Connect with us

    ನಿಯಂತ್ರಣ ತಪ್ಪಿದ ಬೈಕ್ | ಸವಾರ ಮೃತ

    Image used for representational purpose only

    ಹೊಳಲ್ಕೆರೆ

    ನಿಯಂತ್ರಣ ತಪ್ಪಿದ ಬೈಕ್ | ಸವಾರ ಮೃತ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 17 JANUARY 2024
    ಚಿತ್ರದುರ್ಗ (CHITRADURGA): ಹೆದ್ದಾರಿಯಲ್ಲಿ ಸವಾರನ ನಿಯಂತ್ರಣ ಕಳೆದುಕೊಂಡ ಬೈಕ್‌ ಸ್ಕಿಡ್‌ ಆಗಿ ಬಿದ್ದ ಪರಿಣಾಮ ಸವಾರ ಮೃತಪಟ್ಟಿದ್ದಾನೆ.

    ಚನ್ನಗಿರಿ ತಾಲ್ಲೂಕಿನ ಹೆಬ್ಬಳಗೆರೆ ಗ್ರಾಮಕ್ಕೆ ಸಮೀಪದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಬೈಕ್ ಅಪಘಾತವಾಗಿದೆ. ಈ ವೇಲೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಕೆಂಗುಂಟೆ ಗ್ರಾಮದ ವಾಸಿ ಹರೀಶ್ ಕುಮಾರ್ (48) ಮೃತಪಟ್ಟವರು. ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಪದ್ಮನಾಭ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ.

    ಇದನ್ನೂ ಓದಿ: ಲೋಕಸಭೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ | ಬೆಳೆ ವಿಮೆ, ಬೆಳೆ ಪರಿಹಾರಕ್ಕೆ ಆಗ್ರಹ

    ಭದ್ರಾವತಿಯಿಂದ ಕೆಂಗುಂಟೆ ಗ್ರಾಮಕ್ಕೆ ಬೈಕ್‌ನಲ್ಲಿ ಹರೀಶ್ ಕುಮಾರ್, ಪದ್ಮನಾಭ ತೆರಳುತ್ತಿದ್ದರು. ಈ ವೇಳೆ ಹೆಬ್ಬಳಗೆರೆ ಗ್ರಾಮದ ಹೆದ್ದಾರಿಯಲ್ಲಿ ಸವಾರನ ನಿಯಂತ್ರಣ ತಪ್ಪಿದ ಬೈಕ್ ಸ್ಕಿಡ್ ಆಗಿದೆ.

    ಇದನ್ನೂ ಓದಿ: ಕರಡಿಗಳ ಮುದ್ದಾದ ಗುದ್ದಾಟ ನೊಡಿದ್ದೀರಾ | ಇಲ್ಲಿದೆ ನೋಡಿ ಸುದ್ದಿ ಮತ್ತು ವಿಡಿಯೋ

    ಕ್ಷಣ ಮಾತ್ರದಲ್ಲೇ ಇಬ್ಬರು ರಸ್ತೆಗೆ ಬಿದ್ದಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಹರೀಶ್ ಕುಮಾರ್ ಮೃತಪಟ್ಟಿದ್ದಾರೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click to comment

    Leave a Reply

    Your email address will not be published. Required fields are marked *

    More in ಹೊಳಲ್ಕೆರೆ

    To Top