CHITRADURGA NEWS | 06 DECEMBER 2025
ಚಿತ್ರದುರ್ಗ: ನಗರದ ನ್ಯಾಯಾಲಯದ ಆವರಣದಲ್ಲಿ ಸಂಭ್ರಮ ಮನೆ ಮಾಡಿದ್ದು, ವಕೀಲರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ.
ನ್ಯಾಯಾಲಯದ ಆವರಣದಲ್ಲಿ ನಡೆದ ವಕೀಲರ ದಿನಾಚರಣೆ ವೇದಿಕೆ ಕಾರ್ಯಕ್ರಮದಲ್ಲಿ 50 ವರ್ಷ ಹಾಗೂ 225 ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿದ ಹಿರಿಯ ನ್ಯಾಯವಾದಿಗಳನ್ನು ನ್ಯಾಯಾಧೀರು, ಹಿರಿಯ ಹಾಗೂ ಕಿರಿಯ ವಕೀಲರು ಸೇರಿ ಗೌರವಿಸಿದೆ.
ವಕೀಲರ ಸಮುದಾಯ ಭವನ ಅಗತ್ಯ:
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್ ಅವರು ಮಾತನಾಡುತ್ತಾ, ವಕೀಲರು ಮತ್ತು ನ್ಯಾಯಾಧೀಶರು ಒಂದಾದರೆ ಮಾದರಿ ಸೇವಾ ಕಾರ್ಯ ಮಾಡಬಹುದು ಎಂದು ತಿಳಿಸಿದರು.
ಇದನ್ನೂ ಓದಿ: ಡಿಸೆಂಬರ್ 7 ರಂದು ಚಿತ್ರದುರ್ಗದ ವಿವಿಧೆಡೆ ನಿಷೇಧಾಜ್ಞೆ | ಡಿಸಿ ಟಿ.ವೆಂಕಟೇಶ್
ವಕೀಲರ ದಿನಾಚರಣೆಯ ದಿನವೂ ಆಗಬೇಕು. ಇಡೀ ರಾಜ್ಯದಲ್ಲೇ ಚಿತ್ರದುರ್ಗ ವಕೀಲರ ಸಂಘ ವಿಶೇಷವಾಗಿದೆ ಎಂದರು.
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಸಮಗ್ರ ಅಭಿವೃದ್ಧಿ ನಮ್ಮೆಲ್ಲರ ಕರ್ತವ್ಯವಾಗಿದ್ದು, ವಕೀಲರ ಸಮುದಾಯ ಭವನ ಇದೀಗ ತುಂಬಾ ಅಗತ್ಯವಾಗಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ದೇಶದಲ್ಲಿನ ಎಂತಹ ದೊಡ್ಡ ವ್ಯಕ್ತಿಯಾಗಿದ್ದು, ಆ ವ್ಯಕ್ತಿ ತಪ್ಪು ಮಾಡಿದರೆ ಕಾನೂನಿನಡಿಯಲ್ಲಿ ಶಿಕ್ಷೆಯಿದೆ. ಯಾವುದೇ ವ್ಯಕ್ತಿಗೆ ಅನ್ಯಾಯವಾಗಿದ್ದರೆ ನ್ಯಾಯ ಒದಗಿಸಿಕೊಡುವಲ್ಲಿ ನ್ಯಾಯವಾದಿಗಳ ಕೊಡುಗೆ ಅನನ್ಯವಾದುದು ಎಂದು ಶ್ಲಾಘಿಸಿದರು.
ಇದನ್ನೂ ಓದಿ: ಸುಲಿಗೆ ಮಾಡಿದ್ದ ಮೂರು ಜನರಿಗೆ ಮೂರು ವರ್ಷ ಜೈಲು ಶಿಕ್ಷೆ | 50 ಸಾವಿರ ದಂಡ
ದೇಶದ ಸಂವಿಧಾನ, ಕಾನೂನು, ನ್ಯಾಯಾಂಗ ವ್ಯವಸ್ಥೆಯ ಮೇಲೆ ಜನರ ವಿಶ್ವಾಸ ಮತ್ತು ಅದರ ಸಫಲತೆಗೆ ವಕೀಲರು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ದೇಶದ ರಕ್ಷ ಕವಚವಾದ ಸಂವಿಧಾನ ಆಶಯಗಳು, ತತ್ವಗಳನ್ನು ಅನುಷ್ಠಾನ ಮತ್ತು ಪಾಲನೆ ಮಾಡುವುದರಲ್ಲಿ ವಕೀಲರ ಪಾತ್ರ ಪ್ರಮುಖ ಎಂದರು.
ಚಿತ್ರದುರ್ಗ ಜಿಲ್ಲೆಯ ವಕೀಲರಿಗಾಗಿ ಸಮುದಾಯ ಭವನವನ್ನು ಮಾಡಿಕೊಡಲು ಸೂಕ್ತ ಜಾಗವನ್ನು ಹುಡುಕುತ್ತೇವೆ ನಿಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.
ಇದನ್ನೂ ಓದಿ: ಶೀಲ ಶಂಕಿಸಿ ಹೆಂಡತಿಯನ್ನೇ ಕೊಂದ ಪತಿಗೆ ಜೀವಾವಧಿ ಶಿಕ್ಷೆ
ನ್ಯಾಯಾಧೀಶರಾದ ವೀರಣ್ಣ, ಸೋಮಶೇಖರ್, ಗಂಗಾಧರ ಚನ್ನಬಸಪ್ಪ ಹಡಪದ ಸೇರಿದಂತೆ ಹಲವು ನ್ಯಾಯಾಧೀಶರು ಭಾಗವಹಿಸಿದ್ದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್.ಎಸ್ ಮಹೇಶ್ವರಪ್ಪ, ಪ್ರಧಾನ ಕಾರ್ಯದರ್ಶಿ ಹೆಚ್.ಓ ಜಗದೀಶ ಗುಂಡೇರಿ ಮಾತನಾಡಿದರು.
ಇದನ್ನೂ ಓದಿ: 1.50 ಕೋಟಿ ವೆಚ್ಚದಲ್ಲಿ ಹೊಸಕೆರೆ ಅಭಿವೃದ್ದಿ ಕಾಮಗಾರಿಗೆ ಭೂಮಿಪೂಜೆ
ಅನೇಕ ಹಿರಿಯ ವಕೀಲರು ತಮ್ಮ ಅಭಿಪ್ರಾಯ ಹಂಚಿಕೊಂಡರು. ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ಕೆ.ಎಸ್. ಸಾವಿತ್ರಮ್ಮ, ಖಜಾಂಚಿ ಹೆಚ್. ಸೋಮಶೇಖರ್ ರೆಡ್ಡಿ, ಖಜಾಂಜಿ, ಸಹ ಕಾರ್ಯದರ್ಶಿ ಹೆಚ್.ಬಿ ಕಾಂತರಾಜ್ , ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ ಎಂ ಅಶೋಕ ಬೆಳಗಟ್ಟ, ನೂರ್ ಅಹಮ್ಮದ್.ಕೆ, ಎಂ.ಶಿವಕುಮಾರ, ಬಿ.ಕೆ ಪೈಜಾನ್ ಉಲ್ಲಾ, ಟಿ. ಶಿವಕುಮಾರ್ , ಮಲ್ಲಿಕಾರ್ಜುನ ಎನ್.ಬಿ, ಮಂಜುಳಾ, ವಹಿದಾ ಬಾನು. ಆರ್.ರಜಿನಿ ಉಪಸ್ಥಿತರಿದ್ದರು.
ಸಾರ್ಥಕ ಸೇವೆ ಸಲ್ಲಿಸಿದ ಹಿರಿಯರಿಗೆ ಸನ್ಮಾನ:
ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದಿಂದ ಹಮ್ಮಿಕೊಳ್ಳಲಾಗಿದ್ದ ವಕೀಲರ ದಿನಾಚರಣೆಯಲ್ಲಿ 50 ವರ್ಷ ವಕೀಲ ವೃತ್ತಿಯಲ್ಲಿ ಸಾರ್ಥಕ ಸೇವೆ ಸಲ್ಲಿಸಿರುವ ಕೆ.ಎನ್.ವಿಶ್ವನಾಥಯ್ಯ, ಹೆಚ್.ಎಸ್.ಸತ್ಯನಾರಾಯಣಶೆಟ್ಟಿ ಅವರನ್ನು ಮತ್ತು ಸಮಸ್ತ ನ್ಯಾಯಾಧೀಶರುಗಳನ್ನು, 25 ವರ್ಷ ಪೂರೈಸಿದ ಹಿರಿಯ ವಕೀಲರನ್ನು ನೂತನ ಕಾನೂನು ಅಭಿರಕ್ಷಕರನ್ನು, ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರಾದ ಮಾಲತೇಶ್ ಅರಸ್ ಅವರನ್ನು ಸನ್ಮಾನಿಸಲಾಯಿತು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
