Connect with us

    ಘಟಾನುಘಟಿಗಳ ನಡುವೆ ಜಿದ್ದಾಜಿದ್ದಿಗೆ ಸಾಕ್ಷಿ ಕೋಟೆನಾಡು | ಚಿತ್ರದುರ್ಗ ಲೋಕಸಭೆಯ ಸಮಗ್ರ ಮಾಹಿತಿ

    chitradurga lok saba election history

    ಮುಖ್ಯ ಸುದ್ದಿ

    ಘಟಾನುಘಟಿಗಳ ನಡುವೆ ಜಿದ್ದಾಜಿದ್ದಿಗೆ ಸಾಕ್ಷಿ ಕೋಟೆನಾಡು | ಚಿತ್ರದುರ್ಗ ಲೋಕಸಭೆಯ ಸಮಗ್ರ ಮಾಹಿತಿ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 17 APRIL 2024

    ಚಿತ್ರದುರ್ಗ: ಮಧ್ಯ ಕರ್ನಾಟಕ, ಕೋಟೆನಾಡು ಚಿತ್ರದುರ್ಗ ಲೋಕಸಭೆ ಚುನಾವಣೆ ಬ್ರಿಟೀಷರ ಕಾಲದಿಂದಲೇ ಜಿಲ್ಲಾ ಕೇಂದ್ರ. ಪಕ್ಕದ ದಾವಣಗೆರೆ ಹಿಂದೆ ಚಿತ್ರದುರ್ಗ ಜಿಲ್ಲೆಯೊಳಗೆ ಇತ್ತು.

    ಇಂತಹ ಅವಿಭಜಿತ ಚಿತ್ರದುರ್ಗ ಜಿಲ್ಲೆಯಲ್ಲಿ 1952 ರಿಂದ 2024 ವರೆಗೆ ನಡೆದ ಲೋಕಸಭಾ ಚುನಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಪ್ರತಿ ಚುನಾವಣೆಯೂ ಜಿದ್ದಾಜಿದ್ದಿನಿಂದ ಕೂಡಿರುವುದು ಸ್ಪಷ್ಟವಾಗುತ್ತದೆ.

    chitradurga lok saba election history

    ಇದನ್ನೂ ಓದಿ: ಬಂದೇ ಬಿಡ್ತು ಬಯಲು ಸೀಮೆಲಿ ಬೆಳೆಯುವ ಭತ್ತದ ತಳಿ | ಸಿರಿಗೆರೆಯಲ್ಲಿ ಯಶಸ್ವಿ ಪ್ರಯೋಗ

    ಇಲ್ಲಿ ನಡೆದಿರುವ ಒಟ್ಟು 17 ಲೋಕಸಭಾ ಚುನಾವಣೆಗಳಲ್ಲಿ 13 ಸಂಸದರು ಆಯ್ಕೆಯಾಗಿದ್ದಾರೆ. ಇಬ್ಬರು ಸಂಸದರು ಮಾತ್ರ ಎರಡು ಅವಧಿಗೆ ಆಯ್ಕೆಯಾಗಿದ್ದನ್ನು ಹೊರತುಪಡಿಸಿದರೆ ಉಳಿದೆಲ್ಲಾ ಹೊಸಬರೇ ಆಗಿದ್ದಾರೆ.
    ಸದ್ಯ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರಗಳು ಹಾಗೂ ಪಕ್ಕದ ತುಮಕೂರು ಜಿಲ್ಲೆಯ ಸಿರಾ ಮತ್ತು ಪಾವಗಡ ಸೇರಿದಂತೆ ಒಟ್ಟು 08 ವಿಧಾನಸಭಾ ಕ್ಷೇತ್ರಗಳನ್ನು ಈ ಲೋಕಸಭಾ ಕ್ಷೇತ್ರ ಒಳಗೊಂಡಿದೆ.

    ಇದನ್ನೂ ಓದಿ: ಚಿತ್ರದುರ್ಗದ ಸಂಸದ, ನಾಡಿನ ಮುಖ್ಯಮಂತ್ರಿಯೇ ಆದರು

    ಹೇಗಿತ್ತು ದುರ್ಗದ ಜಿದ್ದಾಜಿದ್ದಿ:

    • ಭಾರತ ಸ್ವಾತಂತ್ರ್ಯಾ ನಂತರ ನಡೆದ ಮೊದಲ ಚುನಾವಣೆ 1952 ರಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಸ್.ನಿಜಲಿಂಗಪ್ಪ ಅವರು ಕಿಸಾನ್ ಮಜ್ದೂರ್ ಪ್ರಜಾ ಪಾರ್ಟಿ (ಕೆಎಂಪಿಪಿ) ಅಭ್ಯರ್ಥಿ ಜಿ.ಮರುಳಪ್ಪ ಅವರನ್ನು 79152 ಮತಗಳ ಅಂತರದಿಂದ ಮಣಿಸಿದ್ದರು. ಇನ್ನೂ ಪಕ್ಷೇತರ ಅಭ್ಯರ್ಥಿಯಾಗಿದ್ದ ಹೆಚ್.ಎಸ್. ವೆಂಕಟಾಚಲಯ್ಯ ಅವರು 44211 ಮತಗಳನ್ನು ಗಳಿಸಿದ್ದರು.
    • 1957 ರಲ್ಲಿ ನಡೆದ ಎರಡನೆ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಪ್ರಜಾ ಸೋಶಿಯಲಿಸ್ಟ್ ಪಕ್ಷ (ಪಿಎಸ್‍ಪಿ) ದಿಂದ ಸ್ಪರ್ಧಿಸಿದ್ದ ಜೆ.ಎಂ. ಮಹಮ್ಮದ್ ಇಮಾಮ್ ಸಾಬ್ ಅವರು ಕಾಂಗ್ರೆಸ್ ಪಕ್ಷದ ಎಸ್.ರಂಗರಾವ್ ಅವರಿಗಿಂತ 11,159 ಹೆಚ್ಚು ಮತಗಳನ್ನು ಪಡೆದು ಜಯಗಳಿಸಿದ್ದರು.
    • 1962 ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್.ವೀರಬಸಪ್ಪ ಪ್ರಜಾ ಸೋಶಿಯಲಿಸ್ಟ್ ಪಕ್ಷದ ಅಭ್ಯರ್ಥಿ ಜಿ.ಬಸಪ್ಪ ಅವರನ್ನು 44849 ಮತಗಳ ಅಂತರದಿಂದ ಪರಾಭವಗೊಳಿಸಿ ಆಯ್ಕೆಯಾದರು. ಈ ಚುನಾವಣೆಯಲ್ಲಿ ಎಸ್. ವೀರಬಸಪ್ಪ ಅವರು 172673 ಮತಗಳನ್ನು ಗಳಿಸಿದರೆ, ಜಿ.ಬಸಪ್ಪ ಅವರು 127824 ಮತಗಳನ್ನು ಪಡೆದರು. ಉಳಿದಂತೆ ಪಕ್ಷೇತರ ಅಭ್ಯರ್ಥಿ ಸಿ.ರಂಗಯ್ಯ ಕೇವಲ 16515 ಮತಗಳನ್ನು ಗಳಿಸಿದರು.
    • 1967 ರ ಚುನಾವಣೆಯಲ್ಲಿ ಸ್ವತಂತ್ರ ಪಾರ್ಟಿ ಅಭ್ಯರ್ಥಿಯಾಗಿ ಪುನಃ ಸ್ಪರ್ಧಿಸಿದ ಜೆ.ಎಂ. ಮಹ್ಮದ್ ಇಮಾಮ್ ಅವರು ಕಾಂಗ್ರೆಸ್‍ನ ಎಸ್.ವೀರಬಸಪ್ಪ ಅವರಿಗಿಂತ 31932 ಹೆಚ್ಚು ಮತಗಳನ್ನು ಗಳಿಸಿ ಆಯ್ಕೆಯಾದರು. ಈ ಚುನಾವಣೆಯಲ್ಲಿ ಸಿ. ರಂಗಯ್ಯ ಹಾಗೂ ಪಿ.ಹೆಚ್. ಜಯದೇವಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

    ಇದನ್ನೂ ಓದಿ: ಹಂಪಿ ಉತ್ಸವದ ಮಾದರಿಯಲ್ಲಿ ಮದಕರಿ ನಾಯಕ ಉತ್ಸವ | ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

    • 1971 ರ ಚುನಾವಣೆಯಲ್ಲಿ ಎನ್.ಪಿ.ಜೆ. ಪಕ್ಷದಿಂದ ಸ್ಪರ್ಧಿಸಿದ ಕೊಂಡಜ್ಜಿ ಬಸಪ್ಪ ಅವರು ಸ್ವತಂತ್ರ ಪಾರ್ಟಿಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆ.ಎಂ. ಮಹ್ಮದ್ ಇಮಾಮ್ ಅವರನ್ನು 169702 ಮತಗಳ ಬೃಹತ್ ಅಂತರದಿಂದ ಪರಾಭವಗೊಳಿಸಿ ವಿಜಯಶಾಲಿಯಾದರು. ಈ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ ರಂಗಯ್ಯ ಅವರು ಮೂರನೆ ಸ್ಥಾನ ಪಡೆದರು.
    • 1977 ರ ಲೋಕಸಭಾ ಚುನಾವಣೆಯಲ್ಲಿ ಕೆ.ಮಲ್ಲಣ್ಣ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಆಯ್ಕೆಯಾದರು. ಈ ಚುನಾವಣೆಯಲ್ಲಿ ಅವರು ಭಾರತೀಯ ಲೋಕದಳ ಪಕ್ಷದ ಅಭ್ಯರ್ಥಿ ಹೆಚ್.ಸಿ. ಬೋರಯ್ಯ ಅವರಿಗಿಂತ 86654 ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾದರು, ಪಕ್ಷೇತರ ಅಭ್ಯರ್ಥಿ ಚಂದ್ರಶೇಖರಯ್ಯ ಮೂರನೆ ಸ್ಥಾನಕ್ಕೆ ತೃಪ್ತಿಪಟ್ಟರು.
    • 1980 ರ ಚುನಾವಣೆಯಲ್ಲಿ ಪುನಃ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಕೆ. ಮಲ್ಲಣ್ಣ ಅವರು ಜನತಾ ಪಕ್ಷದ ಅಭ್ಯರ್ಥಿ ಬಿ.ಎಲ್.ಗೌಡ ಅವರನ್ನು 109361 ಮತಗಳಿಂದ ಸೋಲಿಸಿ ಎರಡನೆ ಬಾರಿ ಆಯ್ಕೆಯಾದರು, ಈ ಚುನಾವಣೆಯಲ್ಲಿ ಕಾಂಗ್ರೆಸ್(ಯು) ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹೆಚ್.ಸಿ. ಬೋರಯ್ಯ ಮೂರನೆ ಸ್ಥಾನ ಹಾಗೂ ಜನತಾ (ಎಸ್)ನ ಸಿ.ಆರ್. ಬಸಪ್ಪ ನಾಲ್ಕನೆ ಸ್ಥಾನ ಗಳಿಸಿದರು.
    • 1984 ರಲ್ಲಿ ನಡೆದ ಚುನಾವಣೆಯಲ್ಲಿ ಕೆ.ಹೆಚ್.ರಂಗನಾಥ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಜನತಾ ಪಕ್ಷದ ಅಭ್ಯರ್ಥಿ ಬಿ.ಎಲ್.ಗೌಡ ಅವರನ್ನು 56811 ಮತಗಳಿಂದ ಪರಾಭವಗೊಳಿಸಿ ಆಯ್ಕೆಯಾದರು. ಈ ಚುನಾವಣೆಯಲ್ಲಿ ಒಟ್ಟು 11 ಅಭ್ಯರ್ಥಿಗಳು ಕಣದಲ್ಲಿದ್ದರು.
    • 1989 ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಮೂಡಲಗಿರಿಯಪ್ಪ ಅವರು ತಮ್ಮ ಪ್ರತಿಸ್ಪರ್ಧಿಯಾದ ಜನತಾದಳ ಪಕ್ಷದ ಅಭ್ಯರ್ಥಿ ಸಣ್ಣ ಚಿಕ್ಕಪ್ಪ ಅವರನ್ನು 142193 ಮತಗಳ ಬೃಹತ್ ಅಂತರದಿಂದ ಪರಾಭವಗೊಳಿಸಿ ವಿಜಯದ ನಗೆ ಬೀರಿದರು. ಈ ಚುನಾವಣೆಯಲ್ಲಿ ಒಟ್ಟು 6 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
    • 1991 ರ ಚುನಾವಣೆಯಲ್ಲಿ ಮತ್ತೆ ಸಿ.ಪಿ.ಮೂಡಲಗಿರಿಯಪ್ಪ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಪಕ್ಷದ ಎಲ್.ಜಿ. ಹಾವನೂರು ಅವರನ್ನು 82512 ಮತಗಳ ಅಂತರದಿಂದ ಸೋಲಿಸಿ ಎರಡನೆ ಬಾರಿಗೆ ಆಯ್ಕೆಯಾದರು. ಈ ಚುನಾವಣೆಯಲ್ಲಿ ಒಟ್ಟು 07 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
    • 1996 ರ ಚುನಾವಣೆಯಲ್ಲಿ ಜನತಾದಳ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಪಿ. ಕೋದಂಡರಾಮಯ್ಯ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ ಸಿ.ಪಿ.ಮೂಡಲಗಿರಿಯಪ್ಪ ಅವರನ್ನು 19382 ಮತಗಳ ಅಂತರದಿಂದ ವಿಜಯಿಯಾದರು. ಈ ಚುನಾವಣೆಯಲ್ಲಿ ಬರೋಬ್ಬರಿ 17 ಅಭ್ಯರ್ಥಿಗಳು ಚುನಾವಣೆ ಕಣದಲ್ಲಿದ್ದರು.

    ಇದನ್ನೂ ಓದಿ: ರೈತರಿಗೆ ಶುಭ ಸುದ್ದಿ | ವಾಡಿಕೆಗಿಂತ ಅಧಿಕ ಸುರಿಯಲಿದೆ ಮುಂಗಾರು | ಭಾರತೀಯ ಹವಾಮಾನ ಇಲಾಖೆ ಮಾಹಿತಿ

    • 1998 ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಮೂಡಲಗಿರಿಯಪ್ಪ ಅವರು ಲೋಕಶಕ್ತಿ ಪಕ್ಷದ ಅಭ್ಯರ್ಥಿ ಪಿ.ಕೋದಂಡರಾಮಯ್ಯ ಅವರನ್ನು 58321 ಮತಗಳಿಂದ ಪರಾಭವಗೊಳಿಸಿ ಮೂರನೆ ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾದರು.
    • 1999 ರ ಚುನಾವಣೆಯಲ್ಲಿ ನಡೆದ ತುರುಸಿನ ಸ್ಪರ್ಧೆಯಲ್ಲಿ ಕನ್ನಡ ಚಲನ ಚಿತ್ರರಂಗದ ನಟ ಶಶಿಕುಮಾರ್ ಅವರು ಜನತಾದಳ (ಯು) ಪಕ್ಷದಿಂದ ಸ್ಪರ್ಧಿಸಿ, ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ ಸಿ.ಪಿ. ಮೂಡಲಗಿರಿಯಪ್ಪ ಅವರನ್ನು ಕೇವಲ 11178 ಮತಗಳ ಅಂತರದಿಂದ ಪರಾಭವಗೊಳಿಸಿ ಆಯ್ಕೆಯಾದರು.
    • 2004 ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಿವೃತ್ತ ನ್ಯಾಯಮೂರ್ತಿ ಎನ್.ವೈ.ಹನುಮಂತಪ್ಪ ಅವರು ಜನತಾದಳ (ಜಾತ್ಯತೀತ) ಪಕ್ಷದ ಅಭ್ಯರ್ಥಿ ಪಿ. ಕೋದಂಡರಾಮಯ್ಯ ಅವರಿಗಿಂತ 37460 ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿದ್ದರು. ಈ ಚುನಾವಣೆಯಲ್ಲಿ ಒಟ್ಟು 06 ಅಭ್ಯರ್ಥಿಗಳು ಕಣದಲ್ಲಿದ್ದರು.
    • 2009 ರಲ್ಲಿ ಜರುಗಿದ ಚುನಾವಣೆಯಲ್ಲಿ ಬಿಜೆಪಿ ಅಭ್ಯಥಿಯಾಗಿ ಸ್ಪರ್ಧಿಸಿದ ಜನಾರ್ಧನಸ್ವಾಮಿ ಅವರು, ಕಾಂಗ್ರೆಸ್‍ನ ಬಿ.ತಿಪ್ಪೇಸ್ವಾಮಿ ಅವರಿಗಿಂತ 135656 ಮತಗಳ ಅಂತರದಿಂದ ಜಯಶಾಲಿಯಾದರು. ಈ ಚುನಾವಣೆಯಲ್ಲಿ ಒಟ್ಟು 11 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು.
    • 2014 ರಲ್ಲಿ ಜರುಗಿದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಬಿ.ಎನ್. ಚಂದ್ರಪ್ಪ ಅವರು, ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಜನಾರ್ಧನಸ್ವಾಮಿ ಅವರನ್ನು 101291 ಮತಗಳ ಅಂತರದಿಂದ ಪರಾಭವಗೊಳಿಸಿ ಆಯ್ಕೆಯಾದರು. ಈ ಚುನಾವಣೆಯಲ್ಲಿ 14 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ನೋಟಾ ಗೆ ಒಟ್ಟು 8895 ಮತಗಳು ಚಲಾವಣೆಯಾಗಿದ್ದವು.
    • 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಎ.ನಾರಾಯಣಸ್ವಾಮಿ 626195 ಮತಗಳನ್ನು ಪಡೆಯುವ ಮೂಲಕ ಪ್ರತಿಸ್ಪರ್ಧಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಬಿ.ಎನ್.ಚಂದ್ರಪ್ಪ ಅವರನ್ನು 80178 ಮತಗಳಿಂದ ಮಣಿಸಿದ್ದರು. ಈ ಚುನಾವಣೆಯಲ್ಲಿ 19 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top