CHITRADURGA NEWS | 15 JANUARY 2024
ಚಿತ್ರದುರ್ಗ: ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ತೀರ್ಥ ಕ್ಷೇತ್ರಗಳಾದ ದೇವಸ್ಥಾನಗಳ ಸ್ವಚ್ಛತೆಗೆ ಕರೆ ನೀಡಿದ್ದಾರೆ.
ಅದರಂತೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಕೂಡಾ ಬಿಜೆಪಿ ಕಾರ್ಯಕರ್ತರು ಹಲವು ದೇಗುಲಗಳಲ್ಲಿ ಭಾನುವಾರ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಎ.ಮುರುಳಿ ಪುನರಾಯ್ಕೆ
ಚಿತ್ರದುರ್ಗ ನಗರದ ಆನೆ ಬಾಗಿಲು ಬಳಿಯಿರುವ ಶ್ರೀ ಗಣಪತಿ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಚ್ಛತೆ ಮಾಡಿದರು.
ಈ ವೇಳೆ ಬಿಜೆಪಿ ಮುಖಂಡರದಾದ ಮಲ್ಲಿಕಾರ್ಜುನ್, ನಾಗರಾಜ್ ಬೇದ್ರೆ, ನಾಗರಾಜ್ ನಂದಿ, ಯಶವಂತ್, ಕಿರಣ್, ವಸಂತ ಆಚಾರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಹೊಸದುರ್ಗ ಕಾರ್ಯಕರ್ತರಿಂದಲೂ ದೇಗುಲ ಸ್ವಚ್ಛತೆ:
ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ ಹೊಸದುರ್ಗ ತಾಲೂಕಿನ ಹೆಗ್ಗೆರೆಯಲ್ಲಿರುವ ಐತಿಹಾಸಿಕ ಶಿವನ ದೇವಸ್ಥಾನವನ್ನು ಬಿಜೆಪಿ ಕಾರ್ಯಕರ್ತರು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
