CHITRADURGA NEWS | 15 NOVEMBER 2025
ಚಿತ್ರದುರ್ಗ: ಬ್ರಿಟೀಷರ ಸಾಮ್ರಾಜ್ಯಶಾಹಿ ವಿರುದ್ದ ಹೋರಾಡಿ ಅಮರನಾದ ಬಿರ್ಸಾ ಮುಂಡಾ ದೇಶದ ಆದಿವಾಸಿ ಬುಡಕಟ್ಟುಗಳ ಆತ್ಮಾಭಿಮಾನದ ಪ್ರತೀಕ ಎಂದು ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಹೇಳಿದರು.
ಇದನ್ನೂ ಓದಿ: ದನಗಳಿಲ್ಲದ ಕೃಷಿಯಿಂದ ಆರೋಗ್ಯ ಉಳಿಯುವುದಿಲ್ಲ | ಪುಟ್ಟಸ್ವಾಮಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಶನಿವಾರ ನಗರದ ವಾಲ್ಮೀಕಿ ಭವನದಲ್ಲಿ ಬಿರ್ಸಾ ಮುಂಡಾ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇಶದ ಪ್ರಾಕೃತಿಕ ಸಂಪತ್ತಿನ ಮೇಲೆ ಒಡೆತನ ಸಾಧಿಸಲು ಬ್ರಿಟೀಷರು ಪ್ರಯತ್ನಿಸಿದಾಗ, ಬಿರ್ಸಾ ಮುಂಡಾ ಅವರ ವಿರುದ್ದ ದಂಗೆ ಎದ್ದು, ಪ್ರಕೃತಿಯನ್ನು ರಕ್ಷಿಸುವ ಹೋರಾಟದಲ್ಲಿ ಹುತಾತ್ಮನಾದ. ಕೇವಲ 25 ವರ್ಷ ಬದುಕಿದ್ದ ಬಿರ್ಸಾ ಮುಂಡಾ ಅವರ ಹೋರಾಟದ ಕಥೆ ಕೇಳಿದರೆ ನಮಗೆ ರೋಮಾಂಚನವಾಗುತ್ತಿದೆ. ಸಾಧನೆಗೆ ವಯಸ್ಸು ಮುಖ್ಯವಲ್ಲ ಎಂಬುದನ್ನು ತೋರಿಸುತ್ತದೆ ಎಂದು ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ತಿಳಿಸಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರನಾಥ್ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ, ದೇಶದ ಬುಡಕಟ್ಟು ಜನರ ಮೇಲೆ ಬ್ರಿಟೀಷ್ ಸಾಮ್ರಾಜ್ಯಶಾಹಿಗಳು, ಧರ್ಮ ಪ್ರಚಾರಕರ ದಬ್ಬಾಳಿಕೆ ಹಾಗೂ ಯಜಮಾನಿಕೆಯನ್ನು ಬಿರ್ಸಾ ಮುಂಡಾ ದಿಟ್ಟತನದಿಂದ ಎದುರಿಸಿದ. ಬುಡಕಟ್ಟು ಜನರಲ್ಲಿ ಇದ್ದ ಮೂಢ ನಂಬಿಕೆಯನ್ನು ತೊಡೆದು ಹಾಕಿದ ಅವರು, ತನ್ನನ್ನು ತಾನು ದೇವರ ಅವತಾರ ಎಂದು ಘೋಷಿಸಿಕೊಂಡಿದ್ದರು.
ಇದನ್ನೂ ಓದಿ: ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಸಸಿ ನೆಟ್ಟು ಶ್ರದ್ಧಾಂಜಲಿ ಸೂಚನೆ
ಜನರು ಬಿರ್ಸಾ ಮುಂಡಾನನ್ನು ‘ಧರ್ತಿ ಅಭಾ’ (ಭೂಮಿಯ ತಂದೆ) ಎಂದು ಕರೆದಿದ್ದಾರೆ. ಈಗಲೂ ಬುಡಕಟ್ಟು ಜನರ ಕಥೆಗಳಲ್ಲಿ ಬಿರ್ಸಾ ಮುಂಡಾ ಜೀವಂತವಾಗಿದ್ದಾನೆ. ಭಾರತ ಸರ್ಕಾರ 2019 ರಿಂದ ಭಗವಾನ್ ಬಿರ್ಸಾ ಮುಂಡಾರವರ ಜನ್ಮದಿನಾಚರಣೆಯನ್ನು ಜನ ಜಾತೀಯ ಗೌರವ ದಿವಸ್ ಎಂದು ಆಚರಿಸುತ್ತಿದೆ.
ಭಾರತದ ಸಂಸತ್ತಿನ ಆವರಣದಲ್ಲಿ ಬಿರ್ಸಾ ಮುಂಡಾ ಪ್ರತಿಮೆ ಸ್ಥಾಪಿಸಲಾಗಿದೆ. ಕೃಷಿ ವಿಶ್ವ ವಿದ್ಯಾಲಯ, ತಂತ್ರಜ್ಞಾನ ಕಾಲೇಜು, ವಿಮಾನ ನಿಲ್ದಾಣ ಸೇರಿದಂತೆ ಹಲವಾರು ಸರ್ಕಾರಿ ಸಂಸ್ಥೆಗಳಿಗೆ ಜಾರ್ಖಂಡ್ ಸರ್ಕಾರ ಬಿರ್ಸಾ ಮುಂಡಾ ಹೆಸರನ್ನು ಇರಿಸಿ ಗೌರವ ಸೂಚಿಸಿದೆ ಎಂದು ಹೇಳಿದರು.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಮಕ್ಕಳು ಕಾರ್ಯಕ್ರಮದಲ್ಲಿ ಬುಡಕಟ್ಟು ನೃತ್ಯಗಳನ್ನು ಪ್ರದರ್ಶಿಸಿದರು.
ಇದನ್ನೂ ಓದಿ: ಅಡಿಕೆ ರೇಟ್ | ಭೀಮಸಮುದ್ರ, ಚನ್ನಗಿರಿ ಅಡಿಕೆ ಮಾರುಕಟ್ಟೆ ದರ
ಪರಿಶಿಷ್ಟ ವರ್ಗಗಳ ಜಿಲ್ಲಾ ಕಲ್ಯಾಣಾಧಿಕಾರಿ ಹೆಚ್. ದಿವಾಕರ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಶಿದ್ರಾಮ ಮಾರಿಹಾಳ, ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿ ವೇಮಣ್ಣ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
