CHITRADURGA NEWS | 10 OCTOBER 2024
ಚಿತ್ರದುರ್ಗ: ರಾಜ್ಯ ಸರ್ಕಾರದ ಮೇಲೆ ಭ್ರಷ್ಟ ಸರ್ಕಾರ ಎಂಬ ಹಣೆಪಟ್ಟಿ ಇದ್ದು ಅದನ್ನು ಮರೆ ಮಾಚಲು ಜಾತಿ ಗಣತಿ ಅಸ್ತ್ರ(Caste census) ಉಪಯೋಗಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
ಕ್ಲಿಕ್ ಮಾಡಿ ಓದಿ: APMC; ಚಿತ್ರದುರ್ಗ ಮಾರುಕಟ್ಟೆ ಧಾರಣೆ | 10 ಅಕ್ಟೋಬರ್ | ಇಂದಿನ ಹತ್ತಿ ರೇಟ್

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮೀಸಲಾತಿ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ. ಜವಾಹರಲಾಲ್ ನೆಹರು ಮೀಸಲಾತಿ ವಿರೋಧಿಸಿದ್ದರು. ಅದರ ಪತ್ರ ಮೋದಿಯವರು ಇತ್ತೀಚಿಗೆ ಬಿಡುಗಡೆ ಮಾಡಿದ್ದಾರೆ.
Sc, st ಮೀಸಲಾತಿ ಹೆಚ್ಚಿಸಿದ್ದು ಕಾಂಗ್ರೆಸ್ ಅಲ್ಲ , ಬಿಜೆಪಿ ಸರ್ಕಾರ ಎಂದು ಮರೆಯಬಾರದು. ಬಿಜೆಪಿಗೆ ಪ್ರಮಾಣಿಕ ಬದ್ದತೆ ಇದೆ. ಸಿಎಂ ಸಿದ್ದರಾಮಯ್ಯ ಅವರ ಮೇಲೆ ನಮಗೆ ಅನುಮಾನವಿದೆ. ನಿಮ್ಮ ಸರ್ಕಾರ ಭ್ರಷ್ಟಾಚಾರ ಮುಚ್ಚಿ ಹಾಕಲು ಮೀಸಲಾತಿ ನಾಟಕ ಮಾಡುತ್ತಿದ್ದಾರೆ ಎಂದು ದೂರಿದರು.
ಹಿಂದುಳಿದ ವರ್ಗಗಗಳಿಗೆ ಒಳ ಮೀಸಲಾತಿ ನೀಡಬೇಕು ಎಂದು ಬಿಜೆಪಿ ಒತ್ತಾಯಿಸುತ್ತದೆ. ಎಸ್ಟಿ, ಎಸ್ಸಿ ರೀತಿಯಲ್ಲಿ ಹಿಂದುಳಿದ ವರ್ಗಕ್ಕೆ ಒಳಮೀಸಲಾತಿಯಿಂದ ಬಡವರಿಗೆ ಅನುಕೂಲವಾಗಲಿ. ಮುಸ್ಲಿಂ ಜಾತಿಯಲ್ಲಿ 48 ಜಾತಿಗಳಿವೆ. ಒಳಗಿನ ಜಾತಿಗಳಲ್ಲಿ ಬಡವರಿದ್ದು ಅವರಿಗೆ ಸಹ ಒಳ ಮೀಸಲಾತಿ ಜಾರಿಯಾಗಲಿ.
ಕ್ಲಿಕ್ ಮಾಡಿ ಓದಿ: Karnataka governement: ಪ್ರಶಸ್ತಿ ಆಯ್ಕೆ ಸಮಿತಿಗೆ ಹಿರಿಯ ಪತ್ರಕರ್ತ ಕ.ಮ.ರವಿಶಂಕರ್ | ರಾಜ್ಯ ಸರ್ಕಾರದ ಆದೇಶ
ವಾಲ್ಮೀಕಿ ಹಗರಣದಲ್ಲಿ ಇಡೀ ದಾಖಲೆ ಹೊರ ತಂದಿದ್ದು, ಮಾಜಿ ಸಚಿವ ನಾಗೇಂದ್ರ ಅಪ್ತ ವಿಜಯಕುಮಾರ್ ಮೊಬೈಲ್ನಲ್ಲಿ ಇರುವ ದಾಖಲೆ ಮೂಲಕ ಬಯಲಾಗಿದೆ. ಎಸ್ಐಟಿ ಕೇಸ್ನಲ್ಲಿ ನಾಗೇಂದ್ರ ಮತ್ತು ಬಸವನಗೌಡ ದದ್ದಲ್ ಹೆಸರು ದಾಖಲು ಮಾಡಿಲ್ಲ. ಮಹರ್ಷಿ ವಾಲ್ಮೀಕಿ ಹಗರಣದ ತನಿಖೆ ಮಾಡಿದ ತಂಡವನ್ನು ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ವಲಯದಲ್ಲಿ ಬ್ರೇಕ್ ಫಾಸ್ಟ್, ಲಂಚ್ ಮಿಟಿಂಗ್, ಡಿನ್ನರ್ ಪಾರ್ಟಿಗಳು ನಡೆಯುತ್ತಿರುವುದು ಸಿಎಂ ಬದಲಾವಣೆ ಭಾಗಗಳೇ ಆಗಿದೆ. ಸಿದ್ದರಾಮಯ್ಯ ಅವರನ್ನು ಯಾರು ಟೀಕೆ ಮಾಡಬಾರದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಸರಿಯಾದ ವ್ಯವಸ್ಥೆ ಅಲ್ಲ. ಹರಿಯಾಣದಲ್ಲಿ ಬಿಜೆಪಿ ಗೆದ್ದಿರುವುದು ಇವಿಎಂ ಸರಿ ಇಲ್ಲ ಎನ್ನುತ್ತಾರೆ ಆದರೆ ಕಾಂಗ್ರೆಸ್ ಗೆದ್ದರೆ ಮಾತ್ರ ಇವಿಎಂ ಸರಿ ಇದೆ ಎಂಬ ಸಂವಿಧಾನ ವಿರೋಧಿ ನಡವಳಿಕೆ ತೋರಿಸುತ್ತಿದೆ ಎಂದು ರವಿ ತಿಳಿಸಿದರು.
ದಾವಣಗೆರೆ, ಬೆಂಗಳೂರು ನಲ್ಲಿ ಪಾಕಿಸ್ತಾನ ಪ್ರಜೆಗಳು ಪತ್ತೆಯಾಗಿರುವುದು ಆತಂಕದ ಸಂಗತಿಯಾಗಿದೆ. ಭಾರತದ ಆರ್ಥಿಕತೆ ದುರ್ಬಲಗೊಳಿಸಲು ನಕಲಿ ನೋಟು, ಡ್ರಕ್ಸ್ ದಂಧೆ ಪ್ರಕರಣಗಳು ಹೆಚ್ಚುತ್ತಿದೆ. ಕೈಗಾರಿಕೆ ಮತ್ತು ಕಾಫಿ ತೋಟಗಳ ಕೆಲಸಕ್ಕೆ ಬರುತ್ತಿರುವುದು ದೇಶದ ಹಿತ ದೃಷ್ಟಿಯಿಂದ ಅಪಾಯಕಾರಿ ಎಂದರು.
ರತನ್ ಟಾಟಾ ಸಾವು ದೇಶಕ್ಕೆ ನಷ್ಟವಾಗಿದೆ. ರತನ್ ಟಾಟಾ ಅವರನ್ನು ಉದ್ಯಮಿ ಸಂತ ಎಂದು ಅವರನ್ನು ಕರೆಯಬಹುದು. ಅವರ ನಮ್ಮನ್ನೆಲ್ಲ ಅಗಲಿರುವುದು ನಮಗೆ ತುಂಬಲಾರದ ನಷ್ಟವಾಗಿದೆ ಎಂದು ಸಿ.ಟಿ.ರವಿ ಸಂತಾಪ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ರೈತ ಮೋರ್ಚಾ ಕಾರ್ಯದರ್ಶಿ ಮಲ್ಲಿಕಾರ್ಜುನ್, ಭಾರ್ಗವಿ ದ್ರಾವಿಡ್, ಮಾಧ್ಯಮ ವಕ್ತಾರ ನಾಗರಾಜ್ ಬೇದ್ರೆ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
