By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ರಾಷ್ಟ್ರಮಟ್ಟದ ಅವಾರ್ಡ್ ಪಡೆದ ಚಿತ್ರದುರ್ಗ ಡಿಸಿಸಿ ಬ್ಯಾಂಕ್ | ದೇಶದ ಎರಡನೇ ಅತ್ಯುನ್ನತ ಬ್ಯಾಂಕ್ ಮನ್ನಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ರಾಷ್ಟ್ರಮಟ್ಟದ ಅವಾರ್ಡ್ ಪಡೆದ ಚಿತ್ರದುರ್ಗ ಡಿಸಿಸಿ ಬ್ಯಾಂಕ್ | ದೇಶದ ಎರಡನೇ ಅತ್ಯುನ್ನತ ಬ್ಯಾಂಕ್ ಮನ್ನಣೆ

ಮುಖ್ಯ ಸುದ್ದಿ

ರಾಷ್ಟ್ರಮಟ್ಟದ ಅವಾರ್ಡ್ ಪಡೆದ ಚಿತ್ರದುರ್ಗ ಡಿಸಿಸಿ ಬ್ಯಾಂಕ್ | ದೇಶದ ಎರಡನೇ ಅತ್ಯುನ್ನತ ಬ್ಯಾಂಕ್ ಮನ್ನಣೆ

chitradurganews.com
Last updated: 3 October 2023 19:28
chitradurganews.com
2 years ago
Share
ಡಿಸಿಸಿ ಬ್ಯಾಂಕಿಗೆ ಲಭಿಸಿರುವ ಪ್ರಶಸ್ತಿ.
ಡಿಸಿಸಿ ಬ್ಯಾಂಕಿಗೆ ಲಭಿಸಿರುವ ಪ್ರಶಸ್ತಿ.
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ: ನ್ಯಾಷನಲ್ ಫೆಡರೇಷನ್ ಆಫ್ ಸ್ಟೇಟ್ ಕೋ-ಆಪರೇಟಿವ್ ಬ್ಯಾಂಕ್‍ನಿಂದ ಚಿತ್ರದುರ್ಗ ಡಿಸಿಸಿ ಬ್ಯಾಂಕ್ ದೇಶದ ಎರಡನೇ ಅತ್ಯುತ್ತಮ ಬ್ಯಾಂಕ್ ಪ್ರಶಸ್ತಿ ಪಡೆದುಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಸುಧಾಕರ್ ಹೇಳಿದರು.

ನಗರದ ಡಿ.ಸಿ.ಸಿ. ಬ್ಯಾಂಕ್ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ 351 ಡಿ.ಸಿ.ಸಿ. ಬ್ಯಾಂಕುಗಳ ಪೈಕಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ 02 ನೇ ಅತ್ಯುತ್ತಮ ಬ್ಯಾಂಕ್ ಪ್ರಶಸ್ತಿ ನಮಗೆ ಲಭಿಸಿದೆ. ತೆಲಂಗಾಣದ ಕರೀಂ ನಗರದ ಡಿಸಿಸಿ ಬ್ಯಾಂಕ್ ಪ್ರಥಮ ಹಾಗೂ ರಾಜಾಸ್ಥಾನದ ಜೈಪುರದ ಡಿಸಿಸಿ ಬ್ಯಾಂಕ್ ತೃತೀಯ ಸ್ಥಾನ ಪಡೆದುಕೊಂಡಿವೆ ಎಂದರು.

ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಸರ್ವ ಸದಸ್ಯರ ಬ್ಯಾಂಕ್ | 7.28 ಕೋಟಿ ರೂ. ನಿವ್ವಳ ಲಾಭ

ಸೆ.26 ರಂದು ರಾಜಸ್ಥಾನದ ಜೈಪುರದಲ್ಲಿ ನಡೆದ ಸಮಾರಂಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಹೆಚ್.ಬಿ.ಮಂಜುನಾಥ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್‍ಉಲ್ಲಾ ಷರೀಫ್ ಪ್ರಶಸ್ತಿ ಮತ್ತು ಪಾರಿತೋಷಕ ಸ್ವೀಕರಿಸಿದ್ದಾರೆ ಎಂದು ತಿಳಿಸಿದರು.

ಕಳೆದ 67 ವರ್ಷಗಳಿಂದ ರೈತರ ಅವಶ್ಯಕತೆಗೆ ಅನುಗುಣವಾಗಿ ಬೆಳೆ ಸಾಲ, ಭೂ ಅಭಿವೃದ್ಧಿ ಸಾಲ ನೀಡುತ್ತಾ ಬಂದಿದ್ದು, ಸಾಲ ಹಂಚಿಕೆ, ವಸೂಲಾತಿ ಮತ್ತು ಠೇವಣಿ ಸಂಗ್ರಹಣೆ, ಸ್ವಸಹಾಯ ಗುಂಪುಗಳ ರಚನೆ ಹಾಗೂ ಸಾಲ ಜೋಡಣೆ ಮತ್ತಿತರೆ ಕೆಲಸಗಳಲ್ಲಿ ನಮ್ಮ ಬ್ಯಾಂಕ್ ಮುಂಚೂಣಿಯಲ್ಲಿದೆ ಎಂದು ಹೇಳಿದರು.

ಪ್ರ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ಬೆಳೆ ಸಾಲ ಮತ್ತು ವ್ಯವಸಾಯ ಅಭಿವೃದ್ಧಿಗೆ ಮಧ್ಯಮಾವಧಿ ಸಾಲ ಹಾಗೂ ವ್ಯವಸಾಯೇತರ ಸಾಲಗಳಾದ ಗೃಹ ನಿರ್ಮಾಣ/ಖರೀದಿ ಸಾಲ, ಚಿನ್ನಾಭರಣ ಸಾಲ, ವಾಹನ ಸಾಲ, ಮೀರಳತೆ ಸಾಲ, ನೌಕರ ವರ್ಗಕ್ಕೆ ಸಂಬಳಾಧಾರಿತ ಸಾಲ, ಸ್ಥಿರಾಸ್ತಿ ಆಧಾರದ ಮೇಲೆ ಸಾಲ, ಸ್ವಸಹಾಯ ಸಂಘಗಳಿಗೆ (ಎಸ್.ಹೆಚ್.ಜಿ) ಸಾಲ ನೀಡುವ ಮೂಲಕ ಎಲ್ಲಾ ವರ್ಗದ ಸಹಕಾರಿ ಬಂಧುಗಳ ಸರ್ವತೋಮುಖ ಅಭಿವೃದ್ಧಿಗೆ ಆರ್ಥಿಕ ನೆರವು ಕಲ್ಪಿಸಿದ್ದೇವೆ ಎಂದು ವಿವರಿಸಿದರು.

ಡಿಸಿಸಿ ಬ್ಯಾಂಕ್ ಸಾಧನೆಗೆ ನೀಡಿರುವ ಪಾರಿತೋಷಕಗಳನ್ನು ಬ್ಯಾಂಕಿನ ಅಧ್ಯಕ್ಷರಾಗಿರುವ ಡಿ.ಸುಧಾಕರ್ ಪ್ರದರ್ಶಿಸಿದರು.
ಡಿಸಿಸಿ ಬ್ಯಾಂಕ್ ಸಾಧನೆಗೆ ನೀಡಿರುವ ಪಾರಿತೋಷಕಗಳನ್ನು ಬ್ಯಾಂಕಿನ ಅಧ್ಯಕ್ಷರಾಗಿರುವ ಡಿ.ಸುಧಾಕರ್ ಪ್ರದರ್ಶಿಸಿದರು.

ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿತ್ರದುರ್ಗ ಜಿಲ್ಲಾ ಮಟ್ಟದ ಬ್ಯಾಂಕಾಗಿದ್ದು, 14 ಶಾಖೆಗಳನ್ನು ಹೊಂದಿದ್ದು, ಚಿತ್ರದುರ್ಗದಲ್ಲಿ ಕೇಂದ್ರ ಕಛೇರಿ ಹೊಂದಿರುತ್ತದೆ. ಕಳೆದ 67 ವರ್ಷಗಳಿಂದ ರೈತಬಾಂಧವರ ಅವಶ್ಯಕತೆಗೆ ಅನುಗುಣವಾಗಿ ಬೆಳೆ ಸಾಲ, ಭೂ ಅಭಿವೃದ್ಧಿ ಸಾಲ ನೀಡುತ್ತಾ ಬಂದಿದ್ದು, ಸಾಲ ಹಂಚಿಕೆ, ವಸೂಲಾತಿ ಮತ್ತು ಠೇವಣಿ ಸಂಗ್ರಹಣೆ, ಸ್ವಸಹಾಯ ಗುಂಪುಗಳ ರಚನೆ ಹಾಗೂ ಸಾಲ ಜೋಡಣೆ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಸಾಧಿಸುತ್ತಾ ಬಂದಿದೆ. ಕಳೆದ ಮಾರ್ಚ್ ಅಂತ್ಯದವರೆಗೆ ಬ್ಯಾಂಕಿನಲ್ಲಿ 415 ಸಹಕಾರ ಸಂಘಗಳು ಸದಸ್ಯತ್ವ ಪಡೆದಿವೆ.

ಸದ್ಯ ಬ್ಯಾಂಕ್, ಠೇವಣಿ ರೂ.509.19 ಕೋಟಿ ಸಂಗ್ರಹಣೆಯಾಗಿರುತ್ತದೆ. 2023-24ನೇ ಸಾಲಿಗೆ ಜಿಲ್ಲೆಯ 66000 ರೈತರಿಗೆ ರೂ.500 ಕೋಟಿ ಅಲ್ಪಾವಧಿ ಕೃಷಿ ಬೆಳೆ ಸಾಲ ವಿತರಿಸಲು ಹಾಗೂ 1140 ರೈತರಿಗೆ ರೂ.74.50 ಕೋಟಿ ಮಧ್ಯಮಾವಧಿ ಕೃಷಿ ಸಾಲ ವಿತರಿಸಲು ಗುರಿ ಹಾಕಿಕೊಳ್ಳಲಾಗಿದೆ. 2022-23 ನೇ ಸಾಲಿನಲ್ಲಿ 500 ಸ್ವಸಹಾಯ ಸಂಘಗಳಿಗೆ ರೂ.10 ಕೋಟಿ ಸಾಲ ವಿತರಿಸಲು ಗುರಿ ಹಾಕಿಕೊಳ್ಳಲಾಗಿದೆ.

ಜಿಲ್ಲೆಯ 8 ಗ್ರಾಮಗಳಲ್ಲಿ 8 ಹೊಸ ಶಾಖೆಗಳನ್ನು ತೆರಯಲು ಆರ್.ಬಿ.ಐ ನಿಂದ ಅನುಮತಿ ಪಡೆಯಲಾಗಿದೆ. ರಾಮಗಿರಿ, ಹೊರಕೆದೇವಪುರ, ಮಾಡದಕೆರೆ, ಹೊಸದುರ್ಗ ರೋಡ್, ದರ್ಮಪುರ, ಐಮಂಗಲ, ತಳಕು ಮತ್ತು ಸಾಸಲಹಳ್ಳಿಗಳಲ್ಲಿ ಬ್ಯಾಂಕಿನ ಹೊಸ ಶಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ. 2022-23ನೇ ಸಾಲಿಗೆ ಬ್ಯಾಂಕ್ ರೂ.7.28 ಕೋಟಿ ನಿವ್ವಳ ಲಾಭಗಳಿಸಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರು, ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿ, ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್ ಉಲ್ಲಾ ಷರೀಫ್, ನಿರ್ದೇಶಕರಾದ ಟಿ.ಮಹಾಂತೇಶ್, ಎಸ್.ಆರ್.ಗಿರೀಶ್, ನಿಶಾನಿ ಜಯಣ್ಣ, ರಘುರಾಂ ರೆಡ್ಡಿ, ಶಶಿಧರ್, ದ್ಯಾಮಣ್ಣ ಮತ್ತಿತರರು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:2nd Position2ನೇ ಸ್ಥಾನChitradurgaD. SudhakarDCC BankDistrict Co-operative Central BankKannada Latest NewsKarnatakaMinisterಕನ್ನಡ ಲೇಟೆಸ್ಟ್ ನ್ಯೂಸ್ಕರ್ನಾಟಕಚಿತ್ರದುರ್ಗಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ಡಿ.ಸುಧಾಕರ್ಡಿಸಿಸಿ ಬ್ಯಾಂಕ್‌ಸಚಿವ
Share This Article
Facebook Email Print
Previous Article ಏರೋಬಿಕ್ ಭತ್ತ ಬಯಲು ಸೀಮೆಯಲ್ಲೂ ಬೆಳೆಯುವ ಭತ್ತದ ತಳಿ ಅಭಿವೃದ್ಧಿ | ಏರೋಬಿಕ್ ಭತ್ತದ ಬಗ್ಗೆ ರೈತರಲ್ಲಿ ಹೊಸ ಕನಸು ಬಿತ್ತಿದ ಕೃಷಿ ವಿಜ್ಞಾನಿಗಳು
Next Article ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಅಧ್ಯಕ್ಷತೆಯಲ್ಲಿ ಜನತಾ ದರ್ಶನ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up