CHITRADURGA NEWS | 13 JULY 2024
ಚಿತ್ರದುರ್ಗ: ಛಲವಾದಿ ಮಹಾಸಭಾ ಜಿಲ್ಲಾ ಸಮಿತಿಯಿಂದ ನೂತನ ರಾಜ್ಯಾದ್ಯಕ್ಷರಾದ ವಾಣಿ ಕೆ ಶಿವರಾಮ್ ಅವರಿಗೆ ಸನ್ಮಾನಿಸಲಾಯಿತು.
ಛಲವಾದಿ ಮಹಾಸಭೆ ಜಿಲ್ಲಾ ಸಮಿತಿಯಿಂದ ನಗರದ ಛಲವಾದಿ ಗುರುಪೀಠದಲ್ಲಿ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ, ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜ್ಯಾದ್ಯಕ್ಷೆ ವಾಣಿ ಕೆ ಶಿವರಾಮ್ ಅವರು, ಛಲವಾದಿ ಮಹಾಸಭೆ ಯನ್ನು ಕೆ ಶಿವರಾಮ್ ಸ್ಥಾಪಿಸಿ. ಸಮುದಾಯದ ಏಳಿಗೆಗಾಗಿ ತುಂಬಾ ಶ್ರಮಪಟ್ಟ ಧೀಮಂತ ವ್ಯಕ್ತಿಯಾಗಿದ್ದರು.
ಬುದ್ಧ ಬಸವ ಅಂಬೇಡ್ಕರ್ ಹಾದಿಯಲ್ಲೇ ಬಂದವರು. ತನ್ನ ಸಮುದಾಯಕೋಸ್ಕರ ಹಗಲು ರಾತ್ರಿ ಕೆಲಸಕ್ಕೆ ಮುಡಿಪಾಗಿಟ್ಟವರು. ಆದರೆ ಅವರ ಅಕಾಲಿಕ ಮರಣದಿಂದ ನನಗೆ ಹಾಗೂ ನಮ್ಮ ಛಲವಾದಿ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ. ಕೆ. ಶಿವರಾಮ್ ಅವರು ನನ್ನಂತೆಯೇ ನನ್ನವರು ಸಹ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳಾಗಬೇಕೆಂದು ಸಾಕಷ್ಟು ಕನಸುಗಳನ್ನು ಕಂಡಿದ್ದರು.
ಇದನ್ನೂ ಓದಿ: CENTRAL GOVERNMENT; ಕೇಂದ್ರದಿಂದ 5300 ಕೋಟಿ ತಂದು ಸಮಗ್ರ ನೀರಾವರಿ ಯೋಜನೆ ರೂಪಿಸಲು ರೈತರ ಒತ್ತಾಯ
ಕನಸುಗಳನ್ನು ನನಸಾಗಿಸಲು ನಾನು ಅವರ ಸ್ಥಾನ ತುಂಬಲು ಇಂದು ದೊಡ್ಡ ಜವಾಬ್ದಾರಿ ಹೊತ್ತಿದ್ದೇನೆ. ನಿಮ್ಮ ಸಹಕಾರ ಅತ್ಯಗತ್ಯ.ರಾಜ್ಯಾದ್ಯಂತ ಪ್ರವಾಸ ಮಾಡಿ ಮಹಾಸಭಾವನ್ನು ಮತ್ತಷ್ಟು ಬಲಗೊಳಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಜಿ.ಅಭಯ್ ಹಾಗೂ ರಾಜ್ಯಮಟ್ಟದ ಲ್ಲಿ ತೃತೀಯ ಶ್ರೇಣಿ ಪಡೆದ ವಿದ್ಯಾರ್ಥಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಬಸವನಾಗಿದೇವ ಶರಣರು, ಹೆಚ್.ಶೇಷಪ್ಪ, ರಾಜ್ಯ ಖಜಾಂಚಿ ಮೈಕೋ ನಾಗರಾಜ್, ರಾಜ್ಯ ಜಂಟಿ ಕಾರ್ಯದರ್ಶಿ ನಾಗೇಶ್, ನಿರ್ದೇಶಕ ಶಿವಪ್ಪ, ಹೇಮಂತ್ ಕುಮಾರ್, ಗ್ರಾಮ ಪಂಚಾಯತಿ ಸದಸ್ಯ ಜಾನಕಲ್ ನಾಗರಾಜ್, ರಾಮಚಂದ್ರಪ್ಪ, ನರಸಿಂಹಮೂರ್ತಿ, ದೇವರಾಜ್ ಸೇರಿದಂತೆ ಪದಾಧಿಕಾರಿಗಳು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number