By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ರಘುಚಂದನ್ ಮನವೊಲಿಕೆಗೆ ಬಿಜೆಪಿ ಯತ್ನ | ತಡರಾತ್ರಿವರೆಗೆ ಮಾತುಕತೆ | ಶಾಸಕ ಚಂದ್ರಪ್ಪ ಮನೆಗೆ ಎನ್.ರವಿಕುಮಾರ್ ಭೇಟಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ರಘುಚಂದನ್ ಮನವೊಲಿಕೆಗೆ ಬಿಜೆಪಿ ಯತ್ನ | ತಡರಾತ್ರಿವರೆಗೆ ಮಾತುಕತೆ | ಶಾಸಕ ಚಂದ್ರಪ್ಪ ಮನೆಗೆ ಎನ್.ರವಿಕುಮಾರ್ ಭೇಟಿ

ಲೋಕಸಮರ 2024

ರಘುಚಂದನ್ ಮನವೊಲಿಕೆಗೆ ಬಿಜೆಪಿ ಯತ್ನ | ತಡರಾತ್ರಿವರೆಗೆ ಮಾತುಕತೆ | ಶಾಸಕ ಚಂದ್ರಪ್ಪ ಮನೆಗೆ ಎನ್.ರವಿಕುಮಾರ್ ಭೇಟಿ

chitradurganews.com
Last updated: 31 March 2024 00:55
chitradurganews.com
1 year ago
Share
ಶಾಸಕ ಚಂದ್ರಪ್ಪ ಮನೆಗೆ ಎನ್.ರವಿಕುಮಾರ್ ಭೇಟಿ
ಶಾಸಕ ಚಂದ್ರಪ್ಪ ಮನೆಗೆ ಎನ್.ರವಿಕುಮಾರ್ ಭೇಟಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 31 MARCH 2024

ಚಿತ್ರದುರ್ಗ: ಬಿಜೆಪಿ ಟಿಕೇಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ಬಂಡಾಯ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಎಂ.ಚಂದ್ರಪ್ಪ ಮನೆಗೆ ಬಿಜೆಪಿ ಮುಖಂಡ ಹಾಗೂ ಎಂಎಲ್ಸಿ ಎನ್.ರವಿಕುಮಾರ್ ಶನಿವಾರ ರಾತ್ರಿ ಆಗಮಿಸಿ ಮಾತುಕತೆ ನಡೆಸಿದರು.

ಎನ್.ರವಿಕುಮಾರ್ ಭೇಟಿ ವೇಳೆ ಶಾಸಕ ಎಂ.ಚಂದ್ರಪ್ಪ ಮನೆಯಲ್ಲಿರಲಿಲ್ಲ. ಚಳ್ಳಕೆರೆಯಲ್ಲಿ ಮುಖಂಡರ ಭೇಟಿಗೆ ತೆರಳಿದ್ದರು.

ಇದನ್ನೂ ಓದಿ: ಬಿಜೆಪಿ ಪಕ್ಷದಲ್ಲಿ ಮನೆಯೊಂದು ಮೂರು ಬಾಗಿಲು ಆಗಿದೆ | ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ | ಬಿ.ಎನ್ ಚಂದ್ರಪ್ಪ

ಮನೆಯಲ್ಲಿ ಯುವ ಮುಖಂಡ ಎಂ.ಸಿ.ರಘುಚಂದನ್ ಹಾಗೂ ಅವರ ತಾಯಿ ಚಂದ್ರಕಲಾ ಅವರ ಜೊತೆಗೆ ಸುಧೀರ್ಘವಾಗಿ ರವಿಕುಮಾರ್ ಚರ್ಚೆ ನಡೆಸಿದರು. ರಾತ್ರಿ 11 ಗಂಟೆ ವೇಳೆಗೆ ಮನೆಯಿಂದ ಹೊರಗೆ ಬಂದರು. ಈ ವೇಳೆ ರಘುಚಂದನ್ ಕೂಡಾ ಗೇಟ್ ವರೆಗೆ ಬಂದು ರವಿಕುಮಾರ್ ಅವರನ್ನು ಬೀಳ್ಕೊಟ್ಟರು.

ಹೊರಗೆ ಕಾಯುತ್ತಿದ್ದ ಸುದ್ದಿಗಾರರು, ರವಿಕುಮಾರ್ ಅವರನ್ನು ಸಂಧಾನ ಯಶಸ್ವಿಯಾಯಿತಾ ಸರ್ ಎಂದು ಪ್ರಶ್ನಿಸಿದಾಗ, ಚಂದ್ರಪ್ಪ ನಮ್ಮ ಹಿರಿಯ ಶಾಸಕರು, ರಾಜ್ಯ ನಾಯಕರು, ಅವರ ಮನೆ ಭೇಟಿಗೆ ಬಂದಿದ್ದೇನೆ ಎಂದರು.

ಇದನ್ನೂ ಓದಿ: ಹೊಳಲ್ಕೆರೆ ಶಾಸಕರ ಕ್ಷಮೆಗೆ ಸ್ವಕ್ಷೇತ್ರದವರ ಪಟ್ಟು | ತಟ್ಟಲಿದೆ ನಿಷ್ಠಾವಂತರ ಶಾಪ

ಚಂದ್ರಪ್ಪ ತಮ್ಮ ಸುಪತ್ರ ರಘುಚಂದನ್ ಅವರಿಗೆ ಲೋಕಸಭೆಗೆ ಟಿಕೇಟ್ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಅವರ ತಾಯಿ ಮತ್ತು ರಘು ಜೊತೆಗೆ ಮಾತನಾಡಿದ್ದೇವೆ.

ಮುಂದೆ ಇನ್ನೂ ಅವಕಾಶಗಳಿವೆ. ಕಠಿಣ ನಿರ್ಧಾರ ತೆಗೆದುಕೊಳ್ಳಬೇಡಿ. ಒಳ್ಳೆಯ ದಿನಗಳು ಬರಲಿವೆ. ಬಿಜೆಪಿಯಲ್ಲಿ ಭವಿಷ್ಯವಿದೆ ಎಂದು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇವೆ ಎಂದು ವಿವರಿಸಿದರು.

ಇದನ್ನೂ ಓದಿ: ಬೀದಿಗೆ ಬಿದ್ದ ಹಾಲಿ-ಮಾಜಿ ಶಾಸಕರ ವಾಕ್ಸಮರ | ಶಾಸಕ ಎಂ.ಚಂದ್ರಪ್ಪ ವಿರುದ್ಧ ತಿಪ್ಪಾರೆಡ್ಡಿ ವಾಗ್ದಾಳಿ | ಚಂದ್ರಪ್ಪ ಆರೋಪಗಳಿಗೆ ಠಕ್ಕರ್

ಅವರು ಅಂತಹ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎನ್ನುವ ವಿಶ್ವಾಸವಿದೆ. ಮುಂದೆ ಅವರ ಜೊತೆಗೆ ನಮ್ಮ ನಾಯಕರು ಕೂಡಾ ಮಾತನಾಡುತ್ತಾರೆ ಎಂದು ತಿಳಿಸಿ ರವಿಕುಮಾರ್ ತೆರಳಿದರು.

ಈ ವೇಳೆ ಮುಖಂಡರಾದ ಮಲ್ಲಿಕಾರ್ಜುನ್, ವೆಂಕಟೇಶ್ ಯಾದವ್, ನಾಗರಾಜ್ ಬೇದ್ರೆ ಮತ್ತಿತರರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BandayaBJPChitradurgaLok SabhaM.ChandrappaMC RaghuchandanMlaN. Ravikumarಎಂ.ಚಂದ್ರಪ್ಪಎಂ.ಸಿ.ರಘುಚಂದನ್ಎನ್.ರವಿಕುಮಾರ್ಚಿತ್ರದುರ್ಗಬಂಡಾಯಬಿಜೆಪಿಲೋಕಸಭೆಶಾಸಕ
Share This Article
Facebook Email Print
Previous Article ಹೊಸದುರ್ಗ ತಾಲ್ಲೂಕಿನ ಸಾಣೆಹಳ್ಳಿ, ಕನಕ, ಕುಂಚಿಟಿಗ ಮಠಕ್ಕೆ ಬಿ.ಎನ್ ಚಂದ್ರಪ್ಪ ಭೇಟಿ  ಬಿಜೆಪಿ ಪಕ್ಷದಲ್ಲಿ ಮನೆಯೊಂದು ಮೂರು ಬಾಗಿಲು ಆಗಿದೆ | ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ | ಬಿ.ಎನ್ ಚಂದ್ರಪ್ಪ
Next Article ಹೊಳಲ್ಕೆರೆ ಪ್ರವಾಸ ರದ್ದುಗೊಳಿಸಿದ ಕಾರಜೋಳ | ಮಾರ್ಗ ಬದಲಾಯಿಸಿ ಸಂಚಾರ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up