Connect with us

    ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಮಾಣವಚನ | ಕೋಟೆನಾಡಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

    ಕೋಟೆನಾಡಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

    ಮುಖ್ಯ ಸುದ್ದಿ

    ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಮಾಣವಚನ | ಕೋಟೆನಾಡಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 09 JUNE 2024

    ಚಿತ್ರದುರ್ಗ: ಭಾರತದ ಪ್ರಧಾನ ಮಂತ್ರಿಯಾಗಿ ಸತತ ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಚಿತ್ರದುರ್ಗದಲ್ಲಿ ಸಂಭ್ರಮ ಮನೆ ಮಾಡಿತು.

    ಬಿಜೆಪಿ ಕಾರ್ಯಕರ್ತರು, ನರೇಂದ್ರ ಮೋದಿ ಅವರ ನೂರಾರು ಅಭಿಮಾನಿಗಳು ನಗರದ ವಿವಿಧೆಡೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

    ಇದನ್ನೂ ಓದಿ: ಫೋನ್‌ಪೇ ಆ್ಯಕ್ಟಿವೇಷನ್‌ ಕಾಲ್‌ | ಕೆಲವೇ ನಿಮಿಷಕ್ಕೆ ₹ 1.75 ಲಕ್ಷ ವಂಚನೆ

    ಬಿಜೆಪಿ ಚಿತ್ರದುರ್ಗ ನಗರ ಘಟಕದಿಂದ ಜೆಸಿಆರ್ ಬಡಾವಣೆಯ ಶ್ರೀ ಗಣಪತಿ ಮತ್ತು ಅಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

    ಈ ವೇಳೆ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ಜವಾಹರಲಾಲ್ ನೆಹರು ಅವರು ದೇಶಕ್ಕೆ ಮೂರು ಬಾರಿ ಪ್ರಧಾನಿಯಾಗಿದ್ದರು. ಅವರ ನಂತರ ಯಾರೂ ಕೂಡಾ ಮೂರು ಅವಧಿಗೆ ಪ್ರಧಾನಿ ಆಗಿರಲಿಲ್ಲ. ಈಗ ಬಿಜೆಪಿ ನಾಯಕ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವುದು ಹೊಸ ದಾಖಲೆಯಾಗಿದೆ ಎಂದರು.

    ಇದನ್ನೂ ಓದಿ: ಹತ್ತಿ ಬೆಳೆಗಾರರ ಜಾಗೃತಿ ಸಮಾವೇಶ | ಬೆಳೆಯ ಬಗ್ಗೆ ವೈಜ್ಞಾನಿಕ ಮಾಹಿತಿ

    ದೇಶದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿ ಮಾಡಿರುವ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಳೆದ 10 ವರ್ಷಗಳಲ್ಲಿ ದೇಶವನ್ನು ಉತ್ತಮವಾಗಿ ಮುನ್ನಡೆಸುತ್ತಿದ್ದಾರೆ. ಅಭಿವೃದ್ಧಿಯ ಪಥಕ್ಕೆ ತಂದಿದ್ದಾರೆ. ಈಗ ಮುಂದಿನ ಐದು ವರ್ಷಗಳಲ್ಲಿ ದೇಶವನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯುವ ಸಂಕಲ್ಪ ಮಾಡಿದ್ದಾರೆ ಎಂದರು.

    ಇದನ್ನೂ ಓದಿ: ಗಿಡ ನೆಟ್ಟರೆ ತಾಪಮಾನ ಇಳೆಯುತ್ತೆ, ಮಳೆ ಹೆಚ್ಚಾಗುತ್ತೆ | ಎಂ.ಸಿ.ರಘುಚಂದನ್

    ಈ ವೇಳೆ ಬಿಜೆಪಿ ನಗರ ಘಟಕದ ಅಧ್ಯಕ್ಷ ನವೀನ್ ಚಾಲುಕ್ಯ, ನಗರಸಭೆ ಸದಸ್ಯರಾದ ರೋಹಿಣಿ, ಹರೀಶ್, ಕೃಷ್ಣಮೂರ್ತಿ, ವಕ್ತಾರರಾದ ದಗ್ಗೆ ಶಿವಪ್ರಕಾಶ್, ನಾಗರಾಜ್ ಬೇದ್ರೆ, ನಾಗೇಂದ್ರಪ್ಪ, ಮುರುಗೇಶ್, ರಮೇಶ್, ಸೋಮಣ್ಣ, ಆದರ್ಶ, ಕಲಾ, ವಿರೂಪಾಕ್ಷ, ಗೋಪಿ, ವೆಂಕಟೇಶ್, ಪ್ರದೀಪ್, ವೆಂಕಟೇಶ್ ಮತ್ತಿತರರು ಭಾಗವಹಿಸಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top