ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕ್ರಮಕ್ಕೆ ಬಿಜೆಪಿ ಯುವ ಮೋರ್ಚ ಅಗ್ರಹ

ಬಿಜೆಪಿ ಯುವ ಮೋರ್ಚ ಪದಾಧಿಕಾರಿಗಳಿಂದ ಜಿಲ್ಲಾಧಿಕಾರಿಗೆ ಮನವಿ 

CHITRADURGA NEWS | 27 MARCH 2024

ಚಿತ್ರದುರ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ, ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಯುವ ಮೋರ್ಚ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ದೂರು ನೀಡಿದರು.

ಇದನ್ನೂ ಓದಿ: ಹೊಸಪೇಟೆಯಿಂದ ಬಂದ ಕಾರಿನಲ್ಲಿ ರೂ.20.35 ಲಕ್ಷ

ಬಳಿಕ ಮಾತನಾಡಿ ಬಿಜೆಪಿ ಯುವ ಮೋರ್ಚ ಜಿಲ್ಲಾಧ್ಯಕ್ಷ ಕಾಲುವೆಹಳ್ಳಿ ಆರ್.ಪಾಲಯ್ಯ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಸರನ್ನು ಕೂಗುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂದು ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿರುವ ಸಚಿವ ಶಿವರಾಜ್ ತಂಗಡಗಿ ವಿರುದ್ಧ ದೂರು ದಾಖಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಕೂಡ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಮಾನತು

ದೇಶದ ಮುಂದಿನ ಪ್ರಜೆಗಳಾದ ಯುವಕರಿಗೆ ಹೊಡೆಯಿರಿ ಎಂದು ಜಮಕಿ ಹಾಕಿರುವುದರಿಂದ ಯುವಕರು ಮತ ಚಲಾಯಿಸಲು ಮತಗಟ್ಟೆಗಳಿಗೆ ಬರಲು ಎದುರುವ ಸಾಧ್ಯತೆಗಳಿವೆ, ರಾಜ್ಯದ ಹಾಗೂ ಜಿಲ್ಲೆಯ ಯುವಕರಿಗೆ ರಕ್ಷಣೆ ನೀಡಬೇಕು ಮತ್ತು ಪ್ರಧಾನ ಮಂತ್ರಿಗಳ ಬಗ್ಗೆ ಕೇವಲವಾಗಿ ಮಾತನಾಡಿರುವ ಹಾಗೂ ಯುವಕರಿಗೆ ಭಯದ ದಿಗಿಲು ಹುಟ್ಟಿಸಿರುವ ಕಾರಣ ಸಚಿವ ಶಿವರಾಜ್ ತಂಗಡಗಿ ಅವರ ಮೇಲೆ ದೂರು ದಾಖಲು ಮಾಡಬೇಕು ಎಂದರು.

ಇದನ್ನೂ ಓದಿ: ಸಮಾಜ ವಿಜ್ಞಾನ ಪರೀಕ್ಷೆ ಯಾವ ಕೇಂದ್ರದಲ್ಲಿ ಎಷ್ಟು ಗೈರು

ಈ ಸಂದರ್ಭದಲ್ಲಿ ಯುವ ಮೋರ್ಜಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ವಿ.ಎಸ್ ಹಳ್ಳಿ, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಕಲ್ಲೇಶ್, ಆದರ್ಶ, ಧನು, ಚಂದ್ರು, ಸಂಜಯ್ ಇದ್ದರು

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version