By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಂವಾದ ಕಾರ್ಯಕ್ರಮದಲ್ಲಿ ಡಿ.ಆರ್.ಪಾಟೀಲ್ ಮಾತನಾಡಿದರು.
    ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧ | ಡಿಸಿ ವೆಂಕಟೇಶ್
    36 minutes ago
    ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪ್ರತಿಜ್ಞಾವಿಧಿ ಬೋಧನೆ
    ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪ್ರತಿಜ್ಞಾವಿಧಿ ಬೋಧನೆ
    13 hours ago
    ಕೆ.ಎಂ.ಶಿವಸ್ವಾಮಿ
    ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ನಾಳೆ ಪೂರ್ವಭಾವಿ ಸಭೆ
    14 hours ago
    Power Cut chitradurga News (3)
    ಜ.24 ರಂದು ವಿದ್ಯತ್ ವ್ಯತ್ಯಯ
    14 hours ago
    ಜಿಮ್ ಮತ್ತು ಫಿಟ್ನೆಸ್ ತರಬೇತಿ
    ಉಚಿತ ಜಿಮ್ ಮತ್ತು ಫಿಟ್ನೆಸ್ ತರಬೇತಿ | ಪರಿಶಿಷ್ಟ ಜಾತಿಯ ಯುವಕರಿಂದ ಅರ್ಜಿ ಅಹ್ವಾನ 
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಹಿರಿಯೂರು | ಲಾರಿ-ಬೈಕ್ ಅಪಘಾತ | ಬೈಕ್ ಸವಾರ ಸಾವು
    6 days ago
    TALUKU POLICE OPERATION
    ವಿಮಲ್‌, ಸೂಪರ್‌ ಗುಟ್ಖಾ ಹಾಗೂ ಹಣ ಕಳ್ಳತನ ಮಾಡಿದ್ದ ಆರೋಪಿ ಅರೆಸ್ಟ್‌
    1 week ago
    Dead body in Katralu lake
    ಕೆರೆಯಲ್ಲಿ ಯುವಕನ ಶವ ಪತ್ತೆ | ಕೈ ಕಾಲು ಕಟ್ಟಿ ಮೂಟೆಗೆ ತುಂಬಿ ಎಸೆದಿರುವ ಶಂಕೆ
    1 week ago
    FIR
    ಖಾಸಗಿ ಬಸ್‌ – ಬೈಕ್‌ ನಡುವೆ ಅಪಘಾತ | ಇಬ್ಬರು ಮೃತ
    1 week ago
    ಚಿತ್ರದುರ್ಗ ಅಪರಾಧ
    ತಳುಕಿನಲ್ಲಿ ರಾತ್ರಿ ಅಂಗಡಿಗಳನ್ನು ದೋಚಿದ ಕಳ್ಳರು | ಲಕ್ಷಾಂತರ ಮೌಲ್ಯದ ಸರಕು ಕಳುವು
    2 weeks ago
  • ತಾಲೂಕು
    ತಾಲೂಕುShow More
    ಡಿ.ಕೆ.ಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ಅಧ್ಯಕ್ಷ – ಉಪಾಧ್ಯಕ್ಷರ ಅವಿರೋಧ ಆಯ್ಕೆ
    ಡಿ.ಕೆ.ಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ಅಧ್ಯಕ್ಷ – ಉಪಾಧ್ಯಕ್ಷರ ಅವಿರೋಧ ಆಯ್ಕೆ
    2 days ago
    ಗ್ರಾಮ ಸುಭಿಕ್ಷೆಗಾಗಿ ಲಕ್ಷ್ಮಿ ಪೂಜೆ ಮತ್ತು ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
    ಜನರನ್ನು ಆರ್ಥಿಕವಾಗಿ ಮುಂದೆ ಬರುವಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ | ಶಾಂತವೀರ ಶ್ರೀ
    3 days ago
    ಚೌಳೂರು ಲೋಕೇಶ್
    ಹಂಪಿ ವಿಶ್ವವಿದ್ಯಾಲಯದಿಂದ‌ ಚೌಳೂರು ಲೋಕೇಶ್ ಗೆ Phd
    1 week ago
    ಸುಜ್ಞಾನ ಸಂಗಮ ಕಾರ್ಯಕ್ರಮ
    ಮಠ ಯಾರ ಪರವೂ ಅಲ್ಲ, ವಿರುದ್ಧವೂ ಅಲ್ಲ‌ | ಶಾಂತವೀರ ಶ್ರೀ
    2 weeks ago
    ಡಾ.ಕೆ.ಆರ್.ದಾದಾಪೀರ್
    ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ.ದಾದಾಪೀರ್ ಆಯ್ಕೆ
    2 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 23 ಜನವರಿ | ಕರ್ನಾಟಕ ಅಡಿಕೆ ಮಾರುಕಟ್ಟೆ ರೇಟ್ಸ್‌
    13 hours ago
    Adike rate
    ಅಡಿಕೆ ಧಾರಣೆ | 22 ಜನವರಿ | ಭೀಮಸಮುದ್ರ, ಚನ್ನಗಿರಿ ಸೇರಿ ಕರ್ನಾಟಕ ಅಡಿಕೆ ರೇಟ್‌
    2 days ago
    Adike rate
    ಅಡಿಕೆ ಧಾರಣೆ | 21 ಜನವರಿ | ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
    3 days ago
    Adike rate
    ಅಡಿಕೆ ಧಾರಣೆ | 20 ಜನವರಿ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    4 days ago
    Adike rate
    ಅಡಿಕೆ ಧಾರಣೆ | 19 ಜನವರಿ | ಚನ್ನಗಿರಿ, ಭೀಮಸಮುದ್ರ ಇತರೆ ಅಡಿಕೆ ಮಾರುಕಟ್ಟೆ ವಿವರ
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜನವರಿ 24 | ಕೈಗೊಂಡ ಕೆಲಸದಲ್ಲಿ ಅಡೆತಡೆಗಳು, ಆರ್ಥಿಕ ಲಾಭ, ದೂರದ ಪ್ರಯಾಣ ಬೇಡ
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜನವರಿ 23 | ಉದ್ಯೋಗದಲ್ಲಿ ಕಿರಿಕಿರಿ, ಮಾನಸಿಕ ಸಮಸ್ಯೆಗಳು, ವ್ಯವಹಾರಗಳಲ್ಲಿ ಹೊಸ ಹೂಡಿಕೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜನವರಿ 22 | ಹಠಾತ್ ಆರ್ಥಿಕ ಲಾಭ, ಕೈಗೊಂಡ ಕೆಲಸದಲ್ಲಿ ವಿಳಂಬ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜನವರಿ 21 | ಕಠಿಣ ಪರಿಶ್ರಮಕ್ಕೆ ತಕ್ಕ ಫಲ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜನವರಿ 20 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಮಕ್ಕಳ ಆರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜನವರಿ 23 | ಮೆಕ್ಕೆಜೋಳ ರೇಟ್ ಎಷ್ಟಿದೆ?
    16 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜನವರಿ 22 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜನವರಿ 21 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜನವರಿ 20 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜನವರಿ 19 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Holalkere Bjp Activists taking oth
    ಜಿಲ್ಲಾ, ತಾಲೂಕು ಪಂಚಾಯಿತಿಯಲ್ಲಿ ನಮ್ಮ ಕಾರ್ಯಕರ್ತರು ಗೆಲ್ಲಬೇಕು | ಕೆ.ಎಸ್‌.ನವೀನ್‌
    3 days ago
    2 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ
    2 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ
    6 days ago
    SIDDARAMESHWARA JAYANTHI MERAVANIGE
    ವಿಜೃಂಭಣೆಯ ಸಿದ್ದರಾಮೇಶ್ವರ ಜಯಂತಿ | ಹೊಳಲ್ಕೆರೆಗೆ ಹರಿದು ಬಂದ ಜನಸಾಗರ
    1 week ago
    ಹೊಸಕೆರೆ ಕಟ್ಟೆ, ಗೋಕಟ್ಟೆ ಅಭಿವೃದ್ದಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
    ಬಡವರಿಗೆ ಮನೆ | 1.50 ಲಕ್ಷದಲ್ಲಿ ಸೈಟ್ ನಿರ್ಮಾಣ ಮಾಡಿಸಿದ್ದೇನೆ| ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ಸಿದ್ದರಾಮೇಶ್ವರ ಜಯಂತಿ ಆಚರಣೆ | ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಂ.ಚಂದ್ರಪ್ಪ
    ಜನವರಿ 14,15 ರಂದು ಹೊಳಲ್ಕೆರೆ ಪಟ್ಟಣದಲ್ಲಿ ಸಿದ್ದರಾಮೇಶ್ವರ ಜಯಂತಿ ಆಚರಣೆ | ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಂ.ಚಂದ್ರಪ್ಪ
    2 weeks ago
  • ಹಿರಿಯೂರು
    ಹಿರಿಯೂರುShow More
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    4 weeks ago
    DC Office Chitradurga
    ಜಿಲ್ಲಾಧಿಕಾರಿ ಸಿಗ್ನೇಚರ್‌ ಫೋರ್ಜರಿ | ಭೂ ಪರಿವರ್ತನೆಗೆ ಕೃತ್ಯ | FIR ದಾಖಲು
    1 month ago
    Registration of crop insurance
    ಹಿರಿಯೂರು ತಾಲೂಕಿನಲ್ಲಿ ಬೆಳೆ ವಿಮೆ ನೋಂದಣಿ ಪ್ರಾರಂಭ
    2 months ago
    minister d sudhakar meating
    ಹಿರಿಯೂರು ನಗರಕ್ಕೆ 100 ಕೋಟಿ | ಒಳಚರಂಡಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ
    2 months ago
    Power outage on May 1
    ಹಿರಿಯೂರು: ಇಂದು ವಿದ್ಯುತ್ ವ್ಯತ್ಯಯ
    3 months ago
  • ಹೊಸದುರ್ಗ
    ಹೊಸದುರ್ಗShow More
    ಡಿ.ಕೆ.ಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ಅಧ್ಯಕ್ಷ – ಉಪಾಧ್ಯಕ್ಷರ ಅವಿರೋಧ ಆಯ್ಕೆ
    ಡಿ.ಕೆ.ಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ಅಧ್ಯಕ್ಷ – ಉಪಾಧ್ಯಕ್ಷರ ಅವಿರೋಧ ಆಯ್ಕೆ
    2 days ago
    ಗ್ರಾಮ ಸುಭಿಕ್ಷೆಗಾಗಿ ಲಕ್ಷ್ಮಿ ಪೂಜೆ ಮತ್ತು ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
    ಜನರನ್ನು ಆರ್ಥಿಕವಾಗಿ ಮುಂದೆ ಬರುವಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ | ಶಾಂತವೀರ ಶ್ರೀ
    3 days ago
    ಸುಜ್ಞಾನ ಸಂಗಮ ಕಾರ್ಯಕ್ರಮ
    ಮಠ ಯಾರ ಪರವೂ ಅಲ್ಲ, ವಿರುದ್ಧವೂ ಅಲ್ಲ‌ | ಶಾಂತವೀರ ಶ್ರೀ
    2 weeks ago
    ಬಾಗೂರಿನಲ್ಲಿ ಸಂಭ್ರಮದ ವೈಕುಂಠ ಏಕಾದಶಿ | ದೇವರ ದರ್ಶನ ಪಡೆದ ಮಠಾಧೀಶರು
    ಬಾಗೂರಿನಲ್ಲಿ ಸಂಭ್ರಮದ ವೈಕುಂಠ ಏಕಾದಶಿ | ದೇವರ ದರ್ಶನ ಪಡೆದ ಮಠಾಧೀಶರು
    3 weeks ago
    ಸಾಣೇಹಳ್ಳಿಯಲ್ಲಿ ಗೋಷ್ಠಿ
    ವೇದ ಸುಳ್ಳಾದರೂ, ಗಾಧೆ ಸುಳ್ಳಾಗದು | ಸಾಣೇಹಳ್ಳಿಯಲ್ಲಿ ಗೋಷ್ಠಿ
    4 weeks ago
  • Life Style
    Life StyleShow More
    ಎಳನೀರು ಕಿಡ್ನಿ ಆರೋಗ್ಯಕ್ಕೆ ಉತ್ತಮವೇ?
    42 minutes ago
    ಫ್ಯಾಟಿ ಲಿವರ್ ಸಮಸ್ಯೆ
    ಸಕ್ಕರೆ ಮಾತ್ರವಲ್ಲ ಅಡುಗೆಗೆ ಬಳಸುವ ಈ ವಸ್ತುಗಳು ಕೂಡ ಫ್ಯಾಟಿ ಲಿವರ್ ಸಮಸ್ಯೆಗೆ ಕಾರಣವಂತೆ
    23 hours ago
    hair is falling
    ನಿಮ್ಮ ಕೂದಲು ತುಂಬಾ ಉದುರುತ್ತಿದ್ದರೆ ಈ 4 ವಸ್ತುಗಳನ್ನು ತಕ್ಷಣ ತಿನ್ನುವುದನ್ನು ನಿಲ್ಲಿಸಿ 
    1 day ago
    ಎಷ್ಟೇ ಹಸಿವಾಗಿದ್ದರೂ ಕೂಡ ಈ 3 ವಸ್ತುಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬೇಡಿ
    2 days ago
    sleeping with a blanket
    ಕಂಬಳಿ ಹೊದ್ದು ಮಲಗುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ?
    3 days ago
Reading: ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧ | ಡಿಸಿ ವೆಂಕಟೇಶ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧ | ಡಿಸಿ ವೆಂಕಟೇಶ್

News Desk Chitradurga News
Last updated: 24 January 2026 06:58
News Desk Chitradurga News
36 minutes ago
Share
ಸಂವಾದ ಕಾರ್ಯಕ್ರಮದಲ್ಲಿ ಡಿ.ಆರ್.ಪಾಟೀಲ್ ಮಾತನಾಡಿದರು.
ಸಂವಾದ ಕಾರ್ಯಕ್ರಮದಲ್ಲಿ ಡಿ.ಆರ್.ಪಾಟೀಲ್ ಮಾತನಾಡಿದರು.
SHARE

CHITRADURGA NEWS | 24 JANUARY 2026

ಚಿತ್ರದುರ್ಗ: ರಾಜ್ಯದ ಬರುವ 2026-27 ನೇ ಬಜೆಟ್‍ನಲ್ಲಿ ಅಳವಡಿಸುವ ಯೋಜನೆಗಳು ಅಭಿವೃದ್ಧಿಪರ, ಜನರ ಭಾವನೆ ಹಾಗೂ ಆಶೋತ್ತರಗಳಿಗೆ ಅನುಗುಣವಾಗಿ ಇರಬೇಕು. ಇದರ ಆಧಾರದ ಮೇಲೆ ಬಜೆಟ್ ರೂಪಿತವಾಗಬೇಕು ಎಂದು ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ್ ಹೇಳಿದರು.

ಇದನ್ನೂ ಓದಿ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪ್ರತಿಜ್ಞಾವಿಧಿ ಬೋಧನೆ

ನಗರದ ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ, ಸ್ಥಳೀಯ ಸಂಸ್ಥೆಗಳ ಮೂಲಕ ತಳಮಟ್ಟದಿಂದ ಯೋಜನೆ ರೂಪಿಸುವ ಕುರಿತು ಗ್ರಾಮ, ತಾಲ್ಲೂಕು, ಜಿಲ್ಲೆ ಹಾಗೂ ಇತರೆ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗಿನ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಈವರೆಗೂ ಯೋಜನೆಗಳು ಬೆಂಗಳೂರು ಅಥವಾ ದೆಹಲಿಯ ಮಟ್ಟದಲ್ಲಿ ಸಿದ್ಧವಾಗುತ್ತಿದ್ದವು. ಆದರೆ ಇನ್ನು ಮುಂದೆ ಜನರ ಭಾವನೆಗಳಿಗೆ ಅನುಗುಣವಾಗಿ ತಳಮಟ್ಟದಿಂದಲೇ ಯೋಜನೆಗಳು ರೂಪಿತವಾಗಬೇಕು ಎಂಬ ಆಶಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೂರಕ ಅವಕಾಶ ನೀಡಿದ್ದಾರೆ. 

ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಶಾಸಕರು ಕೇವಲ ಬಜೆಟ್ ಚರ್ಚೆಯಲ್ಲಿ ಮಾತ್ರ ಭಾಗವಹಿಸುತ್ತಿದ್ದರು. ಆದರೆ ಯೋಜನಾ ತಯಾರಿಕೆ ಪ್ರಕ್ರಿಯೆಯಲ್ಲಿ ಅವರ ಪಾಲ್ಗೊಳ್ಳುವಿಕೆ ಕಡಿಮೆ ಇತ್ತು. ಈ ವ್ಯವಸ್ಥೆಗೆ ಬದಲಾವಣೆ ತರುವ ಮೂಲಕ ಜನರ ಅಗತ್ಯಗಳಿಗೆ ತಕ್ಕಂತೆ ಆಡಳಿತ ನಡೆಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಜನಪ್ರತಿನಿಧಿಗಳು ಕೇವಲ ಅಧಿಕಾರ ಅನುಭವಿಸದೇ, ಜನರ ಆಶೋತ್ತರಗಳಿಗೆ ಸರ್ಕಾರದ ಮಟ್ಟದಲ್ಲಿ ಧ್ವನಿಯಾಗಬೇಕು ಎಂದು ಡಿ.ಆರ್. ಪಾಟೀಲ್ ಅಭಿಪ್ರಾಯಪಟ್ಟರು.

ಗ್ರಾಮ ಸ್ವರಾಜ್ಯದ ಕನಸು ನನಸಾಗಿಸಲು ಪಂಚಾಯತ್ ರಾಜ್ ವ್ಯವಸ್ಥೆ ಬಲಗೊಳ್ಳಲಿ:

ಮಹಾತ್ಮಾ ಗಾಂಧೀಜಿಯವರ ‘ಗ್ರಾಮ ಸ್ವರಾಜ್ಯ’ದ ಕನಸನ್ನು ನನಸು ಮಾಡಲು ಪಂಚಾಯತ್ ರಾಜ್ ವ್ಯವಸ್ಥೆಯನ್ನು ಸಂವಿಧಾನಬದ್ಧವಾಗಿ ಬಲಪಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಡಿ.ಆರ್.ಪಾಟೀಲ್ ಈ ಸಂದರ್ಭದಲ್ಲಿ ಹೇಳಿದರು.

ಇದನ್ನೂ ಓದಿ: ಉಚಿತ ಜಿಮ್ ಮತ್ತು ಫಿಟ್ನೆಸ್ ತರಬೇತಿ | ಪರಿಶಿಷ್ಟ ಜಾತಿಯ ಯುವಕರಿಂದ ಅರ್ಜಿ ಅಹ್ವಾನ 

ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ಪ್ರಜೆಯೂ ತನ್ನ ಪಾತ್ರವಿದೆ ಎಂದು ಭಾವಿಸಬೇಕು. ಗ್ರಾಮ ಪಂಚಾಯತ್ ಮಟ್ಟದಿಂದಲೇ ಈ ಜವಾಬ್ದಾರಿಯುತ ಭಾವನೆ ಮೂಡಿದಾಗ ಮಾತ್ರ ಗಾಂಧೀಜಿಯವರ ಕನಸು ನನಸಾಗಲು ಸಾಧ್ಯ. ಅಧಿಕಾರ ವಿಕೇಂದ್ರೀಕರಣದ ಮೂಲ ಉದ್ದೇಶವನ್ನು ಈಡೇರಿಸಲು ನಾವೆಲ್ಲರೂ ಬದ್ಧರಾಗಬೇಕಿದೆ. ಪಂಚಾಯತ್ ರಾಜ್ ವ್ಯವಸ್ಥೆಯು ಕೇವಲ ಆಡಳಿತಾತ್ಮಕ ವ್ಯವಸ್ಥೆಯಾಗದೆ, ಜನರ ಭಾವನೆಗಳಿಗೆ ಸ್ಪಂದಿಸುವ ವೇದಿಕೆಯಾಗಬೇಕು ಎಂದು ಡಿ.ಆರ್.ಪಾಟೀಲ್ ಆಶಯ ವ್ಯಕ್ತಪಡಿಸಿದರು.

ಗ್ರಾಮ ಸಭೆಯ ನಿರ್ಣಯ ಬದಲಿಸುವ ಶಕ್ತಿ ಸಿಎಂ ಅಥವಾ ಪ್ರಧಾನಿಗೂ ಇಲ್ಲ:

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗ್ರಾಮ ಸಭೆಗಳೇ ಅತ್ಯಂತ ಪ್ರಬಲವಾಗಿದ್ದು, ಅಲ್ಲಿ ತೆಗೆದುಕೊಳ್ಳುವ ನಿರ್ಣಯಗಳನ್ನು ಬದಲಿಸುವ ಅಧಿಕಾರ ಮುಖ್ಯಮಂತ್ರಿಗಳಿಗಾಗಲಿ ಅಥವಾ ಪ್ರಧಾನ ಮಂತ್ರಿಗಳಿಗಾಗಲಿ ಇಲ್ಲ ಎಂದು ಆರ್.ಡಿ. ಪಾಟೀಲ್ ಅವರು ಪ್ರತಿಪಾದಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 23 | ಮೆಕ್ಕೆಜೋಳ ರೇಟ್ ಎಷ್ಟಿದೆ?

ಸ್ಥಳೀಯ ಸಂಸ್ಥೆಗಳೇ ನಿಜವಾದ ಸರ್ಕಾರಗಳು ಸಂವಿಧಾನದ ಆಶಯದಂತೆ ಗ್ರಾಮ ಪಂಚಾಯತ್‍ಗಳು ಕೇವಲ ಅಭಿವೃದ್ಧಿ ಸಂಸ್ಥೆಗಳಲ್ಲ, ಅವು ‘ಗ್ರಾಮ ಸರ್ಕಾರ’ಗಳಾಗಿ ಕೆಲಸ ಮಾಡಬೇಕು. ಅದೇ ರೀತಿ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್‍ಗಳು ಆಯಾ ಹಂತದ ಸರ್ಕಾರಗಳಾಗಿ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಶಕ್ತಿ ಹೊಂದಿವೆ ಎಂದು ಆರ್.ಡಿ.ಪಾಟೀಲ್ ತಿಳಿಸಿದರು.

ಜಾಗೃತಿಗಾಗಿ ಅಭಿಯಾನಕ್ಕೆ ಸೂಚನೆ:

ಬರುವ ಜನವರಿ 26 ರ ಗಣರಾಜ್ಯೋತ್ಸವದ ಒಳಗೆ ಪ್ರತಿಯೊಂದು ಮನೆಗೆ ಗ್ರಾಮ ಸಭೆ ಮತ್ತು ವಾರ್ಡ್ ಸಭೆಗಳ ಜವಾಬ್ದಾರಿ ಹಾಗೂ ಅಧಿಕಾರಗಳ ಬಗ್ಗೆ ಮಾಹಿತಿ ನೀಡುವ ಕರಪತ್ರಗಳನ್ನು ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಸೂಚನೆ ನೀಡಿದರು. ಜನರಿಗೆ ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸಿದರೆ ಮಾತ್ರ ಪಂಚಾಯತ್ ರಾಜ್ ವ್ಯವಸ್ಥೆ ಯಶಸ್ವಿಯಾಗಲು ಸಾಧ್ಯ. ಈ ವಿಷಯದಲ್ಲಿ ಚಿತ್ರದುರ್ಗ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಬೇಕು ಎಂದು ಆರ್.ಡಿ.ಪಾಟೀಲ್ ಹೇಳಿದರು.

ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧ:

ದಶಕಗಳಿಂದ ಬರಗಾಲದ ನೆರಳಿನಲ್ಲಿದ್ದ ಚಿತ್ರದುರ್ಗ ಜಿಲ್ಲೆಯ ಸಮಗ್ರ ಬದಲಾವಣೆಗೆ ಜಿಲ್ಲಾಡಳಿದಿಂದ ನೀಲನಕ್ಷೆ ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್.ಟಿ ಸಭೆಯಲ್ಲಿ ತಿಳಿಸಿದರು.

ಇದನ್ನೂ ಓದಿ: ಬೇಕರಿ ಉತ್ಪನ್ನ ತಯಾರಿ ತರಬೇತಿಗೆ ಅರ್ಜಿ ಅಹ್ವಾನ

ಜಿಲ್ಲೆಯ ಪ್ರಮುಖ ಕನಸಾದ ಭದ್ರಾ ಮೇಲ್ದಂಡೆ ಯೋಜನೆ ಅಂತಿಮ ಹಂತ ತಲುಪಿದ್ದು, ಮುಂದಿನ 3-4 ತಿಂಗಳಲ್ಲಿ ಜಿಲ್ಲೆಯ ಭೂಮಿಗೆ ನೀರು ಹರಿಯುವ ನಿರೀಕ್ಷೆಯಿದೆ. ಇದು ಕೃಷಿ ವಲಯದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಲಿದೆ. ಜಿಲ್ಲೆಯ ಆರ್ಥಿಕತೆಗೆ ಬಲ ತುಂಬಲು ಇಲ್ಲಿನ ಸಮೃದ್ಧ ಖನಿಜ ಸಂಪತ್ತನ್ನು ಬಳಸಿಕೊಳ್ಳಲು ಯೋಜಿಸಲಾಗಿದೆ. ಮ್ಯಾಂಗನೀಸ್, ಕಬ್ಬಿಣದ ಅದಿರು ಹಾಗೂ ಸುಣ್ಣದ ಕಲ್ಲಿನ ಗಣಿಗಾರಿಕೆಯಿಂದ ಬರುವ ರಾಯಧನವನ್ನು ಜಿಲ್ಲೆಯ ಮೂಲಸೌಕರ್ಯ ಅಭಿವೃದ್ಧಿಗೆ ವಿನಿಯೋಗಿಸಲಾಗುವುದು. 

ಆಡಳಿತಾತ್ಮಕವಾಗಿ ಜಿಲ್ಲೆಯನ್ನು ಚುರುಕುಗೊಳಿಸಲು 375 ಹೊಸ ಗ್ರಾಮಗಳನ್ನು ಸೇರ್ಪಡೆಗೊಳಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ರಾಜ್ಯದಲ್ಲೇ ಅತಿ ಹೆಚ್ಚು ಎಸ್.ಸಿ ಹಾಗೂ ಎಸ್.ಟಿ ಜನಸಂಖ್ಯೆ ಹೊಂದಿರುವ ಜಿಲ್ಲೆಯಾಗಿರುವುದರಿಂದ ಸಾಮಾಜಿಕ ನ್ಯಾಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ತಳಮಟ್ಟದ ಅಗತ್ಯತೆಗಳನ್ನು ಆಧರಿಸಿ ಸಿದ್ಧಪಡಿಸಲಾದ ಯೋಜನೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ ಜಿಲ್ಲಾಧಿಕಾರಿ ವೆಂಕಟೇಶ್.ಟಿ ತಿಳಿಸಿದರು.

ಜಿಲ್ಲಾ ಅಭಿವೃದ್ಧಿಗೆ ರೂ.6,085 ಕೋಟಿ ಕ್ರಿಯಾಯೋಜನೆ: ಫೆ.12ಕ್ಕೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಜಿಲ್ಲಾ ಪಂಚಾಯತ್ 2026-27 ನೇ ಸಾಲಿಗಾಗಿ ಒಟ್ಟು ರೂ.6,085.97 ಕೋಟಿಗಳ ಬೃಹತ್ ಅನುದಾನದ ಬೇಡಿಕೆಯನ್ನು ಸಿದ್ಧಪಡಿಸಿದೆ. ಈ ಅಂತಿಮ ವರದಿಯನ್ನು ಫೆಬ್ರವರಿ 12 ರಂದು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಸಿಇಒ ಡಾ.ಆಕಾಶ್ ತಿಳಿಸಿದರು.

ಇದನ್ನೂ ಓದಿ: ಸರ್ಕಾರಿ ನೌಕರರ ಕ್ರೀಡಾಕೂಟ ಮುಂದೂಡಿಕೆ | ಆನ್‍ಲೈನ್‍ ನೊಂದಣಿಗೆ ಜ.24 ಕೊನೆಯ ದಿನ | ಮಾಲತೇಶ್ ಮುದ್ದಜ್ಜಿ

ಈ ಯೋಜನೆಯಲ್ಲಿ ಸಾಮಾಜಿಕ ನ್ಯಾಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಜನಸಂಖ್ಯೆ ಆಧಾರಿತ ಎಸ್‍ಸಿಪಿ (ರೂ.2,567 ಕೋಟಿ) ಮತ್ತು ಟಿಎಸ್‍ಪಿ (ರೂ.1,102 ಕೋಟಿ) ಯೋಜನೆಗಳ ಪಾಲು ಶೇ. 50ಕ್ಕಿಂತ ಹೆಚ್ಚಿದೆ. ಶಿಕ್ಷಣ ಕ್ಷೇತ್ರಕ್ಕೆ ಸಿಂಹಪಾಲು ಅನುದಾನ ಮೀಸಲಿಡಲಾಗಿದೆ. 

ಮೂಲಸೌಕರ್ಯ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆಗೆ ರೂ.550 ಕೋಟಿ ಬೇಡಿಕೆ ಇಡಲಾಗಿದೆ. ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಸಿದ್ಧಪಡಿಸಲಾದ ಈ ವರದಿಯು ಜಿಲ್ಲೆಯ ಆರ್ಥಿಕ ಮತ್ತು ಭೌತಿಕ ಪ್ರಗತಿಗೆ ವೇಗ ನೀಡುವ ನಿರೀಕ್ಷೆಯಿದೆ ಎಂದರು.

ಗ್ರಾ.ಪಂ. ಮಟ್ಟದಿಂದಲೇ ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಸಿದ್ದತೆ :

ರೈತರ ಬೇಡಿಕೆಗಳಿಗೆ ಅನುಗುಣವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೃಷಿ ಅಧಿಕಾರಿಗಳು ಮತ್ತು ತಾಲೂಕು ಅಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಿ ಕೃಷಿಗೆ ಸಂಬಂಧಿಸಿದ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಸಭೆಯಲ್ಲಿ ಹೇಳಿದರು.   

ಇದನ್ನೂ ಓದಿ: ನೃತ್ಯ ಕಲಾವಿದೆ ಶ್ವೇತಾ ಭಟ್ ಅವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಅವಾರ್ಡ್ 

ಗ್ರಾಮ ಸಭೆಗಳ ಮೂಲಕ ಸಂಗ್ರಹಿಸಿದ ಈ ಎಲ್ಲಾ ಬೇಡಿಕೆಗಳನ್ನು ಮೊದಲು ತಾಲೂಕು ಮಟ್ಟದಲ್ಲಿ, ನಂತರ ಜಿಲ್ಲಾ ಮಟ್ಟದಲ್ಲಿ ಕ್ರೋಢೀಕರಿಸಲಾಗುತ್ತದೆ. ರೈತರಿಗೆ ಹೊಸ ತಳಿಗಳ ಪರಿಚಯ ಮತ್ತು ಆಧುನಿಕ ಬೆಳೆ ಪದ್ಧತಿಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಯಾಂತ್ರೀಕರಣ ಮತ್ತು ಸೂಕ್ಷ್ಮ ನೀರಾವರಿ ಉತ್ತೇಜನ ನೀಡಲಾಗುತ್ತದೆ. ಮಣ್ಣಿನ ಗುಣಮಟ್ಟ ಪರೀಕ್ಷಿಸಿ, ಅದಕ್ಕೆ ಅನುಗುಣವಾಗಿ ಮಾರ್ಗದರ್ಶನ ನೀಡುಲಾಗುತ್ತಿದೆ ಎಂದರು.

ಕಾಲೋನಿ ಅಭಿವೃದ್ಧಿ :

ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಜನಸಂಖ್ಯೆಗೆ ಅನುಗುಣವಾಗಿ ಅಲ್ಪಸಂಖ್ಯಾತರು ವಾಸಿಸುವ ಕಾಲೋನಿಗಳ ಸಮಗ್ರ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಜಿ.ರೇಖಾ ತಿಳಿಸಿದರು. ಇದರೊಂದಿಗೆ ಶಾಲೆಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸುವುದು ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚಿನ ಹಾಸ್ಟೆಲ್ ಸೌಲಭ್ಯಗಳನ್ನು ಕಲ್ಪಿಸುವುದು. ಮುಂದಿನ ವರ್ಷಕ್ಕೆ ಅಗತ್ಯ ಇರುವ ವಿದ್ಯಾರ್ಥಿ ವೇತನ ಅನುದಾನವನ್ನು ಯೋಜನೆಯಲ್ಲಿ ಕೋರಲಾಗಿದೆ ಎಂದರು.

ತೆರಿಗೆ ಹಣ ಬಳಕೆ ಅಧಿಕಾರ ನೀಡಿಲಿ:

ಗ್ರಾಮ ಪಂಚಾಯಿತಿ ವಸೂಲಿ ಮಾಡುವ ತೆರಿಗೆ ಪಾಲಿನಲ್ಲಿ ಶೇ. 24 ರಷ್ಟನ್ನು ಗ್ರಂಥಾಲಯ, ಆರೋಗ್ಯ ಮುಂತಾದ ಸೆಸ್‍ಗಳ ರೂಪದಲ್ಲಿ ಸರ್ಕಾರಕ್ಕೆ ಪಾವತಿಸಬೇಕಿದೆ. ಇದರೊಂದಿಗೆ ಶೇ. 25 ರಷ್ಟು ಎಸ್.ಸಿ. ಎಸ್.ಎಸ್ಟಿ ನಿಧಿಯನ್ನು ಕೇವಲ ವೈಯಕ್ತಿಕ ಫಲಾನುಭವಿ ಆಧಾರಿತ ಸೌಲಭ್ಯಗಳಿಗೆ ಬಳಸಬೇಕಿದ್ದು, ಆ ಕಾಲೋನಿಗಳ ರಸ್ತೆ ಅಥವಾ ಮೂಲಭೂತ ಸೌಕರ್ಯಗಳಿಗೆ ಬಳಸಲು ಅವಕಾಶವಿಲ್ಲದಿರುವುದು ಅಭಿವೃದ್ಧಿಗೆ ಅಡ್ಡಿಯಾಗಿದೆ ಎಂದು ಮೆದೆಹಳ್ಳಿ ಪಿಡಿಓ ಪಾತಣ್ಣ ಹೇಳಿದರು.  

ಇದನ್ನೂ ಓದಿ: ರೈಲ್ವೆ ಸಮಸ್ಯೆಗಳಿಗೆ ಶೀಘ್ರ ಮುಕ್ತಿ | ಕೆ.ಸಿ.ವೀರೇಂದ್ರ (ಪಪ್ಪಿ)

15ನೇ ಹಣಕಾಸು ಯೋಜನೆಯಡಿ ಬರುವ ಹಣದಲ್ಲಿ ಶೇ. 60 ರಷ್ಟು ಭಾಗವನ್ನು ಕಡ್ಡಾಯವಾಗಿ ಕುಡಿಯುವ ನೀರು ಮತ್ತು ನೈರ್ಮಲ್ಯಕ್ಕೆ ಮೀಸಲಿಡಬೇಕಾಗಿರುವುದರಿಂದ, ಇತರೆ ತುರ್ತು ಕಾಮಗಾರಿಗಳಿಗೆ ಹಣದ ಕೊರತೆಯಾಗುತ್ತಿದೆ. ಅನುದಾನದ ಕೊರತೆ ಮತ್ತು ಕಟ್ಟುನಿಟ್ಟಿನ ನಿಯಮಗಳಿಂದಾಗಿ ಅಭಿವೃದ್ಧಿ ಯೋಜನೆಗಳು ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ ಎಂದರು.

ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್, ಉಪಕಾರ್ಯದರ್ಶಿ ಡಾ. ರಂಗಸ್ವಾಮಿ, ಮುಖ್ಯ ಯೋಜನಾಧಿಕಾರಿ ಸಿ.ಎಸ್. ಗಾಯತ್ರಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ ಗಂಜಿಗಟ್ಟೆ, ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ನಾಯಕನಹಟ್ಟಿ ಜಾತ್ರೆ ಪೂರ್ವಸಿದ್ಧತಾ ಸಭೆ | ಮಾರ್ಚ್ 06ರಂದು ದೊಡ್ಡ ರಥೋತ್ಸವ

ವಿವಿಧ ಇಲಾಖೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪೌರಾಯುಕ್ತರು, ಮುಖ್ಯಾಧಿಕಾರಿಗಳು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ಪಿಡಿಒ ಗಳು ಯೋಜನೆ ವರದಿ ಸಿದ್ದತೆ ಹಾಗೂ ಅನುದಾನ ಹಂಚಿಕೆ ಕುರಿತು ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ್ ಅವರೊಂದಿಗೆ ಸಂವಾದ ನಡೆಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BlueprintChitradurgaChitradurga newsD.R. PatilDevelopmentಅಭಿವೃದ್ಧಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಿ.ಆರ್. ಪಾಟೀಲ್ನೀಲನಕ್ಷೆ
Share This Article
Facebook Email Print
Previous Article ಎಳನೀರು ಕಿಡ್ನಿ ಆರೋಗ್ಯಕ್ಕೆ ಉತ್ತಮವೇ?
Leave a Comment

Leave a Reply Cancel reply

Your email address will not be published. Required fields are marked *

ಎಳನೀರು ಕಿಡ್ನಿ ಆರೋಗ್ಯಕ್ಕೆ ಉತ್ತಮವೇ?
Life Style
ದಿನ ಭವಿಷ್ಯ
ದಿನ ಭವಿಷ್ಯ | ಜನವರಿ 24 | ಕೈಗೊಂಡ ಕೆಲಸದಲ್ಲಿ ಅಡೆತಡೆಗಳು, ಆರ್ಥಿಕ ಲಾಭ, ದೂರದ ಪ್ರಯಾಣ ಬೇಡ
Dina Bhavishya
Adike rate
ಅಡಿಕೆ ಧಾರಣೆ | 23 ಜನವರಿ | ಕರ್ನಾಟಕ ಅಡಿಕೆ ಮಾರುಕಟ್ಟೆ ರೇಟ್ಸ್‌
ಅಡಕೆ ಧಾರಣೆ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪ್ರತಿಜ್ಞಾವಿಧಿ ಬೋಧನೆ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪ್ರತಿಜ್ಞಾವಿಧಿ ಬೋಧನೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up