CHITRADURGA NEWS | 29 MARCH 2024
ಚಿತ್ರದುರ್ಗ: ಹುಳಿಯಾರು ಹೋಬಳಿ ಬೋರನಕಣಿವೆ ಜಲಾಶಯದ ಬಳಿ ಹಳ್ಳಕ್ಕೆ ನೀರು ಹರಿಸಲು ಹಿರಿಯೂರು ತಾಲ್ಲೂಕಿನ ರೈತರು ಸ್ಥಳೀಯರ ವಿರೋಧದ ನಡುವೆಯೂ ನಾಲೆ ಒಡೆದಿದ್ದಾರೆ.
ಕ್ಲಿಕ್ ಮಾಡಿ ಓದಿ: ಯಡಿಯೂರಪ್ಪ ವಿರುದ್ಧ ಗುಡುಗಿದ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ
ಹುಳಿಯಾರು ಸಮೀಪದ ಬೋರನಕಣಿವೆ ಜಲಾಶಯದಿಂದ ಹಿರಿಯೂರು ತಾಲ್ಲೂಕಿನ ಗಾಯತ್ರಿ ಜಲಾಶಯಕ್ಕೆ ಕುಡಿಯುವ ನೀರಿಗಾಗಿ ಮೂರು ದಿನ ನಿರಂತರವಾಗಿ ನೀರು ಹರಿಸಲು ಪ್ರಾದೇಶಿಕ ಆಯುಕ್ತರು ಆದೇಶಿಸಿದ್ದರು. ಈ ವಿಚಾರವಾಗಿ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಕೂಡ ಪತ್ರ ಬರೆದು, ಗಾಯತ್ರಿ ಜಲಾಶಯಕ್ಕೆ 27 ಕಿ.ಮೀ ಹಳ್ಳದ ಮೂಲಕ ಬೋರನಕಣಿವೆ ಜಲಾಶಯದಿಂದ ಸುಮಾರು ಮೂರು ಅಡಿ ನೀರು ಹರಿಸುವಂತೆ ಪತ್ರ ಬರೆದಿದ್ದರು.
ಕ್ಲಿಕ್ ಮಾಡಿ ಓದಿ: ನಿವೇಶನ ಹಂಚಿಕೆಗೆ ಆಗ್ರಹಿಸಿ ರಸ್ತೆ ಬಂದ್ | ಸರ್ಕಾರದ ವಿರುದ್ಧ ಆಕ್ರೋಶ
ಹುಳಿಯಾರು ಭಾಗದ ರೈತರ ವಿರೋಧದ ನಡುವೆಯೂ ಹಿರಿಯೂರಿನ ರೈತರು ಗುರುವಾರ ಮುಂಜಾನೆಯಿಂದ ಸಂಜೆವರೆಗೆ ಬೋರನಕಣಿವೆ ಜಲಾಶಯದ ಹಳ್ಳಕ್ಕೆ ನೀರು ಹರಿಸಲು ಕಾಲುವೆ ಒಡೆದು ಅಡ್ಡಲಾಗಿ ಮರಳು ಚೀಲಗಳನ್ನು ಇಟ್ಟಿದ್ದರು. ಸಂಜೆ ವೇಳೆ ವಿಷಯ ತಿಳಿದ ಸ್ಥಳೀಯ ರೈತರು ಜಲಾಶಯದ ಬಳಿ ವಿರೋಧ ವ್ಯಕ್ತಪಡಿಸಿದರು.
ಪೊಲೀಸರ ಮಧ್ಯಸ್ಥಿಕೆಯಲ್ಲಿ ಶುಕ್ರವಾರ ರೈತರು ಸಭೆ ಸೇರಿ ಗಾಯತ್ರಿ ಜಲಾಶಯಕ್ಕೆ ನೀರು ಬಿಡುವ ಬಗ್ಗೆ ತೀರ್ಮಾನಿಸಲಿದ್ದಾರೆ ಎಂದು ತಿಳಿದು ಬಂದಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number