
CHITRADURGA NEWS | 05 JULY 2024
ಚಿತ್ರದುರ್ಗ: ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳರವರ ಆಪ್ತ ಸಹಾಯಕರಾಗಿ ಫಾರ್ಮಸಿ ಅಧಿಕಾರಿ ದಾವಣಗೆರೆಯ ಸಿ.ಹೆಚ್.ದೇವರಾಜ್ ಜಿಲ್ಲಾಧಿಕಾರಿ ಕಚೇರಿಯಿಂದ ಆದೇಶ ಪತ್ರ ಪಡೆದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಇದನ್ನೂ ಓದಿ: Himalaya; ಹಿಮಾಲಯ ಟ್ರಕ್ಕಿಂಗ್ ಮಾಡಿದ ದುರ್ಗದ ವೈದ್ಯ ಡಾ.ಪ್ರಹ್ಲಾದ್
ದಾವಣಗೆರೆ ಲೋಕಸಭಾ ಸದಸ್ಯರ ಆಪ್ತ ಸಹಾಯಕನಾಗಿ ಕಳೆದ ಇಪ್ಪತ್ತು ವರ್ಷಗಳ ಕಾಲ ಕಾರ್ಯನಿರ್ವಹಿಸಿರುವ ಅನುಭವವುಳ್ಳ ಸಿ.ಹೆಚ್.ದೇವರಾಜ್ ಈಗ ಚಿತ್ರದುರ್ಗ ಸಂಸದರ ಆಪ್ತ ಸಹಾಯಕರಾಗಿ ನಿಯೋಜನೆಗೊಂಡಿದ್ದು.
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಪುರಸ್ಕøತ ಯೋಜನೆಗಳಾದ ಸ್ಮಾರ್ಟ್ಸಿಟಿ ಯೋಜನೆ, ಕುಡಿಯುವ ನೀರಿನ ಜಲಸಿರಿ ಯೋಜನೆ, ಕೇಂದ್ರಿಯ ವಿದ್ಯಾಲಯ, ದಾವಣಗೆರೆ ಹಾಗೂ ಹರಿಹರದಲ್ಲಿ ನೂತನ ರೈಲು ನಿಲ್ದಾಣಗಳ ನಿರ್ಮಾಣ, ಬುದ್ದಿ ಮಾಂಧ್ಯ ಮಕ್ಕಳಿಗೆ ಸಿ.ಆರ್.ಸಿ. ಕೇಂದ್ರ, ಕೆರೆ ತುಂಬಿಸುವ ಯೋಜನೆಗಳು ಹೀಗೆ ಕೇಂದ್ರದ ಅನೇಕ ಯೋಜನೆಗಳನ್ನು ದಾವಣಗೆರೆಗೆ ತರುವಲ್ಲಿ ಸಂಸದರ ಜೊತೆ ಕೈಜೋಡಿಸಿದ್ದ ಸಿ.ಹೆಚ್.ದೇವರಾಜ್ ಚಿತ್ರದುರ್ಗದಲ್ಲಿಯೂ ಸಂಸದರ ಆಪ್ತ ಸಹಾಯಕರಾಗಿ ಕೆಲಸ ಮಾಡುವ ಉತ್ಸುಕದಲ್ಲಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
