By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ತೆಂಗು ಬೆಳೆಗೆ ಕಪ್ಪು ತಲೆ ಹುಳು ಬಾಧೆ | ರೈತರಿಗೆ ಜಾಗೃತಿ ಮೂಡಿಸಿ, ಹತೋಟಿಗೆ ತನ್ನಿ | ಎನ್.ಆರ್.ಮಹೇಶ್ವರಪ್ಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ತೆಂಗು ಬೆಳೆಗೆ ಕಪ್ಪು ತಲೆ ಹುಳು ಬಾಧೆ | ರೈತರಿಗೆ ಜಾಗೃತಿ ಮೂಡಿಸಿ, ಹತೋಟಿಗೆ ತನ್ನಿ | ಎನ್.ಆರ್.ಮಹೇಶ್ವರಪ್ಪ

ಮುಖ್ಯ ಸುದ್ದಿ

ತೆಂಗು ಬೆಳೆಗೆ ಕಪ್ಪು ತಲೆ ಹುಳು ಬಾಧೆ | ರೈತರಿಗೆ ಜಾಗೃತಿ ಮೂಡಿಸಿ, ಹತೋಟಿಗೆ ತನ್ನಿ | ಎನ್.ಆರ್.ಮಹೇಶ್ವರಪ್ಪ

News Desk Chitradurga News
Last updated: 15 February 2025 09:46
News Desk Chitradurga News
4 months ago
Share
ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 15 FEBRUARY 2025

ಚಿತ್ರದುರ್ಗ: ಜಿಲ್ಲೆಯಲ್ಲಿ ತೆಂಗಿನ ತೋಟಗಳಿಗೆ ತಗುಲಿರುವ ಕಪ್ಪು ತಲೆ ಹುಳು ಬಾಧೆ ಸಮಗ್ರ ಹತೋಟಿಗೆ ಅಗತ್ಯ ಕ್ರಮವಹಿಸಬೇಕು ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎನ್.ಆರ್.ಮಹೇಶ್ವರಪ್ಪ ಸೂಚನೆ ನೀಡಿದರು.

Also Read: ಚಿತ್ರಹಳ್ಳಿ ಪೊಲೀಸರ ಕಾರ್ಯಾಚರಣೆ | ಐವರ ಬಂಧನ | 5 ಲಕ್ಷ ರೂ. ಮೌಲ್ಯದ ಶ್ರೀಗಂಧ ವಶ

ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತೆಂಗಿನ ಮರಗಳಿಗೆ ಬಂದಿರುವ ಕಪ್ಪುತಲೆ ಹುಳು ಬಾಧೆಯಿಂದ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ರೋಗ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಔಷಧಿ ಸಿಂಪಡಣೆ ಸೇರಿದಂತೆ ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಜಿಲ್ಲೆಯ ಚಿತ್ರದುರ್ಗ, ಚಳ್ಳಕೆರೆ ಹಾಗೂ ಮೊಳಕಾಲ್ಮುರು ತಾಲ್ಲೂಕುಗಳನ್ನು ಸಹ ತೆಂಗು ಕ್ಲಸ್ಟರ್ ವ್ಯಾಪ್ತಿಗೆ ಸೇರಿಸಿ, ಕಪ್ಪು ತಲೆ ಹುಳದ ಬಾಧೆಯಿಂದ ಹಾಳಾದ ತೋಟಗಳ ನಿರ್ವಹಣೆ ಹಾಗೂ ರೋಗದ ಹತೋಟಿಗೆ ಸರ್ಕಾರ ನೀಡಿದ ಸಹಾಯಧನವನ್ನು ತೆಂಗು ಬೆಳೆಯುವ ಜಿಲ್ಲೆಯ ಎಲ್ಲ ತೆಂಗು ಬೆಳೆಗಾರರಿಗೂ ಸೌಲಭ್ಯ ಒದಗಿಸಿ, ರೋಗ ಹತೋಟಿಗೆ ತರುವ ಕೆಲಸ ಮಾಡಬೇಕು ಎಂದರು.

ತೋಟಗಾರಿಕೆ ಉಪನಿರ್ದೇಶಕಿ ಸವಿತಾ ಮಾತನಾಡಿ, ಬೇಸಿಗೆಯಲ್ಲಿ ತೆಂಗಿನ ಮರಗಳಿಗೆ ಕಪ್ಪುತಲೆ ಹುಳು ಬಾಧೆಯು ಹೆಚ್ಚಳವಾಗಲಿದೆ. ರೋಗ ನಿಯಂತ್ರಣಕ್ಕೆ ತೆಂಗು ಅಭಿವೃದ್ಧಿ ಮಂಡಳಿ ವತಿಯಿಂದ ಔಷಧಿ ಸಂಪರಣೆ ಸೇರಿದಂತೆ ಅಗತ್ಯ ಕ್ರಮವಹಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

Also Read: ಐದನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ

ಜಿಲ್ಲಾ ಕೃಷಿಕ ಸಮಾಜದ ಖಜಾಂಚಿ ಭಕ್ತ ಪ್ರಹ್ಲಾದ್ ಮಾತನಾಡಿ, ಮೈಕ್ರೋ ಪೈನಾನ್ಸ್ ಸಂಸ್ಥೆಗಳ ಕಿರುಕುಳ ತಪ್ಪಿಸುವ ಸಲುವಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (ಪಿಎಲ್‍ಡಿ ಬ್ಯಾಂಕ್) ಮೂಲಕ ಜಿಲ್ಲೆಯ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಹೊಸದಾಗಿ ಸಾಲ ಕೊಡುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎನ್.ಆರ್.ಮಹೇಶ್ವರಪ್ಪ ಅವರು, ಜಿಲ್ಲಾ ಕೃಷಿಕ ಸಮಾಜದ ಸಭೆಯ ನಡವಳಿಯೊಂದಿಗೆ ಪಿಎಲ್‍ಡಿ ಬ್ಯಾಂಕ್‍ಗಳ ಮೂಲಕ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಸಾಲ ಸೌಲಭ್ಯ ಕಲ್ಪಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಜಂಟಿ ಕೃಷಿ ನಿರ್ದೇಶಕರಿಗೆ ಸೂಚನೆ ನೀಡಿದರು.

ಪಿಎಲ್‍ಡಿ ಬ್ಯಾಂಕ್, ವ್ಯವಸಾಯೋತ್ಪನ್ನ ಸಹಕಾರ ಸಂಘಗಳು, ಕೃಷಿ ಪತ್ತಿನ ಸಹಕಾರ ಸಂಘಗಳು ಸೇರಿದಂತೆ ಇತ್ಯಾದಿ ಸಹಕಾರ ಸಂಘಗಳು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರೈತಪರವಾಗಿರುವ ಯಾವ ಯಾವ ಕ್ರಮಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡುವಂತೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಎಆರ್‍ಸಿಎಸ್ ಬಾಹುಬಲಿ ಅವರು ಈ ಕುರಿತು ಒಂದು ವಾರದೊಳಗೆ ಸಂಪೂರ್ಣ ವರದಿ ನೀಡಲಾಗುವುದು ಎಂದು ಸಭೆಯ ಗಮನಕ್ಕೆ ತಂದರು.

Also Read: ನರೇಗಾ ತಾಂತ್ರಿಕಾ ಸಹಾಯಕ ಕೆಲಸದಿಂದ ವಜಾ

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕರು ಹಾಗೂ ಜಿಲ್ಲಾ ಕೃಷಿಕ ಸಮಾಜದ ಪದನಿಮಿತ್ತ ಕಾರ್ಯದರ್ಶಿ ಮಂಜುನಾಥ್, ಜಿಲ್ಲಾ ಕೃಷಿಕ ಸಮಾಜದ ಉಪಾಧ್ಯಕ್ಷ ಧರಣೇಶ್, ರಾಜ್ಯಪ್ರತಿನಿಧಿ ವಿ.ಜಿ.ಪರಮೇಶ್ವರಪ್ಪ, ಖಜಾಂಚಿ ಭಕ್ತ ಪ್ರಹ್ಲಾದ್, ಪ್ರಧಾನ ಕಾರ್ಯದರ್ಶಿ ರಾಗಿ ಶಿವಮೂರ್ತಪ್ಪ, ತಾಲ್ಲೂಕು ಕೃಷಿ ಸಮಾಜದ ಅಧ್ಯಕ್ಷ ಬಿ.ಟಿ.ಜಗದೀಶ್, ಸಿ.ಹೆಚ್.ಕಾಂತರಾಜ್, ಹಿರಿಯೂರು ತಾಲ್ಲೂಕು ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಕೆ.ಜಗದೀಶ್ ಕಂದಿಕೆರೆ, ಕೃಷಿ ಸಮಾಜದ ಜಿಲ್ಲಾ ಪ್ರತಿನಿಧಿ ಶಶಿಧರ್, ರಮೇಶಪ್ಪ ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:agriculture departmentChitradurgaChitradurga newsChitradurga UpdatesCoconutCropdiseaseFarmersHorticulture DepartmentKannada Latest NewsKannada NewsMedicineಔಷಧಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೃಷಿ ಇಲಾಖೆಚಿತ್ರದುರ್ಗಚಿತ್ರದುರ್ಗ ನ್ಯೂಸ್ತೆಂಗುತೋಟಗಾರಿಕೆ ಇಲಾಖೆಬೆಳೆರೈತರುರೋಗ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಫೆಬ್ರವರಿ 15 | ವೃತ್ತಿಪರ ವ್ಯವಹಾರದಲ್ಲಿ ನಿರೀಕ್ಷಿತ ಲಾಭ, ಆರೋಗ್ಯದ ಬಗ್ಗೆ ಎಚ್ಚರ
Next Article ಹಣಕಾಸು ಕ್ಷೇತ್ರದಲ್ಲಿ ತಂತ್ರಜ್ಞಾನ ಬಳಕೆಯಿಂದ ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆ | MLC ಕೆ.ಎಸ್.ನವೀನ್
Leave a Comment

Leave a Reply Cancel reply

Your email address will not be published. Required fields are marked *

ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up