ಚಳ್ಳಕೆರೆ ವೀರಭದ್ರಸ್ವಾಮಿ ದೊಡ್ಡ ರಥೋತ್ಸವ | ₹ 30 ಲಕ್ಷಕ್ಕೆ ಮುಕ್ತಿ ಬಾವುಟ ಪಡೆದ ಶಾಸಕ ವೀರೇಂದ್ರ ಪಪ್ಪಿ

ಚಳ್ಳಕೆರೆ ನಗರದಲ್ಲಿ ಬುಧವಾರ ನೆರವೇರಿದ ವೀರಭದ್ರಸ್ವಾಮಿ ದೊಡ್ಡ ರಥೋತ್ಸವ

CHITRADURGA NEWS | 22 MAY 2024
ಚಿತ್ರದುರ್ಗ: ಚಳ್ಳಕೆರೆ ನಗರದ ಆರಾಧ್ಯ ದೈವ ವೀರಭದ್ರಸ್ವಾಮಿ ದೊಡ್ಡ ರಥೋತ್ಸವ ಬುಧವಾರ ವೈಭವದಿಂದ ನೆರವೇರಿತು.

ರಥೋತ್ಸವದ ಅಂಗವಾಗಿ ಮುಂಜಾನೆ ಕೆಂಡೋತ್ಸವ ನೆರವೇರಿತು. ಸಂಜೆ 4.30ಕ್ಕೆ ಪಲ್ಲಕ್ಕಿಯಲ್ಲಿ ದೇವರನ್ನು ತಂದು ರಥದಲ್ಲಿ ಪ್ರತಿಷ್ಠಾಪಿಸುತ್ತಿದ್ದಂತೆ ಜಯಘೋಷ ಮೊಳಗಿದವು. ಶಾಸಕ ಕೆ.ಸಿ.ವೀರೇಂದ್ರಪಪ್ಪಿ ₹ 30 ಲಕ್ಷಕ್ಕೆ ಮುಕ್ತಿ ಬಾವುಟವನ್ನು ಹರಾಜಿನಲ್ಲಿ ಪಡೆದರು. ಬಳಿಕ ಮಂಗಳಾರತಿ ನಡೆಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕ ಟಿ.ರಘುಮೂರ್ತಿ ದೇವರ ದರ್ಶನ ಪಡೆದರು.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗಕ್ಕೂ ಬಂತು ಡ್ರೋನ್‌ | ಔಷಧ ಸಿಂಪರಣೆಗೆ ರೈತರಿಗೆ ನೆರವು

ನಂದಿಕೋಲು, ಡೊಳ್ಳು, ಸೋಮನಕುಣಿತ, ಭಜನೆ, ಕೋಲಾಟ ಮುಂತಾದ ಜನಪದ ಕಲಾ ಮೇಳಗಳು ಮೆರಗು ತಂದವು. ಭಕ್ತರು ಚೂರುಬೆಲ್ಲ, ಮೆಣಸು, ಮಂಡಕ್ಕಿ, ಶೇಂಗಾ, ವೀಳ್ಯದೆಲೆ, ಮಲ್ಲಿಗೆ, ಕನಕಾಂಬರ ಹೂವು ಮತ್ತು ಬಾಳೆಹಣ್ಣನ್ನು ರಥಕ್ಕೆ ಅರ್ಪಿಸಿದರು.

 

ವೀರಭದ್ರಸ್ವಾಮಿ ದೊಡ್ಡ ರಥೋತ್ಸವ ವೈಭವ

ಜಾತ್ರೆ ಪ್ರಯುಕ್ತ ಪಾವಗಡ ರಸ್ತೆಯ ಸಿಂಚಲ ಲಕ್ಷ್ಮೀ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ತಾಲ್ಲೂಕಿನ ನನ್ನಿವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿ ಕರೆಕಾಟ್ಲಹಟ್ಟಿ, ಬೊಮ್ಮದೇವರಹಟ್ಟಿ, ಗಡ್ಡಾರಹಟ್ಟಿ, ವರವಿನೋರಹಟ್ಟಿ, ಬಂಗಾದೇವರಹಟ್ಟಿ, ಪೆತ್ತಮ್ಮನೋರಹಟ್ಟಿ ಸೇರಿ 20 ಕ್ಕೂ ಹೆಚ್ಚು ಹಟ್ಟಿಯ ಜನರು ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು.

ಗುರುವಾರ ನಗರದೇವತೆ ಚಳ್ಳಕೇರಮ್ಮ ಮತ್ತು ಉಡುಸಲಮ್ಮ ದೇವಿಯ ಉತ್ಸವ ಮೂರ್ತಿಗಳನ್ನು ಭಕ್ತರು ಹೊತ್ತು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸುತ್ತಾರೆ. ಕಡುಬಿನ ಕಾಳಗ, ವೀರಭದ್ರಸ್ವಾಮಿ ಹಾಗೂ ಕಾಳಮ್ಮ ದೇವಿಗೆ ವಾಗ್ವಾದ ಕಾರ್ಯಕ್ರಮ ನಡೆಯಲಿದೆ. ಮೇ 24ರಂದು ಕಂಕಣ ವಿಸರ್ಜನೆ, ಹೋಮ, ಶಾಂತಿ, ಓಕಳಿ ನಡೆಯಲಿದೆ.

ಕ್ಲಿಕ್ ಮಾಡಿ ಓದಿ: ಕಂಟೇನರ್ ಲಾರಿಯಲ್ಲಿ ಎತ್ತುಗಳ ಸಾಗಾಣೆ | ವಿಎಚ್‌ಪಿ, ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ

 

ರಥೋತ್ಸವದ ವೇಳೆ ಜನರಿಗೆ ನಮಸ್ಕರಿಸಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ದಾವಣಗೆರೆ, ಬಳ್ಳಾರಿ, ತುಮಕೂರು, ಬೆಂಗಳೂರು, ಶಿವಮೊಗ್ಗ, ಅನಂತಪುರ ಮುಂತಾದ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಜಾತ್ರೆಗೆ ಬರುತ್ತಾರೆ. ಈ ಜಾತ್ರೆ ಮುಗಿದ ನಂತರವೇ ಈ ಭಾಗದಲ್ಲಿ ಮಾಗಿಯ ಉಳುಮೆ ಹಾಗೂ ಬಿತ್ತನೆ ಕಾರ್ಯಗಳು ಆರಂಭವಾಗುತ್ತವೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version