CHITRADURGA NEWS | 09 MARCH 2025
ಚಿತ್ರದುರ್ಗ: ನಗರದಲ್ಲಿ ರಸ್ತೆ ಅಗಲೀಕರಣದ ವಿಚಾರ ತೀವ್ರ ಚರ್ಚೆಯಲ್ಲಿದೆ. ಈ ನಡುವೆಯೇ ಭಾನುವಾರ ಸಂಜೆ ಇದ್ದಕ್ಕಿದ್ದಂತೆ ಎರಡು ಜೆಸಿಬಿಗಳು ಬಂದು ಗಾಂಧಿ ವೃತ್ತದಲ್ಲಿ ನಿಂತ ತಕ್ಷಣ ಕಟ್ಟಡ ಮಾಲಿಕರ ಎದೆಯಲ್ಲಿ ಢವ ಢವ ಶುರುವಾಗಿತ್ತು.
ಕೆಲ ಹೊತ್ತಿನಲ್ಲೇ ಪೊಲೀಸರು ಬಂದರು, ನಗರಸಭೆ ಅಧಿಕಾರಿಗಳು, ಸಾಕಷ್ಟು ಸಾರ್ವಜನಿಕರು ಜಮಾಯಿಸಿದರು. ಸಂಚಾರಕ್ಕೆ ಅಡ್ಡಿಯಾಗಿದ್ದ ಗಾಂಧಿ ವೃತ್ತದ ಪಕ್ಕದಲ್ಲೇ ಇರುವ ಕಟ್ಟಡವೊಂದನ್ನು ತೆರವು ಪ್ರಕ್ರಿಯೆ ಶುರುವಾಯಿತು.

ಇದನ್ನೂ ಓದಿ: ಭೀಕರ ಅಪಘಾತ | ಐದು ಜನ ಸ್ಥಳದಲ್ಲೇ ಸಾವು | ತಮಟಕಲ್ಲು ಬಳಿ ಘಟನೆ
ಹೌದು, ಬಾಟೆಲ್ ನೆಕ್ ರೀತಿಯಲ್ಲಿ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗಿರುವ ಕಟ್ಟಡಗಳ ತೆರವಿಗೆ ನಗರಸಭೆ ಅಧಿಕಾರಿಗಳು ನ್ಯಾಯಾಲಯದಿಂದ ಅನುಮತಿ ಪಡೆದು ಕಾರ್ಯಾಚರಣೆಗೆ ಇಳಿದಿದ್ದಾರೆ.
ಇದರ ಪರಿಣಾಮ ಸಂಚಾರಕ್ಕೆ ಅಡ್ಡಿಯಾಗಿದ್ದ ಗಾಂಧಿ ವೃತ್ತದಲ್ಲಿನ ಹಳೆಯ ಕಟ್ಟಡದ ಮೂರು ಮಳಿಗೆಗಳನ್ನು ಎರಡು ಜೆಸಿಬಿಗಳ ಮೂಲಕ ತೆರವು ಮಾಡಲು ಪೊಲೀಸ್ ಭದ್ರತೆಯೊಂದಿಗೆ ಚಾಲನೆ ನೀಡಲಾಯಿತು.
ಇದನ್ನೂ ಓದಿ: ಔಡಲ ಚಿಗುರು ತಿಂದ 86 ಕುರಿ ಸಾವು
ನಗರಸಭೆಯ ಕಟ್ಟಡ ತೆರವು ಕಾರ್ಯಾಚರಣೆಗೆ ಅಲ್ಲಿನ ಮಳಿಗೆಗಳ ಮಾಲಕರು, ವ್ಯಾಪಾರಿಗಳು ಆಕ್ಷೇಪ ವ್ಯಕ್ತಪಡಿಸಿದರು. ಕಟ್ಟಡ ತೆರವು ಮಾಡುವುದರಿಂದ ನಮ್ಮ ಕಟ್ಟಡಗಳಿಗೂ ತೊಂದರೆಯಾಗಲಿದೆ ಎಂದು ಅಕ್ಕಪಕ್ಕದ ಕಟ್ಟಡದ ಮಾಲಿಕರು ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದರು.
ಪ್ರತಿಕ್ರಿಯಿಸಿದ ಅಧಿಕಾರಿಗಳು, ನ್ಯಾಯಾಲಯದ ಅನುಮತಿ ಪಡೆದು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಇದಕ್ಕೆ ಯಾರೂ ಅಡ್ಡಿಪಡಿಸುವಂತಿಲ್ಲ ಎಂದು ತಿಳಿಸಿದರೂ ಮಾತಿನ ಚಕಮಕಿ ಮುಂದುವರೆದಿತ್ತು. ಅಂತಿಮವಾಗಿ ಪೊಲೀಸರ ಭದ್ರತೆಯೊಂದಿಗೆ ಕಟ್ಟಡ ತೆರವು ಕಾರ್ಯಾಚರಣೆ ಮುಂದುವರೆದಿದೆ.
ಇದನ್ನೂ ಓದಿ: ಮೂವರು ಪೊಲೀಸ್ Inspector ವರ್ಗಾವಣೆ
ನಗರದ ಹೃದಯ ಭಾಗದಲ್ಲಿ ಕಟ್ಟಡ ತೆರವು ಕಾರ್ಯಾಚರಣೆ ಪ್ರಾರಂಭವಾಗುತ್ತಿದ್ದಂತೆ ಸ್ಥಳದಲ್ಲಿ ನೂರಾರು ಜನ ಜಮಾಯಿಸಿದರು. ಸಂಚಾರಕ್ಕೆ ಸಮಸ್ಯೆಯಾಗಿತ್ತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
