By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Chitradurga; ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಣೆಗೆ ಕರುನಾಡ ವಿಜಯಸೇನೆ ಒತ್ತಾಯ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Chitradurga; ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಣೆಗೆ ಕರುನಾಡ ವಿಜಯಸೇನೆ ಒತ್ತಾಯ 

ಮುಖ್ಯ ಸುದ್ದಿ

Chitradurga; ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಣೆಗೆ ಕರುನಾಡ ವಿಜಯಸೇನೆ ಒತ್ತಾಯ 

News Desk Chitradurga News
Last updated: 27 September 2024 19:25
News Desk Chitradurga News
9 months ago
Share
ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಣೆಗೆ ಕರುನಾಡ ವಿಜಯಸೇನೆ ಮನವಿ
ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಣೆಗೆ ಕರುನಾಡ ವಿಜಯಸೇನೆ ಮನವಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 27 SEPTEMBER 2024

ಚಿತ್ರದುರ್ಗ: ಐತಿಹಾಸಿಕ ಏಳು ಸುತ್ತಿನ ಕೋಟೆಯಿರುವ ಚಿತ್ರದುರ್ಗ(Chitradurga)ದಲ್ಲಿ ದುರ್ಗೋತ್ಸವ(Durgotsava) ಆಚರಿಸುವಂತೆ ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಕ್ಲಿಕ್ ಮಾಡಿ ಓದಿ: Village Accountants; ಗ್ರಾಮ ಲೆಕ್ಕಾಧಿಕಾರಿಗಳ ಮುಷ್ಕರ ಎರಡನೇ ದಿನಕ್ಕೆ 

ರಾಜಾವೀರ ಮದಕರಿನಾಯಕ, ವೀರವನಿತೆ ಒನಕೆ ಓಬವ್ವಳ ನಾಡು ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸಿ ವರ್ಷಗಳೆ ಉರುಳಿದೆ. ಮೈಸೂರು ದಸರಾ, ಹಂಪಿ ಉತ್ಸವ ಕೊಡಗು ಉತ್ಸವ, ಕಿತ್ತೂರು ಉತ್ಸವ ಆಚರಣೆಗೆ ಕೋಟಿಗಟ್ಟಲೆ ಹಣ ವ್ಯಯಿಸುತ್ತಿರುವ ಸರ್ಕಾರ ಚಿತ್ರದುರ್ಗ ಉತ್ಸವ ಏಕೆ ಆಚರಿಸುತ್ತಿಲ್ಲ.

ಅನೇಕ ಬಾರಿ ಪ್ರತಿಭಟನೆ ನಡೆಸಿ ಒತ್ತಾಯಿಸಿದ್ದೇವೆ. ರಾಜಕಾರಣಿಗಳಿಗೆ ಆಸಕ್ತಿ ಇಲ್ಲದಿರುವುದೇ ದುರ್ಗೋತ್ಸವ ನಡೆಯದಿರಲು ಕಾರಣ ಎಂದು ಪ್ರತಿಭಟನಯಲ್ಲಿ ಆಪಾದಿಸಿದರು.

ವಿಶ್ವಹಿಂದೂ ಪರಿಷತ್, ಭಜರಂಗದಳದವರು ಕಳೆದ ಹದಿನೆಂಟು ವರ್ಷಗಳಿಂದಲೂ ನಿರಂತರವಾಗಿ ಹಿಂದೂ ಮಹಾ ಗಣಪತಿ ಉತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದಾರೆ.

ಕ್ಲಿಕ್ ಮಾಡಿ ಓದಿ: Hindu MahaGanapathi shobhayatra; ಹಿಂದೂ ಮಹಾಗಣಪತಿ ಶೋಭಯಾತ್ರೆಗೆ ಸಜ್ಜಾದ ಕೋಟೆನಾಡು | ಸ್ವರ್ಗದಂತಿರುವ ದುರ್ಗ ನೋಡಿ 

ದುರ್ಗೋತ್ಸವ ಆಚರಣೆಗೆ ಏಕೆ ಕರ್ನಾಟಕ ಸರ್ಕಾರ ಮನಸ್ಸು ಮಾಡುತ್ತಿಲ್ಲ. ಡಿಸೆಂಬರ್ ಒಳಗೆ ದುರ್ಗೋತ್ಸವ ಆಚರಿಸುವಂತೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಉಪಾಧ್ಯಕ್ಷೆ ರತ್ನಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಎಸ್. ಕಾರ್ಯದರ್ಶಿ ಜಗದೀಶ್ ಸಿ. ಉಪಾಧ್ಯಕ್ಷ ಮುಜಾಹಿದ್, ವಿದ್ಯಾರ್ಥಿ ಘಟಕದ ಅಖಿಲೇಶ್, ನಗರಾಧ್ಯಕ್ಷ ಅವಿನಾಶ್, ಯರ್ರಿಸ್ವಾಮಿ, ನಾಗರಾಜ್ ಮುತ್ತು, ಕಮಲ, ಸುರೇಶ್, ಹರೀಶ್‍ಕುಮಾರ್ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:celebrationChitradurgaChitradurga newsChitradurga UpdatescompulsionDurgotsavaKannada Latest NewsKannada NewsKarunada Victory Armyಆಚರಣೆಒತ್ತಾಯಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕರುನಾಡ ವಿಜಯಸೇನೆಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿದುರ್ಗೋತ್ಸವ
Share This Article
Facebook Email Print
Previous Article ಗ್ರಾಮ ಲೆಕ್ಕಾಧಿಕಾರಿಗಳ ಮುಷ್ಕರ Village Accountants; ಗ್ರಾಮ ಲೆಕ್ಕಾಧಿಕಾರಿಗಳ ಮುಷ್ಕರ ಎರಡನೇ ದಿನಕ್ಕೆ 
Next Article ಗೋವಿಂದ ಕಾರಜೋಳ Mines and Steel; ಕಲ್ಲಿದ್ದಲು, ಗಣಿ ಮತ್ತು ಉಕ್ಕು ಇಲಾಖೆ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಗೋವಿಂದ ಕಾರಜೋಳ ನೇಮಕ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up