CHITRADURGA NEWS | 11 JULY 2024
ಚಿತ್ರದುರ್ಗ: ಕಾರು-ಗೂಡ್ಸ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ರಾಮನಹಳ್ಳಿ ಗ್ರಾಮದ ಬಳಿ ನಡೆದಿದೆ.
ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಗಳಾದ ಚಿಕ್ಕಜಾಜೂರು ಸಮೀಪದ ಅರಸನಘಟ್ಟದ ಯುವರಾಜ್, ಮುತ್ತಗದೂರಿನ ತಿಪ್ಪೇಸ್ವಾಮಿ ಹಾಗೂ ಹಿರೇಎಮ್ಮಿಗನೂರಿನ ಎಚ್.ಸಿದ್ದೇಶ್ ಮೃತರು. ತೀವ್ರ ಗಾಯಗೊಂಡಿದ್ದ ಚಿಕ್ಕಜಾಜೂರು ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ನಟರಾಜ್ ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿ.ದುರ್ಗದ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ವಿಜಯ ಕುಮಾರ್, ದಂಡಿಗೇನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ದರ್ಶನ್ ಗಾಯಗೊಂಡಿದ್ದಾರೆ.


ಘಟನೆ ವಿವರ: ಕಾರಿಗೆ ಪೂಜೆ ಮಾಡಿಸಲು ದರ್ಶನ್ ಕೃಷಿ ಪತ್ತಿನ ಸಹಕಾರ ಸಂಘದ ಸ್ನೇಹಿತರನ್ನು ಕರೆದು ಕೊಂಡು ಬುಧವಾರ ಮೈಸೂರಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಳಗಿನ ಜಾವ ನಾಗಮಂಗಲ– ಪಾಂಡವಪುರ ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿಯೊಂದು ಕಾರಿಗೆ ಹಿಂಬಂದಿಯಿಂದ ಡಿಕ್ಕಿ ಹೊಡಿದಿದೆ. ಡಿಕ್ಕಿ ರಭಸಕ್ಕೆ ರಸ್ತೆಯಿಂದ ಪಕ್ಕಕ್ಕೆ ಸರಿದ ಕಾರು ಕಂಬವೊಂದಕ್ಕೆ ಗುದ್ದಿದೆ. ಕಾರಿನ ಎಡಭಾಗವು ಸಂಪೂರ್ಣ ನಜ್ಜುಗುಜ್ಜಾಗಿದೆ.
ಕ್ಲಿಕ್ ಮಾಡಿ ಓದಿ: LOKAYUKTHA; ಬೆಳ್ಳಂ ಬೆಳಗ್ಗೆ ಚಿತ್ರದುರ್ಗದಲ್ಲಿ ಲೋಕಾಯುಕ್ತರ ದಾಳಿ
ವಾಹನ ಚಾಲನೆ ಮಾಡುತ್ತಿದ್ದ ದರ್ಶನ್, ಪಕ್ಕದಲ್ಲಿ ಕುಳಿತಿದ್ದ ವಿಜಯ ಕುಮಾರ್ ಅಪಾಯದಿಂದ ಪಾರಾಗಿದ್ದಾರೆ.
ನಾಗಮಂಗಲ ತಾಲ್ಲೂಕು ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆದಿದೆ. ನಾಗಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
