CHITRADURGA NEWS | 11 AUGUST 2025
ಚಿತ್ರದುರ್ಗ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಯನ್ನು ಸರ್ಕಾರ ಈಡೇರದಿದ್ದರೆ ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆಯನ್ನು ಬಹಿಷ್ಕಾರ ಮಾಡುವುದಾಗಿ ಶಿಕ್ಷಕರ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಒಳಮೀಸಲಾತಿ | ಮಾಜಿ ಸಚಿವ ಎಚ್.ಆಂಜನೇಯ ಮಹತ್ವದ ಸುದ್ದಿಗೋಷ್ಠಿ |ಯಾರಿಗೆ ಎಷ್ಟು ಮೀಸಲಾತಿ ?
ಇಲ್ಲಿನ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿತ್ರದುರ್ಗ ಜಿಲ್ಲಾ ಸಂಘದ ಅಧ್ಯಕ್ಷ ಜಿ.ಬಿ.ಮಹಾಂತೇಶ್ ಮಾತನಾಡಿ, ಸರ್ಕಾರ 2017ರವರೆಗೆ ನೇಮಕವಾದ ಶಿಕ್ಷಕರನ್ನು 1 ರಿಂದ 7ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಿ.
2017 ರವರೆಗೆ ನೇಮಕವಾದ ಶಿಕ್ಷಕರನ್ನು 1 ರಿಂದ 7ಕ್ಕೆ ನೇಮಕವಾದ ಶಿಕ್ಷಕರ ಉಲ್ಲೇಖ (1)ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, 2017ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು ಹಾಗೂ ಯಾವುದೇ ಕಾರಣಕ್ಕೂ 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರ ಪದವೀಧರ ಶಿಕ್ಷಕರೆಂದು ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ ಪದನಾಮೀ ಕರಿಸುವುದು.
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು.
ಇದನ್ನೂ ಓದಿ: ಧರ್ಮಸ್ಥಳಕ್ಕೆ ಅಪಚಾರ ಮಾಡಿದರೆ ಪಾದಯಾತ್ರೆ | ಎಸ್.ಲಿಂಗಮೂರ್ತಿ ಎಚ್ಚರಿಕೆ
ಅನ್ಯ ಕಾರ್ಯಗಳಿಂದ ಹಾಗೂ ಆನ್ಲೈನ್ ಕೆಲಸಗಳಿಂದ ಶಿಕ್ಷಕರ ಮೇಲೆ ಆಗುತ್ತಿರುವ ಒತ್ತಡ ಕಡಿಮೆ ಮಾಡುವುದು. ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರತಿದಿನ ದಿನಚರಿ ಬರೆಯುವ ಪದ್ಧತಿ ಕೈಬಿಡುವಂತೆ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕಿದೆ ಎಂದು ಆಗ್ರಹಿಸಿದರು.
ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಟಿ.ಹನುಮಂತಪ್ಪ ಮಾತನಾಡಿ, ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು ಸುಧೀರ್ಘವಾದ ಸಭೆಯನ್ನು ದಿನಾಂಕ: 04-09-2024 ನಡೆಸಿ ಒಂದು ಸಮಿತಿಯನ್ನು ರಚಿಸಿ 30 ದಿನಗಳಲ್ಲಿ ಸಮಿತಿಯಿಂದ ವರದಿಯನ್ನು ಪಡೆದು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವುದಾಗಿ ಸ್ಪಷ್ಟವಾದ ಭರವಸೆಯನ್ನು ನೀಡಲಾಗಿತ್ತು.
ಆದರೆ ಇಲ್ಲಿಯವರೆಗೂ ಭರವಸೆ ಈಡೇರದೇ ಇರುವುದರಿಂದ ಶಿಕ್ಷಕರಿಗೆ ತೀವ್ರ ನೋವಾಗಿದ್ದು, ಶಿಕ್ಷಕರಿಗೆ ಆಗಿರುವ ಹಾಗೂ ಕಳೆದ ವರ್ಷ ಅನ್ಯಾಯಕ್ಕೆ ನ್ಯಾಯ ದೊರಕಿಸುವಂತೆ ಆಗ್ರಹಿಸಿ ಫ್ರೀಡಂ ಪಾರ್ಕನಲ್ಲಿ ಹೋರಾಟವನ್ನು ನಡೆಸಲಾಗಿತ್ತು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 11 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಜಿಲ್ಲಾ ಮಟ್ಟದಲ್ಲಿ ದಿನಾಂಕ:12-08-2024ರ ಐತಿಹಾಸಿಕ ಹೋರಾಟವನ್ನು ಸರ್ಕಾರಕ್ಕೆ ನೆನಪಿಸುವ ಮತ್ತು ಮುಂದಿನ ಹೋರಾಟದ ಬಗ್ಗೆ ಎಚ್ಚರಿಕೆ ನೀಡಲು ಪ್ರತಿ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಹಾಗೂ ತಾಲ್ಲೂಕಿನ ಎಲ್ಲಾ ಚುನಾಯಿತ ಪದಾಧಿಕಾರಿಗಳು, ಪ್ರತಿನಿಧಿಗಳು, ನಾಮನಿರ್ದೇಶಿತ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಆ.12 ರಂದು ಉಸ್ತುವಾರಿ ಸಚಿವರ, ಜಿಲ್ಲಾಧಿಕಾರಿಗಳ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಹಾಗೂ ಉಪನಿರ್ದೇಶಕರ ಮೂಲಕ ಮುಖ್ಯಮಂತ್ರಿಗಳಿಗೆ, ಶಿಕ್ಷಣ ಸಚಿವರಿಗೆ, ಪ್ರಧಾನ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ಬೇಡಿಕೆ ಈಡೇರಿಸುವಂತೆ ಹಕ್ಕೊತ್ತಾಯ ಹಾಗೂ ಹೋರಾಟ ನಡೆಸುವ ಕುರಿತು ಪತ್ರ ಸಲ್ಲಿಸಲಾಗುವುದು.
ಆ.25 ರೊಳಗೆ ಬೇಡಿಕೆ ಈಡೇರಿಸುವಂತೆ ಒತ್ತಾಯಿಸುವುದು. ಆ.26 ರಂದು ಸರ್ಕಾರಕ್ಕೆ ಮತ್ತು ಇಲಾಖೆಗೆ ಹೋರಾಟದ ಕುರಿತು ಪತ್ರ ರವಾನಿಸಲಾಗುವುದು ದಿನಾಂಕ: 27ರೊಳಗಾಗಿ ಬೇಡಿಕೆ ಈಡೇರದಿದ್ದಲ್ಲಿ ದಿನಾಂಕ: 03-09-2025ರಂದು ರಾಜ್ಯದ ಶಿಕ್ಷಕರೊಡಗೂಡಿ ಎಲ್ಲಾ ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದ ಚುನಾಯಿತ ಪದಾಧಿಕಾರಿ, ಪ್ರತಿನಿಧಿಗಳು, ನಾಮನಿರ್ದೇಶನ ಸದಸ್ಯರನ್ನೊಳಗೊಂಡು ಎಲ್ಲಾ ಶಿಕ್ಷಕರು ಸಾಂದರ್ಭಿಕ ರಜೆ ಹಾಕಿ ರಾಜ್ಯ ಮಟ್ಟದ ಬೃಹತ್ ಅಂತಿಮ ಹೋರಾಟ ಮಾಡಲು ಫ್ರೀಡಂಪಾರ್ಕ್ ಚಲೋ, ಅದೇ ದಿನ 6 ರಿಂದ 8ನೇ ತರಗತಿಗಳ ಪಾಠ ಬೋಧನೆ ಬಹಿಷ್ಕಾರ ಮಾಡಿ, 1 ರಿಂದ 5ನೇ ತರಗತಿಯವರೆಗೆ ಮಾತ್ರ ಪಾಠ ಬೋಧನೆ ಮಾಡಲು ತೀರ್ಮಾನಿಸಲಾಗುವುದು.
ದಿನಾಂಕ: 03-09-2025ರಂದು ಯಾವುದೇ ನಿರ್ಣಯ ಬರದಿದ್ದಲ್ಲಿ ರಾಜ್ಯಾದ್ಯಂತ ಇರುವ ಎಲ್ಲಾ ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದ ಚುನಾಯಿತ ಪದಾಧಿಕಾರಿ, ಪ್ರತಿನಿಧಿಗಳು, ನಾಮನಿರ್ದೇಶಿತ ಸದಸ್ಯರೊಡಗೂಡಿ ದಿನಾಂಕ: 04-09-2025 ರಿಂದ 05-09-2025ರವರೆಗೆ ಅಹೋರಾತ್ರಿ ಧರಣಿ ನಡೆಸುವುದು.
ಇದನ್ನೂ ಓದಿ: ಹೈವೇನಲ್ಲಿ 3 ಕಿ.ಮೀ ಟ್ರಾಫಿಕ್ ಜಾಮ್ | ಚಿತ್ರದುರ್ಗ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ
ಹೋರಾಟದ ಭಾಗವಾಗಿ ಫ್ರೀಡಂಪಾರ್ಕ್ ನಲ್ಲಿಯೇ ಎಲ್ಲಾ ಪದಾಧಿಕಾರಿಗಳ, ಪ್ರತಿನಿಧಿಗಳ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸುವುದು ಹಾಗೆಯೇ ಬೇಡಿಕೆ ಈಡೇರುವವರೆಗೆ ಹೋರಾಟವನ್ನು ಮುಂದುವರೆಸಲಾಗುವುದು ಎಂದರು.
ಸುದ್ದಿಗೊಷ್ಟಿಯಲ್ಲಿ ಸಂಘದ ಗೌರವಾಧ್ಯಕ್ಷ ಕೆ.ವೀರಣ್ಣ, ಕಾರ್ಯಾಧ್ಯಕ್ಷ ಆರ್.ಕೃಷ್ಣಪ್ಪ, ಖಂಜಾಚಿ ಎ.ಮಲ್ಲಿಕಾರ್ಜನಪ್ಪ, ತಾಲ್ಲೂಕು ಅಧ್ಯಕ್ಷ ಕೆಂಚಪ್ಪ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

