
CHITRADURGA NEWS | 13 MARCH 2025
ಹೊಸದುರ್ಗ: ಶ್ರೀ ಶಿವಕುಮಾರ ಕಲಾಸಂಘ, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ ಸಂಯುಕ್ತಾಶ್ರಯದಲ್ಲಿ ಹಾಗೂ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಏ.12 ರಿಂದ 28ರವರೆಗೆ ಸಾಣೇಹಳ್ಳಿಯಲ್ಲಿ ಮಕ್ಕಳ ಹಬ್ಬ (ಬೇಸಿಗೆ ಶಿಬಿರ) ವನ್ನು ಆಯೋಜಿಸಲಾಗಿದೆ.
Also Read: ಭಕ್ತ ಸಾಗರದ ನಡುವೆ ಸಾಗಿದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ | ಆಗಸದಲ್ಲಿ ಗರುಢ ಪ್ರದಕ್ಷಿಣೆ

ಮಕ್ಕಳ ಹಬ್ಬದಲ್ಲಿ ಕೋಲಾಟ, ಚಿತ್ರಕಲೆ, ಮಣ್ಣಾಟ, ವೀರಗಾಸೆ, ಯೋಗಾಸನ, ರಂಗಾಟಗಳು, ದಿನಕ್ಕೊಂದು ಪದ್ಯ ರಚನೆ, ಮುಖವಾಡ ತಯಾರಿ, ಒಂದು ದಿನದ ಪ್ರವಾಸ, ಕಥೆ ಹೇಳುವ ಮತ್ತು ಕಥೆ ಕಟ್ಟುವ ತರಗತಿ, ಮಕ್ಕಳ ಸಿನಿಮಾ ವೀಕ್ಷಣೆ, ಮಕ್ಕಳ ತೇರು, ಪರಿಸರದ ಮೇಲಿನ ಉಪನ್ಯಾಸ, ನೃತ್ಯರೂಪಕಗಳು, 3 ಅಥವಾ 4 ನಾಟಕಗಳ ತಯಾರಿ ಹಾಗೂ ಪ್ರದರ್ಶನ ಸೇರಿದಂತೆ ಮುಂತಾದ ಚಟುವಟಿಕೆಗಳು ಇರುತ್ತವೆ.
ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳು ಸಾಣೇಹಳ್ಳಿ ಮಠದಲ್ಲಿ ಇರಬೇಕು, ಅವರಿಗೆ ಊಟ, ವಸತಿಯ ಸೌಲಭ್ಯ ಕಲ್ಪಿಸಲಾಗುವುದು.
10 ರಿಂದ 14 ವರ್ಷದ ವಯಸ್ಸಿನ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಬಹುದು.
Also Read: ಹೊಸದುರ್ಗ-ಹೊಳಲ್ಕೆರೆ ಹೆದ್ದಾರಿಯನ್ನು ಆನಗೋಡು ವರೆಗೆ ವಿಸ್ತರಿಸಿ | ನಿತಿನ್ ಗಡ್ಕರಿಗೆ ಮನವಿ
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8861043553, 9972007015 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
