CHITRADURGA NEWS | 16 AUGUST 2024
ಚಿತ್ರದುರ್ಗ: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಯಲ್ಲದಕೆರೆ-ಹಿರಿಯೂರು ಮಾರ್ಗದಲ್ಲಿ ಸಾರಿಗೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಚಿತ್ರದುರ್ಗ ಜಿಲ್ಲಾ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ ಮೂರ್ತಿ ತಿಳಿಸಿದ್ದಾರೆ.
ಯಲ್ಲದಕೆರೆ-ಹಿರಿಯೂರು ಮಾರ್ಗದಲ್ಲಿ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆಯಾಗಿದೆ ಎಂಬುದಾಗಿ ಕೆಲ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡಿರುತ್ತದೆ.

ಇದನ್ನೂ ಓದಿ: ತಡರಾತ್ರಿ ಚಿರತೆಯ ಅಟ್ಟಹಾಸ | ಬೆಚ್ಚಿದ ಗ್ರಾಮಸ್ಥರು
ಹಿರಿಯೂರು-ದಿಂಡಾವರ-ಚಿಗಳಿಕಟ್ಟೆ-ಯಲ್ಲದಕೆರೆ ಮಾರ್ಗದಲ್ಲಿ 2 ಸಿಂಗಲ್ ಹಾಗೂ ಹಿರಿಯೂರು-ಯಲ್ಲದಕೆರೆ-ಕೆ.ಕೆ.ಹಟ್ಟಿ-ಚಿಗಳಿಕಟ್ಟೆ-ಬ್ಯಾರಮಡು-ಶೇಷಪ್ಪನಹಳ್ಳಿ-ದಸೂಡಿ-ಹೊಯ್ಸಳಕಟ್ಟೆ ಮಾರ್ಗದಲ್ಲಿ 06 ಸಿಂಗಲ್ ಸಾರಿಗೆ ಸೌಲಭ್ಯ ಕಲ್ಪಿಸಲಾಗಿರುತ್ತದೆ.
ಚಿತ್ರದುರ್ಗ-ಹಿರಿಯೂರು-ಹುಳಿಯಾರು ಮಾರ್ಗವಾಗಿ ಮೈಸೂರಿಗೆ ಕಾರ್ಯಾಚರಣೆಯಾಗುವ ಎಲ್ಲ ಸಾರಿಗೆಗಳು ಯಲ್ಲದಕೆರೆಯಲ್ಲಿ ನಿಲುಗಡೆ ಸೌಲಭ್ಯ ಕಲ್ಪಿಸಲಾಗಿರುತ್ತದೆ.
ಇದನ್ನೂ ಓದಿ: ವಿವಿ ಸಾಗರಕ್ಕೆ ಹರಿದು ಬಂತು 1 ಸಾವಿರ ಕ್ಯೂಸೆಕ್ ನೀರು
ವಿಭಾಗದಲ್ಲಿ ಸಂಪನ್ಮೂಲಗಳ ಕೊರತೆ ಇರುವುದರಿಂದ ಸಂಪನ್ಮೂಲಗಳ ಲಭ್ಯತೆ ಮೇರೆಗೆ ಹಿರಿಯೂರು-ಹುಳಿಯಾರು ಮಾರ್ಗದಲ್ಲಿ ಹೆಚ್ಚುವರಿ ಸಾರಿಗೆ ಸೌಲಭ್ಯ ಕಲ್ಪಿಸಲು ಪರಿಶೀಲಿಸಲಾಗುತ್ತಿದೆ ಎಂದು ksrtc ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
