By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಹಕ್ಕಿ ಜ್ವರ ಭೀತಿ | ಮುನ್ನೆಚ್ಚರಿಕೆ ಕ್ರಮಕ್ಕೆ ADC ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಹಕ್ಕಿ ಜ್ವರ ಭೀತಿ | ಮುನ್ನೆಚ್ಚರಿಕೆ ಕ್ರಮಕ್ಕೆ ADC ಸೂಚನೆ

ಮುಖ್ಯ ಸುದ್ದಿ

ಹಕ್ಕಿ ಜ್ವರ ಭೀತಿ | ಮುನ್ನೆಚ್ಚರಿಕೆ ಕ್ರಮಕ್ಕೆ ADC ಸೂಚನೆ

News Desk Chitradurga News
Last updated: 10 March 2025 18:49
News Desk Chitradurga News
4 months ago
Share
ತುರ್ತು ನಿರ್ವಹಣಾ ಸಮಿತಿ ಸಭೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 10 MARCH 2025

ಚಿತ್ರದುರ್ಗ: ಜಿಲ್ಲೆಯಲ್ಲಿ ಹಕ್ಕಿಜ್ವರದ ಯಾವುದೇ ಪ್ರಕರಣಗಳು ಇದುವರೆಗೂ ವರದಿಯಾಗಿಲ್ಲ, ಹೀಗಾಗಿ ಯಾವುದೇ ಆತಂಕ ಪಡುವ ಅಗತ್ಯವಿರುವುದಿಲ್ಲ. ಆದಾಗ್ಯೂ ಹಕ್ಕಿ ಜ್ವರ ಬಾರದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Also Read: ಅಡಿಕೆ ಧಾರಣೆ | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಪ್ರಾಣಿಜನ್ಯ ರೋಗಗಳ ತುರ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಹಕ್ಕಿಜ್ವರದ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಆದಾಗ್ಯೂ ಹಕ್ಕಿಜ್ವರ ತಡೆಗಾಗಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳು ಅಗತ್ಯ ಸಹಕಾರ ನೀಡಲಿದ್ದು, ಈಗಾಗಲೇ ರ್ಯಾಪಿಡ್ ರೆಸ್ಪಾನ್ಸ್ ತಂಡ ಸ್ಥಾಪಿಸಲಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಹಕ್ಕು ಜ್ವರ ಇರುವುದು ಖಚಿತಪಟ್ಟಿದ್ದು, ಜಿಲ್ಲೆಗೆ ವಿವಿಧ ಜಿಲ್ಲೆ ಹಾಗೂ ರಾಜ್ಯಗಳಿಂದಲೂ ಕೋಳಿ ಸಾಗಾಣಿಕೆ ಇದೆ. ಹೀಗಾಗಿ ಗಡಿ ಪ್ರದೇಶದಲ್ಲಿ ಈಗಾಗಲೆ ಸ್ಥಾಪಿಸಲಾಗಿರುವ ಚೆಕ್‍ಪೋಸ್ಟ್‍ಗಳಲ್ಲಿ ಸೂಕ್ತ ನಿಗಾ ವಹಿಸಬೇಕು.

Also Read: ವಾಹನ ಡಿಕ್ಕಿ | ಹೆದ್ದಾರಿ ದಾಟುತ್ತಿದ್ದ ಚಿರತೆ ಸಾವು

ಕೋಳಿಫಾರಂಗಳಿಗೆ ಪಶುವೈದ್ಯಾಧಿಕಾರಿಗಳ ತಂಡ ನಿಯಮಿತವಾಗಿ ಭೇಟಿ ನೀಡಿ, ಸ್ವಚ್ಛತೆ ನಿರ್ವಹಣೆಗೆ ಸೂಚನೆ ನೀಡುವಂತೆ ತಿಳಿಸಿದರು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಹಾಗೂ ಉದ್ಯಮಿದಾರರಿಗೆ ಆರೋಗ್ಯ ನಿರೀಕ್ಷಕರು ಹಕ್ಕಿಜ್ವರದ ಕುರಿತು ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ತಾಕೀತು ಮಾಡಿದರು.

ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಚಿಕನ್ ಮಾರಾಟ ಮಾಡುವ ಸ್ಟಾಲ್‍ಗಳಲ್ಲಿ ಅನೈರ್ಮಲ್ಯ ಇರುವ ಬಗ್ಗೆ ಬಹಳಷ್ಟು ದೂರುಗಳಿವೆ. ಹೀಗಾಗಿ ಆಯಾ ನಗರ, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ಪರಿಸರ ಅಭಿಯಂತರರು ಚಿಕನ್ ಸ್ಟಾಲ್‍ಗಳಿಗೆ ಭೇಟಿ ನೀಡಿ, ಮಳಿಗೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡಬೇಕು, ಹಾಗೂ ತ್ಯಾಜ್ಯವನ್ನು ಸಮರ್ಪಕವಾಗಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸೂಕ್ತ ತಿಳುವಳಿಕೆ ನೀಡಬೇಕು, ಆದಾಗ್ಯೂ ಸ್ವಚ್ಛತೆ ಪಾಲನೆ ಮಾಡದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

Also Read: APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?

ಪಶುಪಾಲನಾ ಮತ್ತು ಪಶುವೈದ್ಯಕಿಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಕುಮಾರ್ ಮಾತನಾಡಿ, ಹಕ್ಕಿಜ್ವರವು ಸಾಂಕ್ರಾಮಿಕ ರೋಗವಾಗಿದ್ದು, ಎವಿಯನ್ ಇನ್ ಪ್ಲೂ-ಎಂಜಾ ಎಂಬ ವೈರಾಣುವಿನಿಂದ ಬರುತ್ತದೆ.

ನಾಟಿಕೋಳಿ, ಫಾರಂ ಕೋಳಿ, ಟರ್ಕಿ ಕೋಳಿ, ಕೌಜುಗನ ಹಕ್ಕಿ, ನವಿಲು ಹಕ್ಕಿ, ಬಾತುಕೋಳಿ, ಹಂಸ ಪಕ್ಷಿ ಇತ್ಯಾದಿ ಎಲ್ಲಾ ಹಕ್ಕಿ ಪ್ರಬೇಧಗಳಲ್ಲಿ ಕಂಡುಬರುತ್ತದೆ ಎಂದು ತಿಳಿಸಿದ ಅವರು, ಕೋಳಿ, ಪಕ್ಷಿಗಳಲ್ಲಿ ಹಠಾತ್ ಸಾವು, ಅಸಾಧರಣ ಸಾವು, ಸತ್ತ ಕೋಳಿಗಳ ಮೂಗು, ಬಾಯಿ ಮತ್ತು ಕಣ್ಣಿನಿಂದ ನೀರು ಸುರಿಯುವುದು, ಕೋಳಿಗಳ ಮೊಣಕಾಲು ಮತ್ತು ಪಾದಗಳು ನೀಲಿ ಬಣ್ಣಕ್ಕೆ ತಿರುವುದು ಇದರ ರೋಗ ಲಕ್ಷಣವಾಗಿದೆ ಎಂದು ತಿಳಿಸಿದರು.

 ಹೆಚ್ಚಿನ ಸಂಖ್ಯೆಯಲ್ಲಿ ಕೋಳಿಗಳು ಅಸಹಜ ಸಾವನ್ನಪ್ಪಿದರೆ ಸಂಬಂಧಿಸಿದ ಕೋಳಿ ಸಾಕಾಣಿಕೆದಾರರು, ರೈತರು, ತಕ್ಷಣವೇ ಪಶುವೈದ್ಯರು, ಸಿಬ್ಬಂದಿಯವರ ಗಮನಕ್ಕೆ ತರಬೇಕು. ರೋಗನಿಯಂತ್ರಣ ಹಾಗೂ ಆರೋಗ್ಯ ರಕ್ಷಣೆ ಹಿತದೃಷ್ಠಿಯಿಂದ ಕೋಳಿಫಾರಂಗಳಿಗೆ ಅನುಮತಿ ಇಲ್ಲದೇ ಪ್ರವೇಶಿಸಬಾರದು.

ಕೆರೆ, ಕಟ್ಟೆ, ನೀರಿನ ತೊರೆ, ನದಿ ಮತ್ತು ಇತರೆ ನೀರಿನ ಜಾಗಕ್ಕೆ ವಲಸೆ ಬರುವ, ಅಲ್ಲಿಯೇ ವಾಸಿಸುವ ಹಕ್ಕಿ, ಪಕ್ಷಿಗಳು ಅಸಹಜವಾಗಿ ಸತ್ತರೆ ತಕ್ಷಣವೇ ಪಶುವೈದ್ಯಕೀಯ ಗಮನಕ್ಕೆ ತರಬೇಕು.

Also Read: ಗಾಂಧಿ ವೃತ್ತದಲ್ಲಿ ಕಟ್ಟಡ ತೆರವು ಕಾರ್ಯಾಚರಣೆ | ನೊಡಲು ಜನವೋ ಜನ

ಕೋಳಿ ಮತ್ತು ಕೋಳಿ ಉತ್ಪನ್ನಗಳನ್ನು ಮುಟ್ಟಿದಲ್ಲಿ ಸೋಪಿನಿಂದ ಕೈ ತೊಳೆದು ಸ್ವಚ್ಛತೆ ಕಾಯ್ದುಕೊಳ್ಳಬೇಕು. ಚಿಕನ್ ಅನ್ನು 70 ಡಿಗ್ರಿ ಸೆಂಟಿಗ್ರೇಡ್‍ನಲ್ಲಿ 10 ನಿಮಿಷ ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಬೇಯಿಸಿಯೇ ಸೇವಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ 337 ಕೋಳಿ ಫಾರಂಗಳು ಇದ್ದು, ಮಾಂಸದ ಕೋಳಿಗಳು ಮತ್ತು ಮೊಟ್ಟೆ ಕೋಳಿ ಸೇರಿದಂತೆ ಒಟ್ಟು 60.37 ಲಕ್ಷ ಕೋಳಿಗಳಿವೆ. ಸುಮಾರು 9 ಲಕ್ಷ ನಾಟಿ ಕೋಳಿಗಳು ಇವೆ. ಇದರಲ್ಲಿ ಅತಿ ಹೆಚ್ಚು ಮೊಳಕಾಲ್ಮೂರು ತಾಲ್ಲೂಕು ಒಂದರಲ್ಲೇ ಸುಮಾರು 34 ಲಕ್ಷ ಕೋಳಿಗಳು ಇವೆ.

ಹಕ್ಕಿಜ್ವರ ತಡೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಸಂಪರ್ಕಿಸುವ ಚಳ್ಳಕೆರೆ ತಾಲ್ಲೂಕಿನ ನಾಗಪ್ಪನಹಳ್ಳಿ ಗೇಟ್, ಹಿರಿಯೂರು ತಾಲ್ಲೂಕಿನ ಪಿ.ಡಿ.ಕೋಟೆ ಹಾಗೂ ಮೊಳಕಾಲ್ಮುರು ತಾಲ್ಲೂಕಿನ ಎದ್ದಲ್ಲಬೋಮ್ಮನಹಟ್ಟಿಯಲ್ಲಿ ಕೋಶಿ ಶೀತಜ್ವರ ರೋಗೋದ್ರೇಕ ಚೆಕ್‍ಪೋಸ್ಟ್‍ಗಳ ಸ್ಥಾಪಿಸಿ, ಪಶುವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಿ, ದಿನನಿತ್ಯವೂ ಕೋಳಿ, ಕೋಳಿ ಮೊಟ್ಟೆ, ಕೋಳಿ ಆಹಾರ ತಪಾಸಣೆ ನಡೆಸಲಾಗುತ್ತಿದೆ.

Also Read: ಔಡಲ ಚಿಗುರು ತಿಂದ 86 ಕುರಿ ಸಾವು

ಕೋಳಿ ಫಾರಂ ಮಾಲೀಕರು ತಮ್ಮ ಫಾರಂ ಪ್ರದೇಶವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು ಹಾಗೂ ನಿಯಮಿತವಾಗಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು. ಒಡೆದುಹೋದ ಕೋಳಿ ಮೊಟ್ಟೆ ಹಾಗೂ ಸತ್ತ ಕೋಳಿಯನ್ನು ಸುಡಬೇಕು.

ಫಾರಂ ಮೇಲಿನ ಕೋಳಿ, ಕೋಳಿ ಆಹಾರ, ಕುಡಿಯುವ ನೀರಿನ ಸಂಪರ್ಕಕ್ಕೆ ಬಾರದಂತೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಹಕ್ಕಿ ಜ್ವರ ಪ್ರಕರಣ ವರದಿಯಾಗಿಲ್ಲ, ಆದಾಗ್ಯೂ ಯಾವುದೇ ಪರಿಸ್ಥಿತಿ ಎದುರಿಸಲು ಪಿಪಿಇ ಕಿಟ್, ಸುರಕ್ಷಾ ಕನ್ನಡಕ, ಔಷಧಿಗಳು ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಟ್ಟುಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಚಂದ್ರಶೇಖರ ಕಂಬಾಳಿಮಠ್ ಅವರು ಮಾತನಾಡಿ, ಹಕ್ಕಿಜ್ವರದ ಕಾರಣದಿಂದ ಸೋಂಕಿಗೆ ಒಳಗಾಗುವ ಮನುಷ್ಯರಲ್ಲಿ ನೆಗಡಿ, ಜ್ವರ, ಕೆಮ್ಮು ಹಾಗೂ ಭೇದಿ ಉಂಟಾಗುವ ರೋಗ ಲಕ್ಷಣಗಳು ಕಂಡುಬರುತ್ತವೆ. ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ರೋಗವಲ್ಲ. ಈ ಕುರಿತು ಈಗಾಗಲೆ ಜಿಲ್ಲೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಆರೋಗ್ಯ ಇಲಾಖೆ ಕೈಗೊಂಡಿದೆ ಎಂದರು.

ಇದೇ ಸಂದರ್ಭದಲ್ಲಿ ಕೋಳಿ ಶೀತ ಜ್ವರ, ಹಕ್ಕಿಜ್ವರದ ಮುಂಜಾಗ್ರತಾ ಕ್ರಮಗಳ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.

Also Read: ಭೀಕರ ಅಪಘಾತ | ಐದು ಜನ ಸ್ಥಳದಲ್ಲೇ ಸಾವು | ತಮಟಕಲ್ಲು ಬಳಿ ಘಟನೆ

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಂದ್ರಶೇಖರ್ ಕಂಬಾಳಿಮಠ, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಘೆ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಸೇರಿದಂತೆ ಪಶುಪಾಲನಾ ಮತ್ತು ಪಶೈವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ADC KumaraswamyBellaryBird fluchickenChitradurgaChitradurga newsChitradurga UpdatesKannada Latest NewsKannada Newsprecautionary measuresStateಎಡಿಸಿ ಕುಮಾರಸ್ವಾಮಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೋಳಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಳ್ಳಾರಿಮುನ್ನೆಚ್ಚರಿಕೆ ಕ್ರಮರಾಜ್ಯಹಕ್ಕಿ ಜ್ವರ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
Next Article ಗ್ರೇಡ್-1 ದೈಹಿಕ ಶಿಕ್ಷಕರ ಸಂಘದ ಚುನಾವಣೆ | ಅಧ್ಯಕ್ಷರಾಗಿ ಪಾಲವ್ವನಹಳ್ಳಿ ಮಂಜುನಾಥ ಆಯ್ಕೆ
Leave a Comment

Leave a Reply Cancel reply

Your email address will not be published. Required fields are marked *

ಬೆಳೆ ಸಮೀಕ್ಷೆ | ರೈತರೇ Mobile App ಮೂಲಕ ಮಾಹಿತಿ ಅಪ್‍ಲೋಡ್ ಮಾಡಬಹುದು | ಅದು ಹೇಗೆ ಎಂದು ತಿಳಿಯಿರಿ 
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜುಲೈ 1 | ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
ರಕ್ತದಾನದಿಂದ ಆರೋಗ್ಯ ವೃದ್ಧಿ | ಎಂ.ಕೆ.ರವೀಂದ್ರ
ಮುಖ್ಯ ಸುದ್ದಿ
SSLC ಪರೀಕ್ಷೆ-3 | ಜುಲೈ 5 ರಿಂದ ಆರಂಭ | ಜಿಲ್ಲೆಯಲ್ಲಿ 24 ಪರೀಕ್ಷಾ ಕೇಂದ್ರ | 7453 ವಿದ್ಯಾರ್ಥಿಗಳು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up