CHITRADURGA NEWS | 10 JUNE 2025
ಚಿತ್ರದುರ್ಗ: ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರ ಹುಟ್ಟುಹಬ್ಬವನ್ನು ಎಸ್.ಟಿ.ಘಟಕದ ಮುಂಚೂಣಿಯಲ್ಲಿ ವಿವಿಧ ಘಟಕಗಳ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಣೆ ಮಾಡಲಾಯಿತು.
Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಈ ವೇಳೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ರಘುಮೂರ್ತಿ ಅವರನ್ನು ಪದಾಧಿಕಾರಿಗಳು ಹೂ ಮಾಲೆ, ಶಾಲು, ಬೊಕ್ಕೆ ನೀಡಿ, ಪೇಟ ಹಾಕುವುದರ ಮೂಲಕ ಶುಭಕೋರಿ, ಪಟಾಕಿ ಸಿಡಿಸಿದರು.
ಈ ವೇಳೆ ಮಾತನಾಡಿದ ಶಾಸಕ ಟಿ.ರಘುಮೂರ್ತಿ, ನಿಮ್ಮ ಪ್ರೀತಿಗೆ ನಾನು ಅಭಾರಿಯಾಗಿದ್ದೇನೆ, ನಾನು ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿದ್ದೇನೆ, ಪಕ್ಷದ ಒಬ್ಬ ಕಾರ್ಯಕರ್ತನಾಗಿ, ನಿಮ್ಮ ಜೊತೆಯಲ್ಲಿ ಇರುತ್ತೇನೆ ಎಂದರು.
ಪಕ್ಷ ಇದ್ದರೆ ಅಧಿಕಾರ, ಪಕ್ಷಕ್ಕಾಗಿ ಜನ ಪ್ರತಿನಿಧಿಗಳಾಗಿ ಜನ ಸಾಮಾನ್ಯರಿಗಾಗಿ ದುಡಿಯೋಣ. ನನಗೆ ಪಕ್ಷ ಎಲ್ಲವನ್ನು ನೀಡಿದೆ ಅದಕ್ಕೆ ನಾನು ಮುಖಂಡರಿಗೆ ಅಬಾರಿಯಾಗಿದ್ದೇನೆ. ಶುಭಕೋರಿದ ಎಲ್ಲರಿಗೂ ನಾನು ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.
Also Read: ಗರ್ಭಾವಸ್ಥೆಯಲ್ಲಿ ತಾಯಿ ಮಾಡುವ ಈ ತಪ್ಪುಗಳು ಮಗುವಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆಯಂತೆ
ಡಿಸಿಸಿ ಅಧ್ಯಕ್ಷ ತಾಜ್ಪೀರ್, ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಮೈಲಾರಪ್ಪ, ನಗರಾಭೀವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಜಿಲ್ಲಾ ಗ್ಯಾರೆಂಟಿ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ತಾಲ್ಲೂಕು ಅಧ್ಯಕ್ಷ ಪ್ರಕಾಶ್, ಎಸ್.ಟಿ.ಘಟಕದ ಅಧ್ಯಕ್ಷ ಮಂಜುನಾಥ್, ಎಸ್.ಸಿ.ಘಟಕದ ಅಧ್ಯಕ್ಷ ಜಯ್ಯಣ್ಣ, ಓಬಿಸಿ ಘಟಕದ ಅಧ್ಯಕ್ಷ ಎನ್.ಡಿ.ಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಗೀತಾ ನಂದಿನಿಗೌಡ, ಕುಮಾರಗೌಡ, ಲಕ್ಷ್ಮೀಕಾಂತ್. ತಿಪ್ಪೇಸ್ವಾಮಿ, ರವಿಕುಮಾರ್, ನಿಶಾನಿ, ವೆಂಕಟೇಶ್, ಜಿ.ಪಂ.ಮಾಜಿ ಸದಸ್ಯ ಬಾಬುರೆಡ್ಡಿ, ಜಿ.ಪಂ.ಮಾಜಿ ಅಧ್ಯಕ್ಷ ರವಿಕುಮಾರ್, ಮಧುಗೌಡ, ನಜ್ಮಾತಾಜ್ ಮುನಿಧರ್ ಸೇರಿದಂತೆ ಪದಾಧಿಕಾರಿಗಳು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number