
ಚಿತ್ರದುರ್ಗ ನ್ಯೂಸ್
ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಆ.30ರ ಮಧ್ಯಾಹ್ನ ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಚಿತ್ರದುರ್ಗಕ್ಕೆ ಮಧ್ಯಾಹ್ನ 3 ಗಂಟೆಗೆ ಆಗಮಿಸಲಿದ್ದಾರೆ.
ನಗರದ ಕೆಎಚ್ಬಿ ಕಾಲೋನಿ 3ನೇ ಹಂತ, 9ನೇ ಕ್ರಾಸ್ನ ಭರತ್ಕುಮಾರ್ ಅವರ ನಿವಾಸಕ್ಕೆ ಆಗಮಿಸಿ ಮಂಗಳವಾರ ರಾತ್ರಿ ನಿಧನರಾದ ಭರತ್ಕುಮಾರ್ ಅವರ ತಂದೆ, ಪತಂಜಲಿ ಯೋಗ ಸಮಿತಿ ಜಿಲ್ಲಾಧ್ಯಕ್ಷ ಹಾಗೂ ಅಂಚೆ ಇಲಾಖೆ ನಿವೃತ್ತ ಹೆಡ್ಪೋಸ್ಟ್ ಮಾಸ್ಟರ್ ಎಂ.ಮಲ್ಲಿಕಾರ್ಜುನಪ್ಪ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.
ಬಳಿಕ ಕುಟುಂಬಕ್ಕೆ ಸಾಂತ್ವನ ಹೇಳಿ ರಸ್ತೆ ಮಾರ್ಗವಾಗಿ ಸಂಜೆ 4 ಗಂಟೆಗೆ ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಹಿರಿಯೂರು ತಾಲೂಕು ಚಿಕ್ಕಸಿದ್ದವ್ವನಹಳ್ಳಿ ಮೂಲದ ಮಲ್ಲಿಕಾರ್ಜುನಪ್ಪ, ಅಂಚೆ ಇಲಾಖೆ ನಿವೃತ್ತ ನೌಕರರ ಸಂಘಟನೆಯ ರಾಜ್ಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಕಳೆದ ಹಲವು ವರ್ಷಗಳಿಂದ ಚಿತ್ರದುರ್ಗ ಜಿಲ್ಲಾ ಪತಂಜಲಿ ಯೋಗ ಸಮಿತಿ ಅಧ್ಯಕ್ಷರಾಗಿ ಹಲವು ಯೋಗ ಶಾಖೆಗಳನ್ನು ತೆರೆದಿದ್ದರು. ಗುರುವಾರ ಬೆಳಗ್ಗೆ 11 ಗಂಟೆಗೆ ಸ್ವಗ್ರಾಮ ಚಿಕ್ಕಸಿದ್ದವ್ವನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮೃತರ ಕುಟುಂಬದ ಮೂಲಗಳು ತಿಳಿಸಿವೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

