By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    6 hours ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    18 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    18 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    19 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    5 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    6 hours ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    1 day ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    6 hours ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    7 hours ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    1 day ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
Reading: ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಸನ್ನಿಧಾನದಲ್ಲಿ ಬಿ ಫಾರಂ ಪೂಜೆ ಸಲ್ಲಿಸಿದ ಬಿ.ಎನ್.ಚಂದ್ರಪ್ಪ | ರಂಗೇರಿದ ಕೋಟೆನಾಡಿನ ಚುನಾವಣಾ ಅಖಾಡ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಲೋಕಸಮರ 2024

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಸನ್ನಿಧಾನದಲ್ಲಿ ಬಿ ಫಾರಂ ಪೂಜೆ ಸಲ್ಲಿಸಿದ ಬಿ.ಎನ್.ಚಂದ್ರಪ್ಪ | ರಂಗೇರಿದ ಕೋಟೆನಾಡಿನ ಚುನಾವಣಾ ಅಖಾಡ

News Desk Chitradurga News
Last updated: 30 March 2024 07:55
News Desk Chitradurga News
2 years ago
Share
ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಸನ್ನಿಧಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ.
ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಸನ್ನಿಧಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ.
SHARE

CHITRADURGA NEWS | 30 MARCH 2024

ಚಿತ್ರದುರ್ಗ: ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ಬಿ. ಎನ್. ಚಂದ್ರಪ್ಪ ಭೇಟಿ ನೀಡಿ ಬಿ ಫಾರಂ ದೇವರ ಸನ್ನೀಧಿಯಲ್ಲಿಟ್ಟು ಪೂಜೆ ಸಲ್ಲಿಸಿದ್ದಾರೆ. ಬಳಿಕ ಯಾದವ, ಲಂಬಾಣಿ, ಕಬೀರಾನಂದಾ ಮಠ ಸೇರಿದಂತೆ ವಿವಿಧ ಮಠ ಹಾಗೂ ಧರ್ಮಗುರುಗಳನ್ನು ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.

ಇದನ್ನೂ ಓದಿ: ನಾನು ನಂಬಿದವರೇ ನನ್ನ ಕತ್ತು ಕೊಯ್ದರು | ಶಾಸಕ ಚಂದ್ರಪ್ಪ ವಾಗ್ದಾಳಿ

ಈ ವೇಳೆ ಮಾತನಾಡಿದ ಅವರು, ಯಾವುದೇ ಕೆಲಸ ಆರಂಭಿಸುವ ಮುನ್ನ ದೇವರು, ಧರ್ಮಗುರುಗಳು, ಹಿರಿಯರ ಆಶೀರ್ವಾದ ಪಡೆದು ಮುನ್ನಡೆಯುವುದು ನಮ್ಮ ಸಂಸ್ಕೃತಿ. ಭಾರತ ವಿಶ್ವದಲ್ಲಿಯೇ ಅತ್ಯಂತ ಉನ್ನತ ಸಂಸ್ಕøತಿ ಹೊಂದಿದ್ದು, ಪ್ರಾದೇಶಿಕವಾಗಿ ಭಿನ್ನವಾಗಿದ್ದರೂ ದೇವರು ಮತ್ತು ಜನರ ಮೇಲೆ ನಂಬಿಕೆ ಹೊಂದಿದ ವ್ಯಕ್ತಿ ಎಂದೂ ಸಂಕಷ್ಟಕ್ಕೆ ಸಿಲುಕಿದ ಉದಾಹರಣೆ ಇಲ್ಲ ಎಂದು ಹೇಳಿದರು.

ನೂರಾರು ಜಾತಿ, ಹತ್ತಾರು ಧರ್ಮ, ವಿವಿಧ ಆಚರಣೆ, ಅನೇಕ ಭಾಷೆಗಳಲ್ಲಿ ಏಕತೆ ಹೊಂದಿರುವ ಭಾರತೀಯರ ಸಂಸ್ಕಾರ, ಸಂಸ್ಕೃತಿ, ನಡೆ-ನುಡಿ ಶ್ರೀಮಂತವಾಗಿದೆ. ಜೊತೆಗೆ ಇಲ್ಲಿನ ಜನರ ಸೌಹಾರ್ದ ಬದುಕು ಮಾದರಿ ಆಗಿದೆ. ಸ್ವಾಮಿ ವಿವೇಕಾನಂದ, ಬುದ್ಧ, ಬಸವ, ಕನಕ, ವಾಲ್ಮೀಕಿ, ಶ್ರೀಕೃಷ್ಣ, ಗಾಂಧೀಜಿ, ಅಂಬೇಡ್ಕರ್ ಸೇರಿ ಅನೇಕ ಮಹನೀಯರು, ಸಂತರು, ದಾರ್ಶನಿಕರ ಚಿಂತನೆಗಳು ನಾಡಿನ ಸೌಹಾರ್ದತೆಗೆ ಬುನಾದಿ ಹಾಕಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಗೋವಿಂದ ಕಾರಜೋಳ ಗೆ ಗೋ ಬ್ಯಾಕ್ ಸ್ವಾಗತ

ಆದರೆ ಈಚೆಗೆ ಕೆಲವರು ರಾಜಕೀಯ ಕಾರಣಕ್ಕಾಗಿ ಈ ಸೌಹಾರ್ಧತೆ ಹಾಗೂ ಶಾಂತಿಯ ನಾಡಿನಲ್ಲಿ ಜಾತಿ, ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕಾದ ಜವಾಬ್ದಾರಿ ನಾಗರಿಕರ ಮೇಲೆ ಇದೆ ಎಂದು ಹೇಳಿದರು.

ಚುನಾವಣೆಗಳು ಪ್ರಜಾಪ್ರಭುತ್ವದ ಹಬ್ಬವಿದ್ದಂತೆ. ಈ ಸಂದರ್ಭದಲ್ಲಿ ಪ್ರತಿಸ್ಪರ್ಧಿಗಳನ್ನು ಎದುರಾಳಿ, ಚುನಾವಣೆಯನ್ನು ಸಮರ, ಯುದ್ಧ ಎಂಬ ಮಾತುಗಳು ಸರಿಯಲ್ಲ. ನಾವೆಲ್ಲರೂ ಸಹೋದರರು. ಚುನಾವಣೆ ಸಂದರ್ಭದಲ್ಲಿ ಗೆಲುವಿಗಾಗಿ ಸ್ಪರ್ಧೆ ಅನಿವಾರ್ಯ. ಅದು ದ್ವೇಷಕ್ಕೆ ತಿರುಗಬಾರದು. ಜೊತೆಗೆ ಸಜ್ಜನಿಕೆ, ಎಲ್ಲ ಜನರ ಪ್ರೀತಿ ಗಳಿಸುವ ಗುಣ ರಾಜಕಾರಣಿಗಳಲ್ಲಿ ಹೆಚ್ಚಬೇಕು. ಸುಳ್ಳು, ಜಾತಿ, ಧರ್ಮಗಳನ್ನು ಮುಂದಿಟ್ಟು ಜನರ ಮನಸ್ಸು ಗೆಲ್ಲುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದರು.

ಇದನ್ನೂ ಓದಿ: ಏ.4 ರ ವರೆಗೆ ನಾಮಪತ್ರ ಸ್ವೀಕಾರ

ಜನರು ಹೆಚ್ಚು ಪ್ರಜ್ಞಾವಂತರು ಎಂಬುದನ್ನು ಕಳೆದ ವರ್ಷ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆ ಫಲಿತಾಂಶವೇ ಸ್ಪಷ್ಟ ಉದಾಹರಣೆ. ಎಷ್ಟೇ ಅಬ್ಬರ, ಸುಳ್ಳುಗಳು, ರಂಗು-ರಂಗು ಪ್ರಚಾರಕ್ಕೆ ಜನರು ಮಾರು ಹೋಗುವುದಿಲ್ಲ ಎಂಬುದು ದೃಢಪಟ್ಟಿದೆ.

ಸತ್ಯ-ಸುಳ್ಳು ಯಾವುದು, ಯಾವ ಪಕ್ಷ, ಯಾವ ನಾಯಕರು ಜನರ ಹಿತ ಬಯಸುತ್ತಾರೆ ಎಂಬ ಚಿಂತನೆ ಮಾಡಿ ಮತ ಚಲಾಯಿಸುತ್ತಾರೆ. ಆದ್ದರಿಂದಲೇ ಕಾಂಗ್ರೆಸ್ ಪಕ್ಷ ಎಲ್ಲರ ನಿರೀಕ್ಷೆ ಮೀರಿ ರಾಜ್ಯದಲ್ಲಿ 135 ಸ್ಥಾನ ಗೆದ್ದು, ಜನಪರ ಆಡಳಿತ ನೀಡಲು ಸಾಧ್ಯವಾಗಿದೆ. ಇದು ಲೋಕಸಭಾ ಚುನಾವಣೆ ಫಲಿತಾಂಶದಲ್ಲೂ ಮರುಕಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ನಿವೇಶನ ಹಂಚಿಕೆಗೆ ಆಗ್ರಹಿಸಿ ರಸ್ತೆ ಬಂದ್

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದ 25 ಮಂದಿ ಕೂಡ ಸ್ಪರ್ಧೆಗೆ ಅರ್ಹರಿದ್ದರು. ಆದರೆ ಪಕ್ಷ ಎಲ್ಲ ರೀತಿಯ ಚಿಂತನೆ ನಡೆಸಿ ನನಗೆ ಅವಕಾಶ ಮಾಡಿಕೊಟ್ಟಿದೆ. ಉಳಿದವರಿಗೆ ಪಕ್ಷ ಬೇರೆ ರೀತಿ ಸ್ಥಾನಮಾನ ಕೊಡಲಿದೆ. ಅದಕ್ಕೆ ಮುಖ್ಯವಾಗಿಪಕ್ಷನಿಷ್ಠೆ ಅಗತ್ಯ. ಈಗಾಗಲೇ ಬಹಳಷ್ಟು ಮಂದಿಗೆ ಮಂಡಳಿ-ನಿಗಮದಲ್ಲಿ ಸ್ಥಾನಮಾನ ನೀಡಿದೆ. ರಾಜಕಾರಣದಲ್ಲಿ ತಾಳ್ಮೆ ಮುಖ್ಯ ಎಂದು ಹೇಳಿದರು.

ಇದನ್ನೂ ಓದಿ: ಹೆದ್ದಾರಿಯಲ್ಲಿ ಟಯರ್ ಸ್ಫೋಟ ವಾಹನ ಪಲ್ಟಿ ಓರ್ವ ಮೃತ

ಕ್ಷೇತ್ರದಲ್ಲಿ ಏಳು ಮಂದಿ ಶಾಸಕರು, ಹಾಲಿ-ಮಾಜಿ ಸಚಿವರು, ನೂರಾರು ಮುಖಂಡರು, ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕರ್ತರ ಪಡೆ ಇದೆ. ಈಗಾಗಲೇ ಇವರೆಲ್ಲರೂ ಚುನಾವಣೆ ಕಾರ್ಯದಲ್ಲಿ ಮಗ್ನರಾಗಿದ್ದಾರೆ ಎಂದರು.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಗುಡುಗಿದ ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ರೆಡ್ಡಿ, ಎಸ್‍ಟಿಸೆಲ್ ಜಿಲ್ಲಾಧ್ಯಕ್ಷ ಜಯಣ್ಣ, ಕಾಂಗ್ರೆಸ್ ಮುಖಂಡರುಗಳಾದ ಪ್ರಭುಸ್ವಾಮಿ, ಯೂಸುಫ್, ಜಗದೀಶ್, ಮಲ್ಲೇಶ್, ನಾಗರಾಜ್, ಬಂಡೆ ಓಬಣ್ಣ, ರಾಜು, ಮಂಜಕ್ಕ, ಹನುಮಂತಪ್ಪ, ಶಿವಾರೆಡ್ಡಿ, ವಿಶ್ವನಾಥ್ ರೆಡ್ಡಿ, ಗೊರಸಮುದ್ರ ಓಬಣ್ಣ, ಮುದಿಯಪ್ಪ, ಬಸಣ್ಣ, ಕಾಟಯ್ಯ. ಶ್ರೀಕಾಂತ್ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:B formBN ChandrappaChitradurgaPujaSri Guru Tipperudraswamyಚಿತ್ರದುರ್ಗಪೂಜೆಬಿ ಫಾರಂಬಿ.ಎನ್.ಚಂದ್ರಪ್ಪಶ್ರೀ ಗುರು ತಿಪ್ಪೇರುದ್ರಸ್ವಾಮಿ
Share This Article
Facebook Email Print
Previous Article ನಾನು ನಂಬಿದವರೇ ನನ್ನ ಕತ್ತು ಕೊಯ್ದರು | ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಚಂದ್ರಪ್ಪ ವಾಗ್ದಾಳಿ
Next Article ಬೈದವರನ್ನು ಬಂಧು ಎನ್ನಿ…ಯಾರನ್ನೂ ಏನೂ ಅನ್ನಬೇಡಿ | ಗೋವಿಂದ ಎಂ.ಕಾರಜೋಳ
Leave a Comment

Leave a Reply Cancel reply

Your email address will not be published. Required fields are marked *

fish
ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
Life Style
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
Dina Bhavishya
tooth
ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up