ಮುಖ್ಯ ಸುದ್ದಿ
ಕೊನೆ ಹಂತಕ್ಕೆ ಮತ ಎಣಿಕೆ ಕಾರ್ಯ | ಗೆಲುವಿನ ದಡ ಸೇರಿದ ಬಿಜೆಪಿ
CHITRADURGA NEWS | 04 JUNE 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಕೊನೆ ಹಂತದಲ್ಲಿದೆ. ಮೊದಲ ಸುತ್ತಿನಲ್ಲಿ ಎರಡಂಕಿಯ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಪುನಃ ಮುನ್ನಡೆಯ ಹಾದಿ ತುಳಿಯಲಿಲ್ಲ. ಎರಡನೇ ಸುತ್ತಿನಿಂದ ಎಲ್ಲಿಯೂ ಕಮಲವನ್ನು ಮತದಾರ ಕೈ ಬಿಡದಿರುವುದು ವಿಶೇಷ.
18 ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಮತಗಳ ಅಂತರ ಹೆಚ್ಚಾಗಿದೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 6,20,801 ಮತಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 5,83,659ಮತ ಪಡೆದಿದ್ದಾರೆ. 37,142 ಮತಗಳ ಮುನ್ನಡೆಯನ್ನು ಬಿಜೆಪಿ ಸಾಧಿಸಿದೆ.
ಮೊದಲ ಸುತ್ತಿನಲ್ಲಿ ಕೇವಲ 75 ಮತಗಳ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಬಳಿಕ ಎರಡರಿಂದ ಹದಿನೈದನೇ ಸುತ್ತಿನವರೆಗೂ ನಿರಂತರ ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮಾತ್ರ ಸುತ್ತಿನಿಂದ ಸುತ್ತಿಗೆ ಅಂತರವನ್ನು ಹೆಚ್ಚಿಸಿಕೊಳ್ಳುತ್ತ ಸಾಗಿದ್ದಾರೆ. 17ನೇ ಸುತ್ತಿಗೆ 35,659 ಅಂತರ ಕಾಯ್ದುಕೊಂಡಿದ್ದ ಕಾರಜೋಳ 18 ರಲ್ಲಿ ಪುನಃ ಮತಗಳನ್ನು ಹೆಚ್ಚಿಸಿಕೊಂಡಿದ್ದಾರೆ.
ಬಿಜೆಪಿಯ ಗೋವಿಂದ ಕಾರಜೋಳ, ಕಾಂಗ್ರೆಸ್ನ ಬಿ.ಎನ್.ಚಂದ್ರಪ್ಪ ಸೇರಿ 20 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯ ನಡುವೆ ನೇರ ಹಣಾಹಣಿ ನಡೆದಿದೆ. ವಿಜಯದ ಮಾಲೆ ಬಹುತೇಕ ಬಿಜೆಪಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಕೊರಳನ್ನು ಅಲಂಕರಿಸುವ ಕ್ಷಣ ಶುರುವಾಗಿದೆ.