ಚಿತ್ರದುರ್ಗ ನ್ಯೂಸ್.ಕಾಂ: ವಿಜಯದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಭಾನುವಾರ ಸಂಜೆ ಹಮ್ಮಿಕೊಂಡಿದ್ದ ಪಥ ಸಂಚಲನದಲ್ಲಿ ವಿವಿಧ ಬಿಜೆಪಿ ಹಾಗೂ ಸಂಘ ಪರಿವಾರದ ನಾಯಕರು ಭಾಗವಹಿಸಿದ್ದರು.
ಆರೆಸ್ಸೆಸ್ಸ್ ಗಣವೇಶ(ಯೂನಿಫಾರಂ) ಕಪ್ಪು ಟೋಪಿ, ಬಿಳಿ ಅಂಗಿ, ಬೆಲ್ಟ್, ಕಂದು ಬಣ್ಣದ ಪ್ಯಾಂಟ್, ಶೂ ಹಾಗೂ ಹೆಗಲಿನ ಮೇಲೊಂದು ದಂಡ ಇಟ್ಟುಕೊಂಡು ಬಿಜೆಪಿ ನಾಯಕರು, ಜನಪ್ರತಿನಿಧಿಗಳು ಮಿಂಚಿದ್ದು ವಿಶೇಷವಾಗಿತ್ತು.

ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಪೂರ್ಣ ಗಣವೇಶದಲ್ಲಿ ಆಗಮಿಸಿ ಪಥಸಂಚಲನದಲ್ಲಿ ಎಲ್ಲ ಸ್ವಯಂಸೇವಕರ ಜೊತೆಗೆ ಹೆಜ್ಜೆ ಹಾಕಿದರು.
ಇನ್ನೂ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ ಕೂಡಾ ಗಣವೇಶದಲ್ಲಿ ಭಾಗವಹಿಸಿದ್ದರು. ಬಿಜೆಪಿ ಯುವ ಮುಖಂಡರೂ ದೇವರಾಜ ಅರಸ್ ಎಜುಕೇಶನ್ ಟ್ರಸ್ಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್, ಭೀಮಸಮುದ್ರದ ಜಿ.ಎಸ್.ಅನಿತ್ಕುಮಾರ್ ಜೋಡಿ ಕೂಡಾ ಪಥ ಸಂಚಲನದಲ್ಲಿ ಹೆಗಲ ಮೇಲೆ ದಂಡ ಇಟ್ಟುಕೊಂಡು ಸಂಚಲನದಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಆರೆಸ್ಸೆಸ್ಸ್ ಪಥಸಂಚಲನ
ಬಿಜೆಪಿ ಇತರೆ ನಾಯಕರಾದ ಎಸ್.ಆರ್.ಗಿರೀಶ್, ರೈತ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಯಾದವ್, ಯುವ ಮುಖಂಡ ಬಿ.ಸಿ.ಹನುಮಂತೇಗೌಡ, ದಗ್ಗೆ ಶಿವಪ್ರಕಾಶ್, ನಾಗರಾಜ್ ಬೇದ್ರೆ, ನಗರ ಅಧ್ಯಕ್ಷ ಚಾಲುಕ್ಯ ನವೀನ್, ಶಿವಣ್ಣಾಚಾರ್, ವಿ.ಎಲ್.ಪ್ರಶಾಂತ್, ತಿಪ್ಪೇಸ್ವಾಮಿ, ನವೀನ್ ದ್ರಾವಿಡ್ ಕೂಡಾ ಪೂರ್ಣ ಗಣವೇಶದಲ್ಲಿ ಪಥ ಸಂಚಲನದಲ್ಲಿ ಭಾಗವಹಿಸಿದ್ದರು.

ಇನ್ನೂ ವಿಶ್ವಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ಕೂಡಾ ಪಥ ಸಂಚಲನದಲ್ಲಿ ಭಾಗಿಯಾಗಿದ್ದರು. ವಿಶೇಷವಾಗಿ ಬಜರಂಗದಳ ಪ್ರಾಂತ ಸಹಸಂಯೋಜಕ ಪ್ರಭಂಜನ್ ಘೋಷ್ ತಂಡದಲ್ಲಿ ಆನಕ(ಸೈಡ್ ಡ್ರಮ್) ಭಾರಿಸುತ್ತಿದ್ದರು. ಮುಖಂಡರಾದ ವಿಠಲ್, ಅಶೋಕ್, ರುದ್ರೇಶ್, ರಂಗಸ್ವಾಮಿ, ಕೇಶವ್, ಶ್ರೀನಿವಾಸ್, ಎಬಿವಿಪಿಯ ಆದರ್ಶ, ಗೋಪಿ ಸೇರಿದಂತೆ ಇಡೀ ತಂಡ ಭಾಗಿಯಾಗಿತ್ತು.
ಇದನ್ನೂ ಓದಿ: ಹಿರಿಯೂರಿನಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಸಂಘ ಪರಿವಾರದ ಇತರೆ ವಿಭಾಗಗಳ ಮುಖಂಡರಾದ ಕೋಟ್ಲಾ ದೇವರಾಜ್, ನಾಗರಾಜ್ ಮಲ್ಲಾಪುರ, ನಿವೃತ್ತ ಉಪನ್ಯಾಸಕ ಲಿಂಗಪ್ಪ, ರಾಮ್ಕಿರಣ್, ಶ್ರೀನಾಥ್, ನಗರ ಸಂಘಚಾಲಕ ಎಸ್.ಕೃಷ್ಣಮೂರ್ತಿ ಸೇರಿದಂತೆ ನೂರಾರು ಸ್ವಯಂಸೇವಕರು ಭಾಗವಹಿಸಿದ್ದರು.
ಇನ್ನೂ ಕಾರ್ಯಕ್ರಮದಲ್ಲಿ ಗಣವೇಶ ಇಲ್ಲದೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಉಪಸ್ಥಿತರಿದ್ದರು.

ಹೊಳಲ್ಕೆರೆ ರಸ್ತೆಯಲ್ಲಿರುವ ಬರಗೇರಮ್ಮ ದೇವಸ್ಥಾನದ ಆವರಣದಿಂದ ಪ್ರಾರಂಭವಾದ ಮೆರವಣಿಗೆ ಬುರುಜನಹಟ್ಟಿ ಮಾರ್ಗವಾಗಿ ಸಾಗಿ, ಚಿಕ್ಕಪೇಟೆ, ಆನೆ ಬಾಗಿಲು, ಗಾಂಧಿ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಹೊಳಲ್ಕೆರೆ ರಸ್ತೆಯಲ್ಲಿ ಸಾಗಿ ಮತ್ತೆ ಬರಗೇರಮ್ಮ ದೇವಸ್ಥಾನದ ಆವರಣದಲ್ಲಿ ಸಮಾರೋಪಗೊಂಡಿತು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
