
CHITRADURGA NEWS | 17 SEPTEMBER 2024
ಚಿತ್ರದುರ್ಗ: ಚಾಲಕನ ನಿಯಂತ್ರಣ ಕಳೆದುಕೊಂಡ KSRTC ಬಸ್ ರಸ್ತೆ ಪಕ್ಕದಲ್ಲಿದ್ದ ಹಳ್ಳಕ್ಕೆ ನುಗ್ಗಿರುವ ಘಟನೆ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ.
ಚಳ್ಳಕೆರೆಯಿಂದ ತಿಪ್ಪಾರೆಡ್ಡಿಹಳ್ಳಿಗೆ ಹೋಗುವಾಗ, ಕಾಮಸಮುದ್ರ ಬಳಿ ಅಪಘಾತ ನಡೆದಿದ್ದು, ಬಹುತೇ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ಬಂಗಾರದ ಸರ ಕದ್ದ ಕಳ್ಳಿ | ಬಸ್ ನಿಲ್ದಾಣದಿಂದ ಎಸ್ಕೇಪ್
ಬಸ್ಸಿನಲ್ಲಿ ಅಂದಾಜು 30 ಜನ ಪ್ರಯಾಣಿಸುತ್ತಿದ್ದು, ಬಸ್ ಹಳ್ಳಕ್ಕೆ ನುಗ್ಗಿದ ರಭಸಕ್ಕೆ ಬಸ್ಸಿನ ಮುಂಭಾಗ ಜಖಂ ಆಗಿದೆ. ಈ ವೇಳೆ ಮೂರು ಜನರಿಗೆ ಕೈ ಕಾಲುಗಳಿಗೆ ಗಾಯವಾಗಿದೆ. ಸಾಕಷ್ಟು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪರಶುರಾಮಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಕರುವಿನಕಟ್ಟೆ ಸರ್ಕಲ್ ಶಿಕ್ಷಣದ ಶಕ್ತಿ ಕೇಂದ್ರವಾಗಿತ್ತು | ಸಿಪಿಐ ತಿಪ್ಪೇಸ್ವಾಮಿ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
