ಹಿರಿಯೂರು
ಲಂಚಕ್ಕೆ ಬೇಡಿಕೆ | ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Published on
CHITRADURGA NEWS | 14 JANUARY 2024
ಹಿರಿಯೂರು: ಇಂದಿರಾ ಆವಾಸ್ ಯೋಜನೆಯಡಿ ಮಂಜೂರಾಗಿದ್ದ ಮನೆಯ ಬಿಲ್ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಬಿಲ್ ಕಲೆಕ್ಟರ್ ಅನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಹಿರಿಯೂರು ತಾಲೂಕು ಹೊಸಯಳನಾಡು ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಆನಂದ್ ಬಂಧಿತ ಆರೋಪಿ.
ಹಿರಿಯೂರು ತಾಲೂಕಿನ ಆಲೂರು ಗ್ರಾಮದ ಪಾಂಡುರಂಗಪ್ಪ ಎಂಬುವವರು ನೀಡಿದ ದೂರಿನ ಆಧಾರದಲ್ಲಿ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಇದನ್ನೂ ಓದಿ: ತಿಂಗಳಾಂತ್ಯಕ್ಕೆ ಕೋಟೆನಾಡಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ದೂರುದಾರ ಪಾಂಡುರಂಗಪ್ಪ ಅವರಿಗೆ ಇಂದಿರಾ ಆವಾಸ್ ಯೋಜನೆಯಡಿ ಮಂಜೂರಾಗಿದ್ದ ಮನೆಗೆ ಬಿಲ್ ಮಂಜೂರು ಮಾಡಲು 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಈ ಹಣ ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ.
ಲೋಕಾಯುಕ್ತ ಎಸ್ಪಿ ವಾಸುದೇವರಾವ್, ಡಿವೈಎಸ್ಪಿ ಮೃತ್ಯಂಜಯ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಆರೋಪಿ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
Continue Reading
Related Topics:Bandhan, Bill Collector, Chitradurga, Hiriyur, Lokayukta, ಚಿತ್ರದುರ್ಗ, ಬಂಧನ, ಬಿಲ್ ಕಲೆಕ್ಟರ್, ಲೋಕಾಯುಕ್ತ, ಹಿರಿಯೂರು

Click to comment