By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಕ್ಯಾನ್ಸರ್ ಬೇಗ ಪತ್ತೆ ಮಾಡಿದರೆ ತಡೆಯುವುದು ಸುಲಭ | ಡಾ.ಅಶ್ವಿನಿ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಕ್ಯಾನ್ಸರ್ ಬೇಗ ಪತ್ತೆ ಮಾಡಿದರೆ ತಡೆಯುವುದು ಸುಲಭ | ಡಾ.ಅಶ್ವಿನಿ 

ಮುಖ್ಯ ಸುದ್ದಿ

ಕ್ಯಾನ್ಸರ್ ಬೇಗ ಪತ್ತೆ ಮಾಡಿದರೆ ತಡೆಯುವುದು ಸುಲಭ | ಡಾ.ಅಶ್ವಿನಿ 

News Desk Chitradurga News
Last updated: 5 February 2025 18:47
News Desk Chitradurga News
5 months ago
Share
ಕ್ಯಾನ್ಸರ್ ಬೇಗ ಪತ್ತೆ ಮಾಡಿದರೆ ತಡೆಯುವುದು ಸುಲಭ | ಡಾ.ಅಶ್ವಿನಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 05 FEBRUARY 2025

ಚಿತ್ರದುರ್ಗ: ಕ್ಯಾನ್ಸರ್ ಇರುವುದನ್ನು ಬೇಗ ಪತ್ತೆ ಮಾಡಿದರೆ ಅದನ್ನು ತಡೆಯುವುದು ಸುಲಭ ಆದರೆ ಸಮಯ ಮೀರಿ ಹೋದಾಗ ವೈದ್ಯರ ಚಿಕಿತ್ಸೆ ನಾಟುವುದು ಕಷ್ಟವಾಗುತ್ತದೆ ಎಂದು ಬಸವೇಶ್ವರ ಮೆಡಿಕಲ್ ಕಾಲೇಜಿನ ಡಾ.ಜಿ.ಎಸ್.ಅಶ್ವಿನಿ ತಿಳಿಸಿದರು.

Also Read: ತರಳಬಾಳು ಹುಣ್ಣಿಮೆ ಮಹೋತ್ಸವ | 9 ದಿನಗಳ ಕಾಲ ಭರಮಸಾಗರದಲ್ಲಿ ಹಬ್ಬದ ಸಂಭ್ರಮ

ನಗರದ ಎಸ್‍ಜೆಎಂ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳೆಗೆ ಸ್ತನದ ಕ್ಯಾನ್ಸರ್ ಮತ್ತು ಸರ್ವೈಕಲ್ ಕ್ಯಾನ್ಸರ್ ತೀವ್ರವಾಗಿ ಕಾಡುತ್ತಿವೆ. ಇದರ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವುದು ನಮ್ಮೆಲ್ಲರ ಹೊಣೆ.

ಈ ವರ್ಷ ವಿಶ್ವ ಆರೋಗ್ಯ ಸಂಸ್ಥೆ ಮೂರು ವರ್ಷದ ಮಟ್ಟಿಗೆ ಕ್ಯಾನ್ಸರ್ ಅನ್ನು ತಡೆಯಲು ಮತ್ತು ನಿರ್ವಹಣೆಗಾಗಿ ವೇದವಾಕ್ಯವನ್ನು ಸೂಚಿಸಿದೆ “ಯುನೈಟೆಡ್ ಬೈ ಯೂನಿಕ್” ಅಂದರೆ ಒಬ್ಬ ರೋಗಿಗಿಂತ ಇನ್ನೊಬ್ಬ ರೋಗಿಯು ವಿಭಿನ್ನವಾಗಿ ರೋಗ ಚಿಕಿತ್ಸಾ ನಿರ್ವಹಣೆ ಮಾಡಬೇಕಾಗುತ್ತದೆ.

Also Read: ಗಂಡನ ಮೇಲಿನ ದ್ವೇಷಕ್ಕೆ ಮಗುವಿಗೆ ಬರೆಹಾಕಿದ ಮಹಾತಾಯಿ

ಕ್ಯಾನ್ಸರ್ ರೋಗ ಎರಡನೇ ಮಹಾಮಾರಿ ರೋಗವಾಗಿ ಹೊರಹೊಮ್ಮುತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿದರು.

ಭಾರತದಲ್ಲಿ ಸರಿಸುಮಾರು ಗರ್ಭಕಂಠದ ಕ್ಯಾನ್ಸರ್‍ ಗೆ (ಸರ್ವೈಕಲ್ ಕ್ಯಾನ್ಸರ್) ವರ್ಷಕ್ಕೆ 67,000 ಮಹಿಳೆಯರು ಸಾವನ್ನಪ್ಪುತ್ತಿದ್ದಾರೆ. ಸರಾಸರಿ ಪ್ರತಿ ಎಂಟು ನಿಮಿಷಕ್ಕೆ ಒಬ್ಬ ಮಹಿಳೆ ಈ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದಾಳೆ.

ಇದಕ್ಕೆ ಕಾರಣ HPV ವೈರಾಣು, ರೋಗಲಕ್ಷಣಗಳು ಇದ್ದರೂ ವೈದ್ಯರ ಸಲಹೆ ಮತ್ತು ಸೂಚನೆಗೆ ಬರದೇ ಇರುವುದು. ಕ್ಯಾನ್ಸರ್ ಬಾರದಂತೆ ತಡೆಯಲು ಲಸಿಕೆಗಳು ಇದ್ದರು ತೆಗೆದುಕೊಳ್ಳದೆ ಇರುವುದು ಹಾಗೂ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಭರಿಸಲು ಆಗದೆ ಹೋಗುವುದು ಸರ್ವೇಸಾಮಾನ್ಯವಾಗಿದೆ.

Also Read: ಸಮಾಧಿಯಿಂದ ದೇಹ ಹೊರ ತೆಗೆದು ತನಿಖೆ | ನಾಲ್ಕು ತಿಂಗಳ ಹಿಂದೆ ಅಂತ್ಯಕ್ರಿಯೆ

ಗರ್ಭಕಂಠದಲ್ಲಿ ಮತ್ತು ಸ್ತನಗಳಲ್ಲಿ ಯಾರಿಗಾದರೂ ತೊಂದರೆಗಳು ಕಂಡುಬಂದಲ್ಲಿ ಹೇಳಿಕೊಳ್ಳಲು ಮುಜುಗರ ಪಡಬೇಡಿ ಎಂದು ಕಿವಿಮಾತು ಹೇಳಿದರು.

ಎಸ್ ಜೆ ಎಂ ಔಷಧ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಟಿ.ಎಸ್.ನಾಗರಾಜ್, ಔಷಧ ವಿಭಾಗದ ಮುಖ್ಯಸ್ಥ ಡಾ.ಯೋಗಾನಂದ, ಡಾ.ಸ್ನೇಹಲತಾ, ಡಾ.ಬಸವರಾಜ ಹರ್ತಿ, ಡಾ.ನಟರಾಜ್, ಡಾ.ಅಬೂಬಕರ್ ಸಿದಿಕ್, ಡಾ.ಅರ್ಪಿತ, ಡಾ.ಸೌಮ್ಯ, ಅಕ್ಕಮ್ಮ, ಶರತ್ ಸೇರಿದಂತೆ ವಿವಿಧ ವಿಭಾಗದ ಮುಖ್ಯಸ್ಥರು ಭಾಗವಹಿಸಿದ್ದರು.

Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?

ಕ್ಯಾನ್ಸರ್ ದಿನದ ಅಂಗವಾಗಿ ಪೋಸ್ಟರ್ ಸ್ಪರ್ಧೆ ಮತ್ತು ಕ್ವಿಜ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Basaveshwara Medical CollegeCancerChitradurgaChitradurga newsChitradurga UpdatesDr. G.S. AshwiniKannada Latest NewsKannada NewsSJM Pharmacy CollegeWorld Cancer Dayಎಸ್‍ಜೆಎಂ ಫಾರ್ಮಸಿ ಕಾಲೇಜ್ಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕ್ಯಾನ್ಸರ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾ.ಜಿ.ಎಸ್.ಅಶ್ವಿನಿಬಸವೇಶ್ವರ ಮೆಡಿಕಲ್ ಕಾಲೇಜ್ವಿಶ್ವ ಕ್ಯಾನ್ಸರ್ ದಿನ
Share This Article
Facebook Email Print
Previous Article ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ | 5 ನವಜೋಡಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ 
Next Article arecanut price list ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up