
CHITRADURGA NEWS | 05 FEBRUARY 2024
ಚಿತ್ರದುರ್ಗ: ಅಲಕ್ಷಿತ ಶೋಷಿತ ಸಮುದಾಯಗಳ ಪರವಾಗಿ ಕಳೆದ ದಶಕದಿಂದಲೂ ಕಾರ್ಯನಿರ್ವಹಿಸುತ್ತಾ ಬರುತ್ತಿರುವ ಕರ್ನಾಟಕ ರಾಜ್ಯ ಅಲಕ್ಷಿತ ಸಮುದಾಯಗಳ ಮಹಾವೇದಿಕೆ (ರಿ)ಯಿಂದ ಪ್ರತಿ ವರ್ಷದಂತೆ ಈ ವರ್ಷವೂ 2024-25ನೇ ಸಾಲಿಗೆ ನೀಡಲಾಗುತ್ತಿರುವ ಭಾರತ ರತ್ನ ಕರ್ಪೂರಿ ಠಾಕೂರ್ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ಅಲಕ್ಷಿತ ತಳ ಸಮುದಾಯಗಳಿಗೆ ಸೇರಿದ ಸಣ್ಣ ಮತ್ತು ಅತೀ ಸಣ್ಣ ಜಾತಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ, ಆರ್ಥಿಕ ಚೈತನ್ಯಕ್ಕೆ, ಶೈಕ್ಷಣಿಕ ಪ್ರಗತಿಗೆ ಕಂಕಣಬದ್ಧರಾಗಿರುವಂತಹ, ತಳಸಮುದಾಯಗಳ ಪರವಾಗಿ ಧ್ವನಿ ಎತ್ತುವಂತಹ ಮಹಾನ್ ವ್ಯಕ್ತಿಗಳಿಗೆ ಅಥವ ಸಂಸ್ಥೆಗಳಿಗೆ ‘ಭಾರತ ರತ್ನ ಕರ್ಪೂರಿ ಠಾಕೂರ್’ ಪ್ರಶಸ್ತಿಯನ್ನು ಸಮರ್ಪಿಸಲಾಗುತ್ತಿದೆ.
ಇದನ್ನೂ ಓದಿ: ಚಿತ್ರದುರ್ಗದ ಜ್ಞಾನ ಭಾರತಿ ವಿದ್ಯಾಮಂದಿರದಲ್ಲಿ ಉದ್ಯೋಗಾವಕಾಶ
ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಗಳು ಹಾಗೂ ಸಂಘ ಸಂಸ್ಥೆಗಳು ಅರ್ಜಿಯನ್ನು ಸಲ್ಲಿಸಬಹುದು. ‘ಭಾರತ ರತ್ನ ಕರ್ಪೂರಿ ಠಾಕೂರ್ ಪ್ರಶಸ್ತಿ’ ಯು 25,000 ರೂ.ಗಳ ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.
ಆಸಕ್ತಿ ಹೊಂದಿರುವ ವ್ಯಕ್ತಿಗಳು, ಸಂಘ ಸಂಸ್ಥೆಗಳು ತಾವು ಮಾಡಿರುವ ಸೇವೆಗಳ ಕುರಿತು ಅಗತ್ಯ ಛಾಯಚಿತ್ರಗಳೊಳಗೊಂಡಂತೆ ವಿವರವಾದ ವರದಿ, ಸ್ವ ವಿವರಗಳೊಂದಿಗೆ ಅಗತ್ಯ ದಾಖಲೆಗಳೊಂದಿಗೆ ದಿ.15-02-2024ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.
ಇದನ್ನೂ ಓದಿ: ಆನ್ಲೈನ್ ಜಾಲಕ್ಕೆ ಸಿಲುಕಿದ ಶಿಕ್ಷಕ | ಲಕ್ಷಾಂತರ ರೂಪಾಯಿ ವಂಚನೆ
ಅರ್ಜಿ ಸಲ್ಲಿಸುವ ವಿಳಾಸ; ಟಿ.ತಿಪ್ಪೇಸ್ವಾಮಿ ಸಂಪಿಗೆ, ಅಧ್ಯಕ್ಷರು, ಕರ್ನಾಟಕ ರಾಜ್ಯ ಅಲಕ್ಷಿತ ಸಮುದಾಯಗಳ ಮಹಾವೇದಿಕೆ (ರಿ), ಕನ್ನಡ ಸಂಪಿಗೆ ಭವನ, ಪ್ರಸಾದ್ ಆಸ್ಪತ್ರೆ ರಸ್ತೆ, ವೇಮನ ನಗರ, ಚಿತ್ರದುರ್ಗ-5775501. ಮೊ; 9731338670. ಇ-ಮೇಲ್; kstsblr@gmail.com.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
