CHITRADURGA NEWS | 25 APRIL 2024
ಚಿತ್ರದುರ್ಗ: ಸಾಕ್ಷಾತ್ ಯುದ್ಧಕಾಲ ಎನ್ನುವಂತಿರುವ ಲೋಕಸಭಾ ಚುನಾವಣೆ ಪ್ರಚಾರದ ಒತ್ತಡದ ನಡುವೆಯೂ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬುಧವಾರ ಸಂಜೆ ಡಾ.ರಾಜ್ಕುಮಾರ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಣ್ಣಾವ್ರ ಸ್ಮರಣೆ ಮಾಡಿದರು.
ಚಿತ್ರದುರ್ಗದಲ್ಲಿ ಡಾ.ರಾಜಕುಮಾರ್ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ಜಯಂತಿಯಲ್ಲಿ ಭಾಗವಹಿಸಿದ್ದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ, ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಅವಕಾಶವನ್ನೂ ನಿರಾಕರಿಸಿ ಕನ್ನಡ, ನಾಡು-ನುಡಿಗಾಗಿ ಇಡೀ ಬದುಕನ್ನು ಮೀಸಲಿಟ್ಟ ಡಾ.ರಾಜ್ ಅವರಿಗೆ ಅವರೇ ಸಾಕ್ಷಿ ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ, ಪ್ರಿಯಾಂಕಾ ಗಾಂಧಿಗೆ ಗೋವಿಂದ ಕಾರಜೋಳ ಕೌಂಟರ್
ಡಾ.ರಾಜಕುಮಾರ್ ಅಭಿನಯಿಸಿದ ಚಲನಚಿತ್ರಗಳಲ್ಲಿ ನಿರ್ವಹಿಸಿದ ಬಹುತೇಕ ಪಾತ್ರಗಳು ಸಮಾಜ ಪರಿವರ್ತನೆಗೆ ಕಾರಣವಾಗಿವೆ. ಬಂಗಾರದ ಮನುಷ್ಯ ಸಿನಿಮಾ ವೀಕ್ಷಿಸಿದ ಸಾವಿರಾರು ಯುವಕರು ಕೃಷಿಯ ಕಡೆಗೆ ಮುಖ ಮಾಡಿದ್ದರು. ಮದ್ಯಪಾನ ವಿರುದ್ಧ ಚಳವಳಿ ಸೇರಿದಂತೆ ಅವರು ಮಾಡಿದ ಎಲ್ಲ ಚಿತ್ರಗಳಲ್ಲೂ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಅಜ್ಜಿ ಇಂದಿರಾ ನೆನೆದ ಪ್ರಿಯಾಂಕಾ ಗಾಂಧಿ
ತಮ್ಮ ಪ್ರತಿ ಪಾತ್ರ, ಪ್ರತಿ ಚಲನಚಿತ್ರ ಜನರ ಬದುಕನ್ನು ಉತ್ತಮಪಡಿಸಬೇಕು, ಮಾನವತ್ವ ವಿಜೃಂಭಿಸಬೇಕು, ನಾಡಿನಲ್ಲಿ ಸೌಹಾರ್ದತೆ ನೆಲೆಯೂರಬೇಕೆಂದು ಅಪೇಕ್ಷೆ ಇಟ್ಟುಕೊಂಡು ಬದುಕಿದ ಬಹುದೊಡ್ಡ ನಟ ಎಂದು ಬಣ್ಣಿಸಿದರು.
ಕನ್ನಡ ನಾಡು, ನುಡಿಗೆ ಎಲ್ಲಿ ಧಕ್ಕೆಯಾದರೂ ಖಂಡಿಸಿ ಚಳುವಳಿಗೆ ಧುಮುಕುತ್ತಿದ್ದ ಅಣ್ಣಾವ್ರಿಗೆ ಡಾ.ವಿಷ್ಣುವರ್ಧನ್, ಅಂಬರೀಶ್ ಸೇರಿ ಇಡೀ ಚಲಚಿತ್ರ ರಂಗ ಬೆಂಬಲವಾಗಿ ನಿಲ್ಲುತ್ತಿತ್ತು. ಗೋಕಾಕ್ ಚಳುವಳಿ, ಕಾವೇರಿ ಹೋರಾಟ ಈಗಲೂ ಚಿರಸ್ಮರಣೀಯ ಎಂದರು.
ಇದನ್ನೂ ಓದಿ: ವೋಟರ್ ಕಾರ್ಡ್ ಇಲ್ಲ ಅಂದ್ರು ವೋಟ್ ಮಾಡಿ | ಈ ದಾಖಲೆ ಇರಲಿ
ಒಬ್ಬ ನಟ ತನ್ನ ಬದುಕನ್ನು ಕಟ್ಟಿಕೊಳ್ಳುವ ಜೊತೆ ಜೊತೆಗೆ ಸಮಾಜಕ್ಕೆ ಉತ್ತಮ ಸಂದೇಶ ನೀಡಬಹುದು ಎಂಬುದಕ್ಕೆ ನಾಡಿನಲ್ಲಿ ರಾಜಣ್ಣ ದಿಗ್ಗಜರಾಗಿ ನಮ್ಮ ಮುಂದಿದ್ದಾರೆ ಎಂದು ಹೇಳಿದರು.
ಹಿಂದಿ, ತಮಿಳು ಸೇರಿದಂತೆ ವಿವಿಧ ಭಾಷೆಗಳಿಂದ ಬಹುದೊಡ್ಡ ಅವಕಾಶಗಳು ಹುಡುಕಿಕೊಂಡು ಬಂದರೂ ನಯವಾಗಿ ತಿರಸ್ಕರಿಸಿ ಕನ್ನಡಕ್ಕಾಗಿಯೇ ತಮ್ಮ ಬದುಕನ್ನು ಮೀಸಲಿಟ್ಟಿದ್ದನ್ನು ನಾವು ಮರೆಯುವಂತಿಲ್ಲ ಎಂದು ಚಂದ್ರಪ್ಪ ಶ್ಲಾಘಿಸಿದರು.
ಇದನ್ನೂ ಓದಿ: ಏಪ್ರಿಲ್ 23ರ ಅಡಿಕೆ ಧಾರಣೆ | ಭೀಮಸಮುದ್ರದಲ್ಲಿ ರಾಶಿ ಅಡಿಕೆ ಬೆಲೆ 1500 ಜಿಗಿತ
ಈ ವೇಳೆ ಕಾಂಗ್ರೆಸ್ ಮುಖಂಡ ರಘು, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾಲಸ್ವಾಮಿ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಕಿರಣ್ ಯಾದವ್, ಸತೀಶ್, ಕೋಟಿ, ಹರೀಶ್ ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
