CHITRADURGA NEWS | 31 AUGUST 2024
ಚಿತ್ರದುರ್ಗ: ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್.ವೇಣು ಅವರು ರಚಿಸಿರುವ ‘ಸುಡುಗಾಡು ಸಿದ್ಧನ ಪ್ರಸಂಗ’ ಕಥೆ (Kannada Story) ದಾವಣಗೆರೆ ವಿಶ್ವವಿದ್ಯಾನಿಲಯದ ಡಿಗ್ರಿ ವಿದ್ಯಾರ್ಥಿಗಳ ಪಠ್ಯಕ್ಕೆ ಸೇರ್ಪಡೆಯಾಗಿದೆ.
ಚಿತ್ರದುರ್ಗದಲ್ಲೇ ನೆಲೆನಿಂತು ಅತ್ಯುತ್ತಮ ಚಲನಚಿತ್ರ ಸಂಭಾಷಣೆಕಾರರಾಗಿ ಗುರುತಿಸಿಕೊಂಡಿರುವ ಬಿ.ಎಲ್.ವೇಣು ಅವರು ಕಾದಂಬರಿ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದಾರೆ.

ಇದನ್ನೂ ಓದಿ: ನಾಳೆಯಿಂದ ನಿಮ್ಮ ಮುಂದೆ | ಹಬ್ಬಿದಾ ಮಲೆ ಮಧ್ಯದೊಳಗೆ | ಬಯಲು ಸೀಮೆಯ ಮಹಾ ಕಾದಂಬರಿ
ಈಗ ದಾವಣಗೆರೆ ವಿಶ್ವವಿದ್ಯಾನಿಲಯದ ಪ್ರಥಮ ಬಿಎ ಪದವಿಯ ಎರಡನೇ ಸೆಮಿಸ್ಟರ್ ಪಠ್ಯಕ್ರಮಕ್ಕೆ ವೇಣು ಅವರ ಸುಡುಗಾಡು ಸಿದ್ಧನ ಪ್ರಸಂಗ ಸೇರಿರುವುದು ಅವರಿಗೆ ಸಂದ ಗೌರವವಾಗಿದೆ.
ಸುಡುಗಾಡು ಸಿದ್ಧನ ಪ್ರಸಂಗ 2001ರಲ್ಲಿ ಪ್ರಜಾವಾಣಿ ನಡೆಸಿದ್ದ ಕಥಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.
ಇದನ್ನೂ ಓದಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ | ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅಜಿ ಆಹ್ವಾನ
ದಾವಣಗೆರೆ ವಿಶ್ವವಿದ್ಯಾನಿಲಯದ ಸ್ನಾತಕ ಕನ್ನಡ ಅಧ್ಯಯನ ಮಂಡಳಿಯ ಅಧ್ಯಕ್ಷರಾದ ಡಾ.ಜೋಗಿನಕಟ್ಟೆ ಮಂಜುನಾಥ್ ವೇಣು ಅವರಿಗೆ ಪತ್ರ ಬರೆದು ಅವರ ಕಥೆಯನ್ನು ಪಠ್ಯಕ್ಕೆ ತೆಗೆದುಕೊಳ್ಳಲು ಅನುಮತಿ ಕೋರಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
