CHITRADURGA NEWS | 22 April 2025
ಚಳ್ಳಕೆರೆ: ಕೆರೆಯಲ್ಲಿ ಈಜಲು ತೆರಳಿದ್ದ 6 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ.
ಕೋಡಿಹಳ್ಳಿಯ ಆರು ವರ್ಷದ ಬಾಲಕ ಬಾಲಾಜಿ ಮೃತ ಬಾಲಕ.
Also Read: ಲೋಕಾಯುಕ್ತರ ಬಲೆಗೆ ಬಿದ್ದ ಪುರಸಭೆ ಮುಖ್ಯಾಧಿಕಾರಿ | ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ
ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ಘಟನೆ ನಡೆದಿದೆ. ಸ್ನೇಹಿತರ ಜೊತೆ ಈಜಲು ತೆರಳಿದ್ದ ವೇಳೆ ಘಟನೆ ನಡೆದಿದೆ.
ಬಾಲಕನ ಮೃತ ದೇಹಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂಧಿ ಸತತ ಆರು ತಾಸುಗಳ ಕಾಲ ಹುಡುಕಾಟ ನಡೆಸಿದ್ದು, ಮೋಟಾರ್ ಸಹಾಯದಿಂದ ನೀರು ಹೊರಕ್ಕೆ ಹಾಯಿಸಿದ ನಂತರ ಬಾಲಕನ ದೇಹ ಪತ್ತೆಯಾಗಿದೆ.
ಕೆರೆಯೊಳಗಿನ ಗುಂಡಿಯಲ್ಲಿ ಸುಮಾರು 20 ಅಡಿಯಷ್ಟು ನೀರು ಸಂಗ್ರಹ ಆಗಿದ್ದರಿಂದ ಬಾಲಕನ ಮೃತ ದೇಹ ಹುಡುಕಾಟ ಕಷ್ಟವಾಗಿತ್ತು.
Also Read: ಏ.23ರಂದು ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ, ಇಲ್ಲಿದೆ ಮಾಹಿತಿ….
ಬಾಲಕನ ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
