
CHITRADURGA NEWS | 12 APRIL 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಚುನಾವಣೆಯ ಪ್ರಚಾರದ ಭರಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಗೋವಿಂದ ಎಂ.ಕಾರಜೋಳ ಪರ ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಏ.13 ರಂದು ಮೊಳಕಾಲ್ಮುರು ತಾಲ್ಲೂಕಿಗೆ ಆಗಮಿಸುತ್ತಿದ್ದಾರೆ.
ಶನಿವಾರ ಬೆಳಿಗ್ಗೆ 9 ಗಂಟೆಗೆ ಬಿಜಿ ಕೆರೆ ಪಾದಗಟ್ಟೆ ವೃತ್ತದಲ್ಲಿ ಬಿಜಿ ಕೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕ ಸಮಾರಂಭ ನಡೆಯಲಿದೆ. 10.30ಕ್ಕೆ ರಾಂಪುರಕ್ಕೆ ಯಡಿಯೂರಪ್ಪ ಆಗಮಿಸಿ ಹೋಬಳಿ ಮಟ್ಟದ ಬೃಹತ್ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಬಳಿಕ ಮಧ್ಯಾಹ್ನ 1 ಗಂಟೆಯಿಂದ 3 ರವರೆಗೆ ದೇವಸಮುದ್ರ,ಅಶೋಕ ಸಿದ್ದಾಪುರ, ನಾಗ ಸಮುದ್ರ, ಭೈರಾಪುರ ಗ್ರಾಮಗಳಲ್ಲಿ ಮುಖಂಡರ ಮನೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಹಾನಗಲ್ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ರಾಯಾಪುರ ಗ್ರಾಪಂ ಹಿಂಭಾಗದ ಮೈದಾನದಲ್ಲಿ ಸಾರ್ವಜನಿಕ ಸಮಾರಂಭ ಹಾಗೂ ಸಂಜೆ 5 ಗಂಟೆಗೆ ಮೊಳಕಾಲ್ಮುರು ಪಟ್ಟಣದಲ್ಲಿ ರೋಡ್ ಶೋ ನಡೆಯಲಿದೆ.
ಕ್ಲಿಕ್ ಮಾಡಿ ಓದಿ: ಲೋಕಸಭೆ ಚುನಾವಣೆ: ದೈನಂದಿನ ಪ್ರಚಾರದ ವೆಚ್ಚದ ಲೆಕ್ಕವಿಡಿ | ಮನೋಹರ್ ಮರಂಡಿ ಸೂಚನೆ
ಹಾಲಿ, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯ-ಜಿಲ್ಲಾ ಮಟ್ಟದ ಮುಖಂಡರು ಭಾಗವಹಿಸಲಿದ್ದಾರೆ. ಮೊಳಕಾಲ್ಮುರು ಮಂಡಲದ ಮುಖಂಡರು,ಹಾಲಿ, ಮಾಜಿ ಜನಪ್ರತಿನಿಧಿಗಳು, ಪಕ್ಷದ ಎಲ್ಲಾ ಹಂತದ ಪದಾಧಿಕಾರಿಗಳು, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ, ಬೂತ್ ಸಮಿತಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮೊಳಕಾಲ್ಮುರು ಮಂಡಲ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
