By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ
    ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್‌.ರವೀಂದ್ರ ಅಮಾನತು
    15 hours ago
    ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ
    ಜಿಲ್ಲೆಯಲ್ಲಿ ಸುರಿದ ಮಳೆಯ ವಿವರ | 10 ಮನೆ, 8 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ
    16 hours ago
    ಸುದ್ದಿಗೋಷ್ಠಿಯಲ್ಲಿ ಎಚ್.ಎಂ.ಮಂಜುನಾಥ್ ಮಾತನಾಡಿದರು
    ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)ಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    16 hours ago
    ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್‌.ವೇಣು ಜನ್ಮ ದಿನಾಚರಣೆ
    ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್‌.ವೇಣು ಜನ್ಮ ದಿನಾಚರಣೆ
    17 hours ago
    ಕನ್ನಡದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟನೆ
    ಕನ್ನಡದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    14 hours ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 days ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    6 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 hours ago
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಮೇ. 26 | ಹಠಾತ್ ಆರ್ಥಿಕ ಲಾಭ, ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ
    2 days ago
    today bhavishya
    ದಿನ ಭವಿಷ್ಯ | ಮೇ. 25 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು
    3 days ago
    today bhavishya
    ದಿನ ಭವಿಷ್ಯ | ಮೇ. 24 | ಹಠಾತ್ ಪ್ರಯಾಣದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    20 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    3 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 days ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    6 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • Life Style
    Life StyleShow More
    Indoor plants
    ಒಳಾಂಗಣ ಸಸ್ಯಗಳು ಸೊಳ್ಳೆಗಳ ಹಾವಳಿಗೆ ಕಾರಣವಾಗಬಹುದು ಎಚ್ಚರ
    3 hours ago
    microwave
    ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಮೈಕ್ರೊವೇವ್‌ನಲ್ಲಿ ಬಿಸಿ ಮಾಡಬೇಡಿ
    4 hours ago
    fruit and drinking coffee
    ಹಣ್ಣು ತಿನ್ನುವುದು ಮತ್ತು ಕಾಫಿ ಕುಡಿಯುವುದರಿಂದ ವಯಸ್ಸಾಗುವುದು ನಿಧಾನವಾಗುತ್ತದೆಯಂತೆ; ಅಧ್ಯಯನದಲ್ಲಿ ಸಾಬೀತು
    1 day ago
    oily skin
    ಎಣ್ಣೆಯುಕ್ತ ಚರ್ಮ ಹೊಂದಿರುವವರು ಬೇಸಿಗೆಯಲ್ಲಿ ಈ ಆಹಾರಗಳನ್ನು ತಪ್ಪಿಸಿ
    1 day ago
    sweating good or bad
    ಬೆವರು ಸುರಿಯುವುದು ನಿಮ್ಮ ಚರ್ಮಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ? ತಿಳಿಯಿರಿ
    2 days ago
Reading: ಘಟಾನುಘಟಿಗಳ ನಡುವೆ ಜಿದ್ದಾಜಿದ್ದಿಗೆ ಸಾಕ್ಷಿ ಕೋಟೆನಾಡು | ಚಿತ್ರದುರ್ಗ ಲೋಕಸಭೆಯ ಸಮಗ್ರ ಮಾಹಿತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಘಟಾನುಘಟಿಗಳ ನಡುವೆ ಜಿದ್ದಾಜಿದ್ದಿಗೆ ಸಾಕ್ಷಿ ಕೋಟೆನಾಡು | ಚಿತ್ರದುರ್ಗ ಲೋಕಸಭೆಯ ಸಮಗ್ರ ಮಾಹಿತಿ

chitradurganews.com
Last updated: 23 April 2024 11:24
chitradurganews.com
2 years ago
Share
chitradurga lok saba election history
SHARE

CHITRADURGA NEWS | 17 APRIL 2024

ಚಿತ್ರದುರ್ಗ: ಮಧ್ಯ ಕರ್ನಾಟಕ, ಕೋಟೆನಾಡು ಚಿತ್ರದುರ್ಗ ಲೋಕಸಭೆ ಚುನಾವಣೆ ಬ್ರಿಟೀಷರ ಕಾಲದಿಂದಲೇ ಜಿಲ್ಲಾ ಕೇಂದ್ರ. ಪಕ್ಕದ ದಾವಣಗೆರೆ ಹಿಂದೆ ಚಿತ್ರದುರ್ಗ ಜಿಲ್ಲೆಯೊಳಗೆ ಇತ್ತು.

ಇಂತಹ ಅವಿಭಜಿತ ಚಿತ್ರದುರ್ಗ ಜಿಲ್ಲೆಯಲ್ಲಿ 1952 ರಿಂದ 2024 ವರೆಗೆ ನಡೆದ ಲೋಕಸಭಾ ಚುನಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಪ್ರತಿ ಚುನಾವಣೆಯೂ ಜಿದ್ದಾಜಿದ್ದಿನಿಂದ ಕೂಡಿರುವುದು ಸ್ಪಷ್ಟವಾಗುತ್ತದೆ.

chitradurga lok saba election history

ಇದನ್ನೂ ಓದಿ: ಬಂದೇ ಬಿಡ್ತು ಬಯಲು ಸೀಮೆಲಿ ಬೆಳೆಯುವ ಭತ್ತದ ತಳಿ | ಸಿರಿಗೆರೆಯಲ್ಲಿ ಯಶಸ್ವಿ ಪ್ರಯೋಗ

ಇಲ್ಲಿ ನಡೆದಿರುವ ಒಟ್ಟು 17 ಲೋಕಸಭಾ ಚುನಾವಣೆಗಳಲ್ಲಿ 13 ಸಂಸದರು ಆಯ್ಕೆಯಾಗಿದ್ದಾರೆ. ಇಬ್ಬರು ಸಂಸದರು ಮಾತ್ರ ಎರಡು ಅವಧಿಗೆ ಆಯ್ಕೆಯಾಗಿದ್ದನ್ನು ಹೊರತುಪಡಿಸಿದರೆ ಉಳಿದೆಲ್ಲಾ ಹೊಸಬರೇ ಆಗಿದ್ದಾರೆ.
ಸದ್ಯ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರಗಳು ಹಾಗೂ ಪಕ್ಕದ ತುಮಕೂರು ಜಿಲ್ಲೆಯ ಸಿರಾ ಮತ್ತು ಪಾವಗಡ ಸೇರಿದಂತೆ ಒಟ್ಟು 08 ವಿಧಾನಸಭಾ ಕ್ಷೇತ್ರಗಳನ್ನು ಈ ಲೋಕಸಭಾ ಕ್ಷೇತ್ರ ಒಳಗೊಂಡಿದೆ.

ಇದನ್ನೂ ಓದಿ: ಚಿತ್ರದುರ್ಗದ ಸಂಸದ, ನಾಡಿನ ಮುಖ್ಯಮಂತ್ರಿಯೇ ಆದರು

ಹೇಗಿತ್ತು ದುರ್ಗದ ಜಿದ್ದಾಜಿದ್ದಿ:

  • ಭಾರತ ಸ್ವಾತಂತ್ರ್ಯಾ ನಂತರ ನಡೆದ ಮೊದಲ ಚುನಾವಣೆ 1952 ರಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಸ್.ನಿಜಲಿಂಗಪ್ಪ ಅವರು ಕಿಸಾನ್ ಮಜ್ದೂರ್ ಪ್ರಜಾ ಪಾರ್ಟಿ (ಕೆಎಂಪಿಪಿ) ಅಭ್ಯರ್ಥಿ ಜಿ.ಮರುಳಪ್ಪ ಅವರನ್ನು 79152 ಮತಗಳ ಅಂತರದಿಂದ ಮಣಿಸಿದ್ದರು. ಇನ್ನೂ ಪಕ್ಷೇತರ ಅಭ್ಯರ್ಥಿಯಾಗಿದ್ದ ಹೆಚ್.ಎಸ್. ವೆಂಕಟಾಚಲಯ್ಯ ಅವರು 44211 ಮತಗಳನ್ನು ಗಳಿಸಿದ್ದರು.
  • 1957 ರಲ್ಲಿ ನಡೆದ ಎರಡನೆ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಪ್ರಜಾ ಸೋಶಿಯಲಿಸ್ಟ್ ಪಕ್ಷ (ಪಿಎಸ್‍ಪಿ) ದಿಂದ ಸ್ಪರ್ಧಿಸಿದ್ದ ಜೆ.ಎಂ. ಮಹಮ್ಮದ್ ಇಮಾಮ್ ಸಾಬ್ ಅವರು ಕಾಂಗ್ರೆಸ್ ಪಕ್ಷದ ಎಸ್.ರಂಗರಾವ್ ಅವರಿಗಿಂತ 11,159 ಹೆಚ್ಚು ಮತಗಳನ್ನು ಪಡೆದು ಜಯಗಳಿಸಿದ್ದರು.
  • 1962 ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್.ವೀರಬಸಪ್ಪ ಪ್ರಜಾ ಸೋಶಿಯಲಿಸ್ಟ್ ಪಕ್ಷದ ಅಭ್ಯರ್ಥಿ ಜಿ.ಬಸಪ್ಪ ಅವರನ್ನು 44849 ಮತಗಳ ಅಂತರದಿಂದ ಪರಾಭವಗೊಳಿಸಿ ಆಯ್ಕೆಯಾದರು. ಈ ಚುನಾವಣೆಯಲ್ಲಿ ಎಸ್. ವೀರಬಸಪ್ಪ ಅವರು 172673 ಮತಗಳನ್ನು ಗಳಿಸಿದರೆ, ಜಿ.ಬಸಪ್ಪ ಅವರು 127824 ಮತಗಳನ್ನು ಪಡೆದರು. ಉಳಿದಂತೆ ಪಕ್ಷೇತರ ಅಭ್ಯರ್ಥಿ ಸಿ.ರಂಗಯ್ಯ ಕೇವಲ 16515 ಮತಗಳನ್ನು ಗಳಿಸಿದರು.
  • 1967 ರ ಚುನಾವಣೆಯಲ್ಲಿ ಸ್ವತಂತ್ರ ಪಾರ್ಟಿ ಅಭ್ಯರ್ಥಿಯಾಗಿ ಪುನಃ ಸ್ಪರ್ಧಿಸಿದ ಜೆ.ಎಂ. ಮಹ್ಮದ್ ಇಮಾಮ್ ಅವರು ಕಾಂಗ್ರೆಸ್‍ನ ಎಸ್.ವೀರಬಸಪ್ಪ ಅವರಿಗಿಂತ 31932 ಹೆಚ್ಚು ಮತಗಳನ್ನು ಗಳಿಸಿ ಆಯ್ಕೆಯಾದರು. ಈ ಚುನಾವಣೆಯಲ್ಲಿ ಸಿ. ರಂಗಯ್ಯ ಹಾಗೂ ಪಿ.ಹೆಚ್. ಜಯದೇವಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಇದನ್ನೂ ಓದಿ: ಹಂಪಿ ಉತ್ಸವದ ಮಾದರಿಯಲ್ಲಿ ಮದಕರಿ ನಾಯಕ ಉತ್ಸವ | ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  • 1971 ರ ಚುನಾವಣೆಯಲ್ಲಿ ಎನ್.ಪಿ.ಜೆ. ಪಕ್ಷದಿಂದ ಸ್ಪರ್ಧಿಸಿದ ಕೊಂಡಜ್ಜಿ ಬಸಪ್ಪ ಅವರು ಸ್ವತಂತ್ರ ಪಾರ್ಟಿಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆ.ಎಂ. ಮಹ್ಮದ್ ಇಮಾಮ್ ಅವರನ್ನು 169702 ಮತಗಳ ಬೃಹತ್ ಅಂತರದಿಂದ ಪರಾಭವಗೊಳಿಸಿ ವಿಜಯಶಾಲಿಯಾದರು. ಈ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ ರಂಗಯ್ಯ ಅವರು ಮೂರನೆ ಸ್ಥಾನ ಪಡೆದರು.
  • 1977 ರ ಲೋಕಸಭಾ ಚುನಾವಣೆಯಲ್ಲಿ ಕೆ.ಮಲ್ಲಣ್ಣ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಆಯ್ಕೆಯಾದರು. ಈ ಚುನಾವಣೆಯಲ್ಲಿ ಅವರು ಭಾರತೀಯ ಲೋಕದಳ ಪಕ್ಷದ ಅಭ್ಯರ್ಥಿ ಹೆಚ್.ಸಿ. ಬೋರಯ್ಯ ಅವರಿಗಿಂತ 86654 ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾದರು, ಪಕ್ಷೇತರ ಅಭ್ಯರ್ಥಿ ಚಂದ್ರಶೇಖರಯ್ಯ ಮೂರನೆ ಸ್ಥಾನಕ್ಕೆ ತೃಪ್ತಿಪಟ್ಟರು.
  • 1980 ರ ಚುನಾವಣೆಯಲ್ಲಿ ಪುನಃ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಕೆ. ಮಲ್ಲಣ್ಣ ಅವರು ಜನತಾ ಪಕ್ಷದ ಅಭ್ಯರ್ಥಿ ಬಿ.ಎಲ್.ಗೌಡ ಅವರನ್ನು 109361 ಮತಗಳಿಂದ ಸೋಲಿಸಿ ಎರಡನೆ ಬಾರಿ ಆಯ್ಕೆಯಾದರು, ಈ ಚುನಾವಣೆಯಲ್ಲಿ ಕಾಂಗ್ರೆಸ್(ಯು) ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹೆಚ್.ಸಿ. ಬೋರಯ್ಯ ಮೂರನೆ ಸ್ಥಾನ ಹಾಗೂ ಜನತಾ (ಎಸ್)ನ ಸಿ.ಆರ್. ಬಸಪ್ಪ ನಾಲ್ಕನೆ ಸ್ಥಾನ ಗಳಿಸಿದರು.
  • 1984 ರಲ್ಲಿ ನಡೆದ ಚುನಾವಣೆಯಲ್ಲಿ ಕೆ.ಹೆಚ್.ರಂಗನಾಥ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಜನತಾ ಪಕ್ಷದ ಅಭ್ಯರ್ಥಿ ಬಿ.ಎಲ್.ಗೌಡ ಅವರನ್ನು 56811 ಮತಗಳಿಂದ ಪರಾಭವಗೊಳಿಸಿ ಆಯ್ಕೆಯಾದರು. ಈ ಚುನಾವಣೆಯಲ್ಲಿ ಒಟ್ಟು 11 ಅಭ್ಯರ್ಥಿಗಳು ಕಣದಲ್ಲಿದ್ದರು.
  • 1989 ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಮೂಡಲಗಿರಿಯಪ್ಪ ಅವರು ತಮ್ಮ ಪ್ರತಿಸ್ಪರ್ಧಿಯಾದ ಜನತಾದಳ ಪಕ್ಷದ ಅಭ್ಯರ್ಥಿ ಸಣ್ಣ ಚಿಕ್ಕಪ್ಪ ಅವರನ್ನು 142193 ಮತಗಳ ಬೃಹತ್ ಅಂತರದಿಂದ ಪರಾಭವಗೊಳಿಸಿ ವಿಜಯದ ನಗೆ ಬೀರಿದರು. ಈ ಚುನಾವಣೆಯಲ್ಲಿ ಒಟ್ಟು 6 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
  • 1991 ರ ಚುನಾವಣೆಯಲ್ಲಿ ಮತ್ತೆ ಸಿ.ಪಿ.ಮೂಡಲಗಿರಿಯಪ್ಪ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಪಕ್ಷದ ಎಲ್.ಜಿ. ಹಾವನೂರು ಅವರನ್ನು 82512 ಮತಗಳ ಅಂತರದಿಂದ ಸೋಲಿಸಿ ಎರಡನೆ ಬಾರಿಗೆ ಆಯ್ಕೆಯಾದರು. ಈ ಚುನಾವಣೆಯಲ್ಲಿ ಒಟ್ಟು 07 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
  • 1996 ರ ಚುನಾವಣೆಯಲ್ಲಿ ಜನತಾದಳ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಪಿ. ಕೋದಂಡರಾಮಯ್ಯ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ ಸಿ.ಪಿ.ಮೂಡಲಗಿರಿಯಪ್ಪ ಅವರನ್ನು 19382 ಮತಗಳ ಅಂತರದಿಂದ ವಿಜಯಿಯಾದರು. ಈ ಚುನಾವಣೆಯಲ್ಲಿ ಬರೋಬ್ಬರಿ 17 ಅಭ್ಯರ್ಥಿಗಳು ಚುನಾವಣೆ ಕಣದಲ್ಲಿದ್ದರು.

ಇದನ್ನೂ ಓದಿ: ರೈತರಿಗೆ ಶುಭ ಸುದ್ದಿ | ವಾಡಿಕೆಗಿಂತ ಅಧಿಕ ಸುರಿಯಲಿದೆ ಮುಂಗಾರು | ಭಾರತೀಯ ಹವಾಮಾನ ಇಲಾಖೆ ಮಾಹಿತಿ

  • 1998 ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಮೂಡಲಗಿರಿಯಪ್ಪ ಅವರು ಲೋಕಶಕ್ತಿ ಪಕ್ಷದ ಅಭ್ಯರ್ಥಿ ಪಿ.ಕೋದಂಡರಾಮಯ್ಯ ಅವರನ್ನು 58321 ಮತಗಳಿಂದ ಪರಾಭವಗೊಳಿಸಿ ಮೂರನೆ ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾದರು.
  • 1999 ರ ಚುನಾವಣೆಯಲ್ಲಿ ನಡೆದ ತುರುಸಿನ ಸ್ಪರ್ಧೆಯಲ್ಲಿ ಕನ್ನಡ ಚಲನ ಚಿತ್ರರಂಗದ ನಟ ಶಶಿಕುಮಾರ್ ಅವರು ಜನತಾದಳ (ಯು) ಪಕ್ಷದಿಂದ ಸ್ಪರ್ಧಿಸಿ, ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ ಸಿ.ಪಿ. ಮೂಡಲಗಿರಿಯಪ್ಪ ಅವರನ್ನು ಕೇವಲ 11178 ಮತಗಳ ಅಂತರದಿಂದ ಪರಾಭವಗೊಳಿಸಿ ಆಯ್ಕೆಯಾದರು.
  • 2004 ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಿವೃತ್ತ ನ್ಯಾಯಮೂರ್ತಿ ಎನ್.ವೈ.ಹನುಮಂತಪ್ಪ ಅವರು ಜನತಾದಳ (ಜಾತ್ಯತೀತ) ಪಕ್ಷದ ಅಭ್ಯರ್ಥಿ ಪಿ. ಕೋದಂಡರಾಮಯ್ಯ ಅವರಿಗಿಂತ 37460 ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿದ್ದರು. ಈ ಚುನಾವಣೆಯಲ್ಲಿ ಒಟ್ಟು 06 ಅಭ್ಯರ್ಥಿಗಳು ಕಣದಲ್ಲಿದ್ದರು.
  • 2009 ರಲ್ಲಿ ಜರುಗಿದ ಚುನಾವಣೆಯಲ್ಲಿ ಬಿಜೆಪಿ ಅಭ್ಯಥಿಯಾಗಿ ಸ್ಪರ್ಧಿಸಿದ ಜನಾರ್ಧನಸ್ವಾಮಿ ಅವರು, ಕಾಂಗ್ರೆಸ್‍ನ ಬಿ.ತಿಪ್ಪೇಸ್ವಾಮಿ ಅವರಿಗಿಂತ 135656 ಮತಗಳ ಅಂತರದಿಂದ ಜಯಶಾಲಿಯಾದರು. ಈ ಚುನಾವಣೆಯಲ್ಲಿ ಒಟ್ಟು 11 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು.
  • 2014 ರಲ್ಲಿ ಜರುಗಿದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಬಿ.ಎನ್. ಚಂದ್ರಪ್ಪ ಅವರು, ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಜನಾರ್ಧನಸ್ವಾಮಿ ಅವರನ್ನು 101291 ಮತಗಳ ಅಂತರದಿಂದ ಪರಾಭವಗೊಳಿಸಿ ಆಯ್ಕೆಯಾದರು. ಈ ಚುನಾವಣೆಯಲ್ಲಿ 14 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ನೋಟಾ ಗೆ ಒಟ್ಟು 8895 ಮತಗಳು ಚಲಾವಣೆಯಾಗಿದ್ದವು.
  • 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಎ.ನಾರಾಯಣಸ್ವಾಮಿ 626195 ಮತಗಳನ್ನು ಪಡೆಯುವ ಮೂಲಕ ಪ್ರತಿಸ್ಪರ್ಧಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಬಿ.ಎನ್.ಚಂದ್ರಪ್ಪ ಅವರನ್ನು 80178 ಮತಗಳಿಂದ ಮಣಿಸಿದ್ದರು. ಈ ಚುನಾವಣೆಯಲ್ಲಿ 19 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chitradurgachitradurga lok saba election historyComprehensive InformationElection BackgroundKotenaduLok Sabha Electionsಕೋಟೆನಾಡುಚಿತ್ರದುರ್ಗಚುನಾವಣಾ ಹಿನ್ನೆಲೆಲೋಕಸಭೆ ಚುನಾವಣೆಸಮಗ್ರ ಮಾಹಿತಿ
Share This Article
Facebook Email Print
Previous Article ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಗೋವಿಂದ ಕಾರಜೋಳ ಗೆದ್ದರೆ ಕೇಂದ್ರದಲ್ಲಿ ಮಂತ್ರಿ ಆಗ್ತಾರೆ | ಗೂಳಿಹಟ್ಟಿ ಶೇಖರ್
Next Article ಗಡಿ ದಾಟಿದ್ರೂ ಮೂರು ದಿನ ‘ಎಣ್ಣೆ’ ಸಿಗಲ್ಲ | ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌
Leave a Comment

Leave a Reply Cancel reply

Your email address will not be published. Required fields are marked *

Indoor plants
ಒಳಾಂಗಣ ಸಸ್ಯಗಳು ಸೊಳ್ಳೆಗಳ ಹಾವಳಿಗೆ ಕಾರಣವಾಗಬಹುದು ಎಚ್ಚರ
Life Style
today bhavishya
ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
Dina Bhavishya
microwave
ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಮೈಕ್ರೊವೇವ್‌ನಲ್ಲಿ ಬಿಸಿ ಮಾಡಬೇಡಿ
Life Style
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
ಕ್ರೈಂ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up