By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: V.Somanna; ಭದ್ರಾ ಮೇಲ್ದಂಡೆ ಯೋಜನೆಗೆ ಒಂದೂವರೆ ತಿಂಗಳಲ್ಲಿ ಕೇಂದ್ರದ ಅನುದಾನ | ಸಚಿವ ಸೋಮಣ್ಣ ಭರವಸೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » V.Somanna; ಭದ್ರಾ ಮೇಲ್ದಂಡೆ ಯೋಜನೆಗೆ ಒಂದೂವರೆ ತಿಂಗಳಲ್ಲಿ ಕೇಂದ್ರದ ಅನುದಾನ | ಸಚಿವ ಸೋಮಣ್ಣ ಭರವಸೆ

ಮುಖ್ಯ ಸುದ್ದಿ

V.Somanna; ಭದ್ರಾ ಮೇಲ್ದಂಡೆ ಯೋಜನೆಗೆ ಒಂದೂವರೆ ತಿಂಗಳಲ್ಲಿ ಕೇಂದ್ರದ ಅನುದಾನ | ಸಚಿವ ಸೋಮಣ್ಣ ಭರವಸೆ

News Desk Chitradurga News
Last updated: 2 October 2024 19:06
News Desk Chitradurga News
9 months ago
Share
ಭದ್ರಾ ಮೇಲ್ದಂಡೆ ಯೋಜನೆಗೆ ಒಂದೂವರೆ ತಿಂಗಳಲ್ಲಿ ಕೇಂದ್ರದ ಅನುದಾನ | ಸಚಿವ ಸೋಮಣ್ಣ ಭರವಸೆ
ಭದ್ರಾ ಮೇಲ್ದಂಡೆ ಯೋಜನೆಗೆ ಒಂದೂವರೆ ತಿಂಗಳಲ್ಲಿ ಕೇಂದ್ರದ ಅನುದಾನ | ಸಚಿವ ಸೋಮಣ್ಣ ಭರವಸೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 02 OCTOBER 2024

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ(Central Govt) ಘೋಷಿಸಿರುವ ರೂ.5300 ಕೋಟಿ ಅನುದಾನದಲ್ಲಿ ಇನ್ನೊಂದುವರೆ ತಿಂಗಳಲ್ಲಿ ಮೊದಲ ಕಂತು ಬಿಡುಗಡೆಯಾಗಲಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ವಿ.ಸೋಮಣ್ಣ(V.Somanna) ಹೇಳಿದರು.

ಕ್ಲಿಕ್ ಮಾಡಿ ಓದಿ: Lake; ಕೆರೆಗಳಿಗೆ ನೀರು ತುಂಬಿಸುವುದು ನನ್ನ ಮೊದಲ ಆದ್ಯತೆ | ಶಾಸಕ ಎಂ.ಚಂದ್ರಪ್ಪ

ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು. ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಹಣಕಾಸು ಸಚಿವೆ ನಿರ್ಮಲ ಸೀತರಾಮನ್ ಚೊತೆ ಚರ್ಚಿಸಲಾಗಿದೆ.

ಮೂರು ಕಂತುಗಳಲ್ಲಿ ಹಣ ನೀಡುವ ಭರವಸೆಯ ಅವರು ನೀಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಕೆಲ ತಾಂತ್ರಿಕ ಮಾಹಿತಿ ಪೂರೈಕೆ ಮಾಡುವಂತೆ ಸೂಚಿಸಲಾಗಿದೆ. ಅವರಿಂದ ಮಾಹಿತಿ ಪೂರೈಕೆಯಾದ ತಕ್ಷಣವೇ ಕೇಂದ್ರದ ಅನುದಾನ ಲಭ್ಯವಾಗಲಿದೆ. ಒಂದುವರೆ ತಿಂಗಳಲ್ಲಿ ಮೊದಲ ಕಂತು ಬಿಡುಗಡೆಯಾಗಲಿದೆ ಎಂದು ಸೋಮಣ್ಣ ಹೇಳಿದರು.

ಚಿತ್ರದುರ್ಗ ಜಿಲ್ಲೆಯ ಬರ ಪರಿಸ್ಥಿತಿ ನಮಗೆ ಗೊತ್ತಿದೆ. ವಾಣಿ ವಿಲಾಸ ಸಾಗರ ಹೊರತು ಪಡಿಸಿ ಇತರೆ ಜಲಾಶಯ ಮೂಲಗಳಿಲ್ಲ. ಅದೂ ಕೂಡಾ ತುಂಬುವುದು ಕಷ್ಟವಾಗಿತ್ತು. ಭದ್ರಾ ಮೇಲ್ದಂಡೆಯಡಿ ಭರ್ತಿ ಮಾಡಲಾಗುತ್ತಿದೆ. ನಾನೂ ಕೂಡಾ ರೈತನ ಮಗನಾಗಿದ್ದು ಕೇಂದ್ರದ ಅನುದಾನ ಬಿಡುಗಡೆಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ. ಸಂಸದ ಗೋವಿಂದ ಕಾರಜೋಳ ಅವರು ನೀರಾವರಿ ವಿಚಾರದಲ್ಲಿ ತಜ್ಞರಷ್ಟೇ ಅನುಭವವಿದೆ. ಅವರ ಮುಂದಾಳತ್ವದಲ್ಲಿ ಅನುದಾನ ಹರಿದು ಬರಲಿದೆ ಎಂದರು.

ಕ್ಲಿಕ್ ಮಾಡಿ ಓದಿ: Power Cut; ಮಾಡದಕೆರೆಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಇದಕ್ಕೂ ಮೊದಲು ಮನವಿ ಸಲ್ಲಿಸಿ ಮಾತನಾಡಿದ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಸಹಕಾರ ಧೋರಣೆಯಿಂದಾಗಿ ಕುಂಟುತ್ತಾ ಸಾಗಿದ್ದು ಈ ಭಾಗದ ಅನ್ನದಾತರ ಆಕ್ರೋಶಕ್ಕೆ ಕಾರಣವಾಗಿದೆ. ಕೇಂದ್ರ ಸರ್ಕಾರದ ಅನುದಾನ ಕಾಯ್ದುಕೊಂಡು ರಾಜ್ಯ ಕೈ ಚೆಲ್ಲಿ ಕುಳಿತಿದೆ . ಕೇಂದ್ರ ಸರ್ಕಾರ ಕೂಡಾ ಘೋಷಿತ 5300 ಕೋಟಿ ರು ಅನುದಾನ ಬಿಡುಗಡೆ ಮಾಡುವಲ್ಲಿ ಉದಾಸೀನ ತೋರಿದೆ ಎಂದು ದೂರಿದರು.

ಕೇಂದ್ರ ಸರ್ಕಾರದಲ್ಲಿ ಸೋಮಣ್ಣ ಜಲಶಕ್ತಿ ರಾಜ್ಯ ಸಚಿವರಾಗಿ ನಿಯೋಜನೆ ಗೊಳ್ಳುತ್ತಿದ್ದಂತೆ ಈ ಭಾಗದ ರೈತರಲ್ಲಿ ಆಶಾದಾಯಕ ಭಾವನೆ ಮೂಡಿತ್ತು. ಭದ್ರಾ ಮೇಲ್ದಂಡೆಗೆ ಕೇಂದ್ರ ತಕ್ಷಣವೇ ಅನುದಾನ ಬಿಡುಗಡೆ ಮಾಡುತ್ತದೆ, ಆಪದ್ಭಾಂಧವರಾಗಿ ಸೋಮಣ್ಣ ಬಂದಿರುವುದು ನಮ್ಮ ಅದೃಷ್ಟವೆಂದೇ ರೈತಾಪಿ ಸಮುದಾಯ ನಂಬಿತ್ತು. ಆದರೆ ಅದು ಹುಸಿಯಾದಂತೆ ಕಾಣಿಸುತ್ತಿದೆ ಎಂದುೂ ನೇರವಾಗಿ ಆರೋಪಿಸಿದರು.

ಭದ್ರಾ ಮೇಲ್ದಂಡೆ ಯೋಜನೆಯಡಿ ತುಮಕೂರು ಶಾಖಾ ಕಾಲುವೆ ಮೂಲಕ 85 ಸಾವಿರ ಹೆಕ್ಟೇರು ಪ್ರದೇಶಕ್ಕೆ ನೀರುಣಿಸಲಾಗುತ್ತಿದೆ. ಸುಮಾರು 131 ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಯೋಜನಾ ವ್ಯಾಪ್ತಿಗೆ ತುಮಕೂರು ಜಿಲ್ಲೆಯ ಶಿರಾ, ಚಿಕ್ಕನಾಯಕನಹಳ್ಳಿ, ಪಾವಗಡ ತಾಲೂಕು ಸೇರಿದೆ.ಹಾಗಾಗಿ ಭದ್ರಾ ಕಾಮಗಾರಿ ಪೂರ್ಣಗೊಳಿಸುವಲ್ಲಿ ಸಚಿವರಾಗಿಯಷ್ಟೇ ಅಲ್ಲ ಸಂಸದರಾಗಿಯೂ ತಾವು ತಮ್ಮ ಕರ್ತವ್ಯ ನಿಭಾಯಿಸಬೇಕಾಗಿದೆ.

ಕ್ಲಿಕ್ ಮಾಡಿ ಓದಿ: Valmiki Jayanti; ಅ.17 ರಂದು ವಾಲ್ಮೀಕಿ ಜಯಂತಿ | ಅರ್ಥಪೂರ್ಣ ಆಚರಣೆಗೆ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಸೂಚನೆ 

ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆಯಾಗುವ ನಿಟ್ಟಿನಲ್ಲಿ ದೆಹಲಿಗೆ ಕಡತ ಹೊತ್ತೊಯ್ದು ಎಲ್ಲ ಕ್ಲಿಯರೆನ್ಸ್ ಮಾಡಿಸಿದ ಹಿಂದಿನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಲಿ ಸಂಸದರಾಗಿ ಲೋಕಸಭೆ ಪ್ರವೇಶಿಸಿದ್ದಾರೆ.

ಕರ್ನಾಟಕದ ಪರವಾಗಿ ಬಹುದೊಡ್ಡ ಶಕ್ತಿಯೇ ಸಂಸತ್ ನಲ್ಲಿ ಪಾಲು ಪಡೆದಿದೆ. ಆದರೆ ಈ ನೆಲದ ಸ್ವಾಭಿಮಾನ, ರೈತರ ಭವಿಷ್ಯದ ಬದುಕಿನ ಪ್ರಶ್ನೆಯಾಗಿರುವ ಭದ್ರಾ ಮೇಲ್ದಂಡೆ ವಿಚಾರದಲ್ಲಿ ಜನ ಪ್ರತಿನಿಧಿಗಳು ಏರಿದ ದನಿಯಲ್ಲಿ ಕೇಂದ್ರದ ಮುಂದೆ ದನಿ ಎತ್ತಿ ಅನುದಾನ ತರುವಲ್ಲಿ ವಿಫಲರಾಗಿರುವುದು ನೋವಿನ ಸಂಗತಿ ಎಂದರು.

ಭದ್ರಾ ಮೇಲ್ದಂಡೆಗೆ 5300 ಕೋಟಿ ಅನುದಾನದ ನೆರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ವತಹ ಚಿತ್ರದುರ್ಗ ನೆಲದಲ್ಲಿಯೇ ನಿಂತು ಘೋಷಣೆ ಮಾಡಿದ್ದರು. 2023-24 ಸಾಲಿನ ಬಜೆಟ್ ನಲ್ಲಿ ಇದು ನಮೂದಾಗಿದೆ.

ಬಿಜೆಪಿಯವರೇ ಕೇಂದ್ರದ ಮುಂದೆ ಭದ್ರಾ ಮೇಲ್ದಂಡೆ ಕಡತ ಒಯ್ದು ಹೊಸ ಕೂಸು ಹುಟ್ಟಿಸಿ, ರಾಷ್ಟ್ರೀಯ ಯೋಜನೆ ನಾಮಕರಣ ಮಾಡಿ ಕುಲಾವಿ ತೊಡಿಸಿದ್ದರು. ಈ ಕೂಸನ್ನು ಲಾಲನೆ ಪಾಲನೆ ಮಾಡುವುದ ಬಿಟ್ಟು ಕತ್ತು ಹಿಸುಕಲು ಮುಂದಾಗುವುದು ಎಷ್ಟರ ಮಟ್ಟಿಗೆ ಸರಿ. ತಕ್ಷಣವೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲ ಸೀತರಾಮನ್ ಮುಂದೆ ಚರ್ಚಿಸಿ 5300 ಕೋಟಿ ರು ಅನುದಾನ ಬಿಡುಗಡೆ ಮಾಡಿಸಿ ತಮ್ಮ ಪಾಲಿನ ಜವಾಬ್ದಾರಿ ಮೆರೆಯಬೇಕೆಂದು ಸಚಿವ ಸೋಮಣ್ಣ ಅವರಿಗೆ ಸಲ್ಲಿಸಲಾದ ಮನವಿಯಲ್ಲಿ ಆಗ್ರಹಿಸಲಾಗಿದೆ.

ಕ್ಲಿಕ್ ಮಾಡಿ ಓದಿ: ADGP ಚಂದ್ರಶೇಖರ್‍ ಅಮಾನತುಗೊಳಿಸಿ ಸೂಕ್ತ ತನಿಖೆಗೆ ಜೆಡಿಎಸ್ ಆಗ್ರಹ 

ಈ ವೇಳೆ ಸಂಸದ ಗೋವಿಂದ ಕಾರಜೋಳ, ಶಾಸಕರಾದ ಎಂ.ಚಂದ್ರಪ್ಪ, ಕೆ.ಎಸ್.ನವೀನ್, ನೀರಾವರಿ ಅನುಷ್ಛಾನ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ, ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ, ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ, ಜಿಲ್ಲಾಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ, ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Bhadra Upper Bank ProjectCentral GovtChitradurgaChitradurga newsChitradurga UpdatesGranthopeKannada Latest NewsKannada NewsMinister Nirmala SitharamanMinister Somannaಅನುದಾನಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಕೇಂದ್ರ ಸರ್ಕಾರಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಭದ್ರಾ ಮೇಲ್ದಂಡೆ ಯೋಜನೆಭರವಸೆಸಚಿವ ಸೋಮಣ್ಣಸಚಿವೆ ನಿರ್ಮಲ ಸೀತರಾಮನ್
Share This Article
Facebook Email Print
Previous Article ಕೆರೆ ಅಭಿವೃದ್ಧಿ ಹಾಗೂ ಹೊಸ ಕೆರೆ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿ ಪೂಜೆ Lake; ಕೆರೆಗಳಿಗೆ ನೀರು ತುಂಬಿಸುವುದು ನನ್ನ ಮೊದಲ ಆದ್ಯತೆ | ಶಾಸಕ ಎಂ.ಚಂದ್ರಪ್ಪ 
Next Article ನೀಲಕಂಠೇಶ್ವರ ದೇಗುಲದಲ್ಲಿರುವ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಸಚಿವ ಡಿ.ಸುಧಾಕರ್ ಮಾಲಾರ್ಪಣೆ Gandhiji – Lal Bahadur Shastri; ಗಾಂಧೀಜಿ – ಶಾಸ್ತ್ರೀಜಿ ಜಯಂತಿ | ಸಚಿವ ಡಿ.ಸುಧಾಕರ್ ಭಾಗೀ
Leave a Comment

Leave a Reply Cancel reply

Your email address will not be published. Required fields are marked *

ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up