ರದುರ್ಗ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ‌ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ (Non bailable arrest warrant) ಹೊರಡಿಸಿತ್ತು.

ಇದನ್ನೂ ಓದಿ: ಮುರುಘಾಶ್ರೀ ಪ್ರಕರಣಕ್ಕೆ ಟ್ವಿಸ್ಟ್

ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ದಾವಣಗೆರೆ ವಿರಕ್ತ ಮಠದಲ್ಲಿ ತಂಗಿದ್ದ ಶ್ರೀಗಳನ್ನು ಮಧ್ಯಾಹ್ನ 3 ಗಂಟೆಗೆ ವಶಕ್ಕೆ ಪಡೆದು ಕರೆತಂದು‌ ಚಿತ್ರದುರ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ನ್ಯಾಯಾಲಯ ಡಿಸೆಂಬರ್ 2 ರವರೆಗೆ ಅಂದರೆ 14 ದಿನ ಕಾಲ ನ್ಯಾಯಾಂಗ‌ ಬಂಧನ ವಿಧಿಸಿ ಆದೇಶ ಹೊರಡಿಸಿತು.

ಈ ಆದೇಶ ಹೊರಬೀಳುತ್ತಲೇ ಅತ್ತ ಶರಣರ‌ ಪರ ವಕೀಲರು ಬೆಂಗಳೂರಿನಲ್ಲಿ ಹೈಕೋರ್ಟ್ ಕದ ತಟ್ಟಿದ್ದರು.

ಚಿತ್ರದುರ್ಗ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ‌ ನೀಡಿದ ಹೈಕೋರ್ಟ್ ತಕ್ಷಣ ಬಿಡುಗಡೆ ಮಾಡುವಂತೆ ತಿಳಿಸಿ, ಆದೇಶ ಪ್ರತಿಯನ್ನು‌ ಚಿತ್ರದುರ್ಗ ಜಿಲ್ಲಾ‌ ಕಾರಾಗೃಹಕ್ಕೆ ಮೇಲ್ ಮೂಲಕ ಕಳಿಸುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಗೆ ಸೂಚಿಸಿತ್ತು.

ಇದನ್ನೂ ಓದಿ: ನ್ಯಾಯಾಂಗ ಬಂಧನ ಆದೇಶಕ್ಕೆ ಹೈಕೋರ್ಟ್ ಅಸಮಾಧಾನ

ಸಂಜೆ 7.30ಕ್ಕೆ e-mail ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಆದೇಶ ಯಲುಪಿದ್ದು, ರಾತ್ರಿ 8.35ಕ್ಕೆ ಶ್ರೀಗಳು ಜೈಲಿನಿಂದ ಹೊರಗೆ ಬಂದರು.‌‌ ಈ ವೇಳೆ ಹೊರಗಿದ್ದ ಭಕ್ತರ ಕಾರಿನಲ್ಲಿ ದಾವಣಗೆರೆಯ ವಿರಕ್ತ‌ ಮಠಕ್ಕೆ ಕರೆದಯ್ಯಲಾಯಿತು.

ಸೋಮವಾರ ಇಡೀ‌ ದಿನ  ಶರಣರ ಪ್ರಕರಣದಲ್ಲಿ ಹಲವು‌ ಮಹತ್ವದ ಘಟನೆಗಳು ನಡೆದವು.

ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದ ನಾಲ್ಕೇ ದಿನಗಳಲ್ಲಿ ಇಂದು ಮತ್ತೆ ಬಂಧನ ವಾರೆಂಟ್ ಹೊರಡಿಸಿದ್ದರಿಂದ ಮತ್ತೆ ಆತಂಕಕ್ಕೆ ಒಳಗಾಗಿದ್ದರು. ಆದರೆ, ಹೈಕೋರ್ಟ್ ಆದೇಶ ಶರಣರ ಪಾಲಿಗೆ ಸಂಜೀವಿನಿಯಾಗಿದ್ದಂತೂ ಸತ್ಯ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ArrestChitradurgaChitradurga PolicehighcourtmurughashreeReleaseಚಿತ್ರದುರ್ಗಪೊಲೀಸ್ಬಂಧನಬಿಡುಗಡೆಮುರುಘಾಶ್ರೀಹೈಕೋರ್ಟ್‌
Share This Article
Facebook Email Print
Previous Article ಶಿವಮೂರ್ತಿ ಮುರುಘಾ ಶರಣರು BREAKING NEWS ಮತ್ತೆ ಮುರುಘಾ ಶರಣರ ಬಂಧನ | ದಾವಣಗೆರೆಯ ವಿರಕ್ತ ಮಠದಲ್ಲಿ ಬಂಧಿಸಿದ ಚಿತ್ರದುರ್ಗ ಪೊಲೀಸರು
Next Article ಎಸ್‍ಆರ್‍ಎಸ್ ಯುವತರಂಗ SRS ಯುವತರಂಗ | ನಾಳೆಯಿಂದ ಸಾಂಸ್ಕೃತಿಕ ಮಹಾ ಸಮ್ಮೇಳನ | ಪ್ರತಿಭೆಗಳ ಝೇಂಕಾರ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up