CHITRADURGA NEWS | 13 JUNE 2026
ಚಿತ್ರದುರ್ಗ: ಚಿತ್ರದುರ್ಗ ಕರ್ನಾಟಕದ ಮಧ್ಯ ಭಾಗದಲ್ಲಿದ್ದು, ಇಲ್ಲಿ ರಸ್ತೆ ಹಾಗೂ ರೈಲ್ವೆ ಸಂಪರ್ಕವೂ ಉತ್ತಮವಾಗಿದೆ. ಕೈಗಾರಿಕೆಗಳನ್ನು ಸ್ಥಾಪಿಸಲು ಬೇಕಾದ ಎಲ್ಲಾ ಅನುಕೂಲಗಳು ಇವೆ. ಈ ಹಿನ್ನಲೆಯಲ್ಲಿ ಚಿತ್ರದುರ್ಗವನ್ನು ಲಾಜಸ್ಟಿಕ್ ಹಬ್ ಆಗಿ ಮಾಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಕೇಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ತಿಳಿಸಿದರು.

ಇದನ್ನೂ ಓದಿ: ಡಿಜಿಟಲ್ ತಂತ್ರಜ್ಞಾನ ಸಮೀಕ್ಷೆ | ಜಿಲ್ಲೆಯ 90 ವಿದ್ಯಾರ್ಥಿಗಳು ಭಾಗೀ
ನಗರದ ಮಹರ್ಷಿ ವಾಲ್ಮಿಕಿ ಭವನದಲ್ಲಿ ಶನಿವಾರ ಹಿಂದೂ ಎಕಾನಮಿಕ್ ಫೋರಂ ಚಿತ್ರದುರ್ಗ ಚಾಪ್ಟರ್, ವಿ.ಡಿ.ಸಾವರ್ಕರ್ ಸೌಹಾರ್ಧ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಾಗೂ ಬನಶಂಕರಿ ವಾಣಿಜ್ಯ ಸಹಕಾರ ಸಂಘದ ಸಮಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬ್ರಾಂಡ್ ಚಿತ್ರದುರ್ಗ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಹಿಂದೂಗಳು ಒಟ್ಟಾಗಿ ವ್ಯಾಪಾರ, ಉದ್ಯಮಗಳಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎನ್ನುವ ಉದ್ದೇಶದಿಂದ ಸಮಾವೇಶ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಸಿಗುವ ಉತ್ಪನ್ನಗಳನ್ನು ಹೊರಗೆ ಕಳಿಸುವ ಪ್ರಯತ್ನ ಸಮಾವೇಶದ ಉದ್ದೇಶವಾಗಿದೆ ಎಂದರು.
ಹಿಂದೂ ಉದ್ಯಮಿಗಳು ಮತ್ತು ಆರ್ಥಿಕ ನಾಯಕತ್ವವನ್ನು ಒಗ್ಗೂಡಿಸಲು ಕಾರ್ಯನಿರ್ವಹಿಸುತ್ತಿರುವ ಹಿಂದೂ ಎಕನಾಮಿಕ್ ಫೋರಂ, ಪ್ರತಿ ಜಿಲ್ಲೆಯಲ್ಲೂ ಹಿಂದೂಗಳಿಗೆ ಅನುಕೂಲಕರ ಆರ್ಥಿಕ ವಾತಾವರಣ ನಿರ್ಮಿಸುವ ಉದ್ದೇಶದಿಂದ “ಬ್ರಾಂಡ್” ಸಮಾವೇಶಗಳ ಸರಣಿಯನ್ನು ಆಯೋಜಿಸುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಈಗಾಗಲೇ ಹಲವರು ತಮ್ಮ ಉದ್ಯಮಗಳ ಮೂಲಕ ಬ್ರಾಂಡ್ ಆಗಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ: ದಿವ್ಯಾಂಗ ಜನ ಪ್ರಯಾಣಿಕರಿಗೆ ರಿಯಾಯಿತಿ ಗುರುತಿನ ಚೀಟಿ | ಆನ್ಲೈನ್ ಮೂಲಕ ವಿತರಣೆ
ಒಂದು ಕಾಲದಲ್ಲಿ ಚಳ್ಳಕೆರೆ ನಗರ ಮಿನಿ ಬಾಂಬೆ ಎಂದು ಹೆಸರಾಗಿತ್ತು. ಆದರೆ, ಈಗ ಅದು ಅಳಿಸಿ ಹೋಗಿದೆ. ಚಿತ್ರದುರ್ಗವನ್ನು ಲಾಜಸ್ಟಿಕ್ ಹಬ್ ಆಗಿ ಮಾಡಲು ಬೇಕಾದ ಎಲ್ಲಾ ರೀತಿಯಾದ ವಾತಾವರಣ ಇಲ್ಲಿದೆ. ಉತ್ತಮವಾದ ಹವಮಾನ ಇದೆ. ರಸ್ತೆ ಸಂಪರ್ಕ ಚನ್ನಾಗಿ ಇದೆ ಸದ್ಯದಲ್ಲಿಯೇ ಚಿತ್ರದುರ್ಗದಿಂದ ಬೆಂಗಳೂರಿಗೆ ರೈಲ್ವೆ ಸಂಪರ್ಕ ಬರುತ್ತದೆ. ಇಲ್ಲಿನ ಉತ್ಪನ್ನಗಳನ್ನು ಬೇರೆ ಕಡೆಗೆ ಪರಿಚಯಿಸುವ ಕಾರ್ಯವನ್ನು ಹಿಂದೂ ಎಕಾನಮಿಕ್ ಫೋರಂ ಮಾಡಲಿದೆ ಎಂದು ಹೇಳಿದರು.
ಹಿಂದೂ ಎಕಾನಮಿಕ್ ಫೋರಂ ಸಂಘಟನಾ ಕಾರ್ಯದರ್ಶಿ ಟಿ.ಆರ್.ಶಿವಪ್ರಸಾದ್ ಮಾತನಾಡಿ, ಬೀದರ್ನಿಂದ ಮೈಸೂರುವರೆಗೂ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬ್ರಾಂಡ್ ಹೆಸರಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಚಿತ್ರದುರ್ಗವನ್ನು ಲಾಜಿಸ್ಟಿಕ್ ಹಬ್ ಮಾಡುವುದು.
ಪ್ರವಾಸೋದ್ಯಮ ಅಭಿವೃದ್ದಿ, ಮೊಳಕಾಲ್ಮುರು ಸೀರೆಗಳು ಮತ್ತು ಕೈಮಗ್ಗ ಉದ್ಯಮದ ಬೆಳವಣಿಗೆ ಕೃಷಿ ಮತ್ತು ಕೃಷಿ ಆಧಾರಿತ ಉದ್ಯಮಗಳ ಅಭಿವೃದ್ದಿ, ಚಿತ್ರದುರ್ಗದ ರಫ್ತು ಸಾಮಥ್ರ್ಯ ಹೊಂದಿರುವ ಉತ್ಪನ್ನಗಳು, ಡಿಆರ್ಡಿಓ/ಐಐಎಸ್ಸಿ/ಇಸ್ರೊ ಸಂಬಂಧಿತ ಅವಕಾಶಗಳು, ಚಿತ್ರದುರ್ಗವನ್ನು ಕೈಗಾರಿಕಾ ಹಬ್ ಆಗಿ ರೂಪಿಸುವುದು, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ದಿ, ಮಹಿಳಾ ಉದ್ಯಮಿಗಳ ಬೆಳವಣಿಗೆ ಕುರಿತು ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ.
ಹಿಂದೂ ಎಕನಾಮಿಕ್ ಫೋರಂ ಒಂದು ಜಾಗತಿಕ ಆರ್ಥಿಕ ವೇದಿಕೆಯಾಗಿದ್ದು, ಹಿಂದೂ ಕೈಗಾರಿಕೋದ್ಯಮಿಗಳು, ಉದ್ಯಮಿಗಳು, ವ್ಯಾಪಾರಿಗಳು, ಬ್ಯಾಂಕರ್ಗಳು, ಹೂಡಿಕೆದಾರರು, ವೃತ್ತಿಪರರು, ಅಕಾಡೆಮಿಷಿಯನ್ಗಳು ಮತ್ತು ಚಿಂತಕರನ್ನು ಒಂದೇ ವೇದಿಕೆಗೆ ತರುತ್ತಿದೆ ಎಂದು ವಿವರಿಸಿದರು.
ಇದನ್ನೂ ಓದಿ: ಜೂನ್ 16ರಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆಯಲ್ಲಿ KDP ಸಭೆ
ಕಾರ್ಯಕ್ರಮದಲ್ಲಿ ಜಿಲ್ಲೆಯ ಆರ್ಥಿಕ ಪ್ರಗತಿಗೆ ಕೊಡುಗೆ ನೀಡಿರುವ 10 ಹಿರಿಯ ಉದ್ಯಮಿಗಳು ಹಾಗೂ ಉದ್ಯಮಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿ.ಎಂ.ಗ್ರೂಪ್ ನಿರ್ದೇಶಕ ಅನಿತ್ ಕುಮಾರ್, ಜಿಎಚ್.ಆರ್ ಗ್ರೂಪ್ ಸಿಇಓ ಡಾ.ಸಿದ್ದಾರ್ಥ್, ರಾಘವೇಂದ್ರ, ಸ್ವಾಗತ ಸಮಿತಿಯ ಅಧ್ಯಕ್ಷ ಡಾ.ಮಂಜುನಾಥ್, ಉಪಾಧ್ಯಕ್ಷ ವಾಸುದೇವ, ನಾಗೇಂದ್ರ, ಕಾರ್ಯದರ್ಶಿ ದೊಣಸ್ವಾಮಿ, ಜಂಟಿ ಕಾರ್ಯದರ್ಶಿ ಟಿ.ಸಿ.ಪಿ. ಗೀತಾ, ನಂದಿ ನಾಗರಾಜ್, ಆಶೋಕ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
