By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Ayyappaswamy; ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ | 12 ವರ್ಷಗಳ ನಂತರ 18 ಮೆಟ್ಟಿಲು ಹತ್ತುವ ಅವಕಾಶ | ಮಹಿಳೆಯರಿಗೂ ಅಪರೂಪದ ಅವಕಾಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Ayyappaswamy; ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ | 12 ವರ್ಷಗಳ ನಂತರ 18 ಮೆಟ್ಟಿಲು ಹತ್ತುವ ಅವಕಾಶ | ಮಹಿಳೆಯರಿಗೂ ಅಪರೂಪದ ಅವಕಾಶ

ಮುಖ್ಯ ಸುದ್ದಿ

Ayyappaswamy; ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ | 12 ವರ್ಷಗಳ ನಂತರ 18 ಮೆಟ್ಟಿಲು ಹತ್ತುವ ಅವಕಾಶ | ಮಹಿಳೆಯರಿಗೂ ಅಪರೂಪದ ಅವಕಾಶ

chitradurganews.com
Last updated: 9 July 2024 21:40
chitradurganews.com
12 months ago
Share
Shri Ayyappaswamy temple chitradurga
ಮೆದೇಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 09 JULY 2024

ಚಿತ್ರದುರ್ಗ: ಶಬರಿ ಮಲೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನೇ ಹೋಲುವ ಚಿತ್ರದುರ್ಗದ ಮೆದೇಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಈಗ ರಜತ ಮಹೋತ್ಸವದ ಸಂಭ್ರಮ.

ಕಳೆದ ನಾಲ್ಕು ದಿನಗಳಿಂದ ದೇವಸ್ಥಾನದ ಆವರಣದಲ್ಲಿ ರಜತ ಮಹೋತ್ಸವ ಹಾಗೂ ಎರಡನೇ ಕುಂಬಾಭಿಷೇಕ ನಡೆಯುತ್ತಿದೆ.

ಇದನ್ನೂ ಓದಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಒಂದು ವಾರ ಧಾರ್ಮಿಕ ಕಾರ್ಯಕ್ರಮಗಳು | ಭಕ್ತಿ ಕುಸುಮಾಂಜಲಿ

ಈ ಸಂದರ್ಭದಲ್ಲಿ ದೇವಸ್ಥಾನದ ಮುಂಭಾಗದಲ್ಲಿರುವ 18 ಮೆಟ್ಟಿಲುಗಳನ್ನು ಹತ್ತಲು 12 ವರ್ಷಗಳ ನಂತರ ಅಯ್ಯಪ್ಪ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಸುವರ್ಣಾವಕಾಶ ಕಲ್ಪಿಸಿದೆ.

ಜುಲೈ 10 ಬುಧವಾರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ದೇವಸ್ಥಾನದ ಮುಂಭಾಗದ 18 ಮೆಟ್ಟಿಲುಗಳನ್ನು ಹತ್ತಿ ಅಯ್ಯಪ್ಪನ ದರ್ಶನ ಮಾಡಬಹುದಾಗಿದೆ.

ಇದನ್ನೂ ಓದಿ: ಐತಿಹಾಸಿಕ ಕೋಟೆಗೆ ಧ್ವನಿ ಬೆಳಕಿನ ವೈಭವ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

ರಾಜ್ಯದಲ್ಲಿ ನೂರಕ್ಕೂ ಹೆಚ್ಚು ಅಯ್ಯಪ್ಪ ಸ್ವಾಮಿ ದವಸ್ಥಾನಗಳಿವೆ. ಅದರಲ್ಲಿ ಥೇಟ್ ಶಬರಿ ಮಲೆ ಮಾದರಿಯಲ್ಲೇ ನಿರ್ಮಾಣವಾಗಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನ ಚಿತ್ರದುರ್ಗದಲ್ಲಿದೆ. ಅದರಲ್ಲೂ 18 ಮೆಟ್ಟಿಲುಗಳಿರುವ ರಾಜ್ಯದ ಬೆರಳೆಣಿಕೆಯ ದೇವಸ್ಥಾನಗಳಲ್ಲಿ ದುರ್ಗದ ದೇಗುಲವೂ ಒಂದಾಗಿದೆ.

12 ವರ್ಷಗಳ ನಂತರ ಮೆಟ್ಟಿಲು ಹತ್ತುವ ಅವಕಾಶ:

ಸಾಮಾನ್ಯವಾಗಿ 12 ವರ್ಷಗಳಿಗೊಮ್ಮೆ ದೇವಸ್ಥಾನಗಳಿಗೆ ಕುಂಬಾಭಿಷೇಕ ನಡೆಯಲಿದೆ. ಚಿತ್ರದುರ್ಗದ ಮೆದೇಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಪ್ರಾರಂಭವಾಗಿ 25 ವರ್ಷ ಸಂದಿದೆ. ರಜತ ಮಹೋತ್ಸವದೊಂದಿಗೆ ಈಗ ಎರಡನೇ ಕುಂಬಾಭಿಷೇಕ ನಡೆಯುತ್ತಲಿದೆ.

ಇದನ್ನೂ ಓದಿ: ಶ್ರೀ ಅಯ್ಯಪ್ಪ ಸ್ವಾಮಿ ಪ್ರತಿಷ್ಠಾಪನಾ ರಜತ ಮಹೋತ್ಸವ | ಸಚಿವ ಡಿ.ಸುಧಾಕರ್ ಭಾಗೀ

ಈ ಹಿಂದೆ 2012ರಲ್ಲಿ ಕುಂಬಾಭಿಷೇಕ ನಡೆದಾಗ ಅಂದೂ ಕೂಡಾ ಮಹಿಳೆ, ಪುರುಷರು ಸೇರಿದಂತೆ ಎಲ್ಲ ವಯೋಮಾನದವರಿಗೂ ಶ್ರೀ ಅಯ್ಯಪ್ಪನ 18 ಮೆಟ್ಟಿಲುಗಳನ್ನು ಹತ್ತುವ ಅವಕಾಶ ಕಲ್ಪಿಸಲಾಗಿತ್ತು.

ಶ್ರೀ ಅಯ್ಯಪ್ಪ ಸ್ವಾಮಿ
ಶ್ರೀ ಅಯ್ಯಪ್ಪ ಸ್ವಾಮಿ

ಈಗ 2024 ರಲಿ ಮತ್ತೊಮ್ಮೆ ಅಂಥದ್ದೇ ಸಂದರ್ಭ ಒದಗಿ ಬಂದಿದೆ. ಇಂದು ಜು.10 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮುಕ್ತವಾಗಿ ಭಕ್ತಿ, ಭಾವ ಪರವಶರಾಗಿ, ಸಂಕಲ್ಪದೊಂದಿಗೆ 18 ಮೆಟ್ಟಿಲು ಹತ್ತುವ ಅವಕಾಶ ಒದಗಿ ಬಂದಿದೆ. ಈ ಅವಕಾಶ ಕಳೆದುಕೊಂಡರೆ ಮತ್ತ 12 ವರ್ಷಗಳವರೆಗೆ ಕಾಯಬೇಕಾಗುತ್ತದೆ.

ಇದನ್ನೂ ಓದಿ: ಅಯ್ಯಪ್ಪಸ್ವಾಮಿ ಜಾತಿಗೆ ಸೀಮಿತವಲ್ಲ | ಭಜರಂಗದಳ ದಕ್ಷಿಣ ಪ್ರಾಂತೀಯ ಸಂಚಾಲಕ ಪ್ರಭಂಜನ್‌

ಚಿತ್ರದುರ್ಗದಲ್ಲಿ ಬಹಳ ಅಪರೂಪದ ಕಾರ್ಯಕ್ರಮ ನಡೆಯುತ್ತಿದ್ದು, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತ ಮಹೋತ್ಸವ ಹಾಗೂ ಎರಡನೇ ಕುಂಬಾಭಿಷೇಕ ನಡೆಯುತ್ತಿದೆ. ಈ ವೇಳೆ ಎಲ್ಲರಿಗೂ 18 ಮೆಟ್ಟಿಲು ಹತ್ತುವ ಸುವರ್ಣಾವಕಾಶ ಲಭಿಸಿದೆ. ಇದೇ ವೇಳೆ ಸುಮಾರು 25 ಸಾವಿರ ಜನರಿಗೆ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿದೆ.

| ಶರಣ್ ಕುಮಾರ್, ಅಧ್ಯಕ್ಷರು, ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:18 Steps18 ಮೆಟ್ಟಿಲುAyyappaswamyChitradurga newsDurga Sabari MaleKannada News UpdatesKumbabhishekamRajata MahotsavSri Ayyappa Swamy Templeಕನ್ನಡ ನ್ಯೂಸ್ ಅಪ್ಡೇಟ್ಸ್ಕುಂಬಾಭಿಷೇಕಚಿತ್ರದುರ್ಗ ನ್ಯೂಸ್ದುರ್ಗದ ಶಬರಿ ಮಲೆರಜತ ಮಹೋತ್ಸವಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ
Share This Article
Facebook Email Print
Previous Article Twitter tweaks video again, adding view counts for some users
Next Article Power Cut chitradurga News (3) Bescom; ಹೊಸದುರ್ಗ ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up