CHITRADURGA NEWS | 14 MARCH 2024
ಚಿತ್ರದುರ್ಗ: ಲೋಕಸಭೆ ಟಿಕೇಟ್ ಹಂಚಿಕೆ ಕಾರಣಕ್ಕೆ ಚಿತ್ರದುರ್ಗ ಈಗ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.
ಕೇಂದ್ರ ಸಚಿವರು, ಹಾಲಿ ಬಿಜೆಪಿ ಸಂಸದರಿದ್ದರೂ ಅಭ್ಯರ್ಥಿ ಆಯ್ಕೆ ವಿಚಾರ ಇಲ್ಲಿ ಕಗ್ಗಂಟಾಗಿದೆ. ಮೊದಲ ಪಟ್ಟಿಯಲ್ಲೇ ಘೋಷಣೆಯಾಗುವ ನಿರೀಕ್ಷೆಯಿದ್ದ ಕ್ಷೇತ್ರವೀಗ ಎರಡನೇ ಪಟ್ಟಿಯಲ್ಲೂ ಕೈ ಬಿಟ್ಟು ಹೋಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಸೇರ್ತಿರಾ ಅಂದಾಕ್ಷಣ ಕೆಂಡಾಮಂಡಲರಾದ ಸಚಿವ ಎ.ನಾರಾಯಣಸ್ವಾಮಿ
ಸಾಮಾನ್ಯವಾಗಿ ಹಾಲಿ ಸಂಸದರಿದ್ದಾಗ ಅವರಿಗೆ ಟಿಕೇಟ್ ನೀಡುವುದು ವಾಡಿಕೆ. ಆದರೆ, ರಾಜ್ಯದ ಹಲವು ಕಡೆಗಳಲ್ಲಿ ಹಾಲಿ ಸಂಸದರಿಗೆ ಟಿಕೇಟ್ ಕೈ ತಪ್ಪಿರುವುದು ಅಚ್ಚರಿಗೆ ಕಾರಣವಾಗಿದೆ.
ಎಸ್ಸಿ ಮೀಸಲು ಕ್ಷೇತ್ರವಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಎ.ನಾರಾಯಣಸ್ವಾಮಿ 2019ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂದು ಜಯ ಸಾಧಿಸಿದರು. ಆನಂತರದ ಬೆಳವಣಿಗೆಯಲ್ಲಿ ಕೇಂದ್ರ ಸಚಿವರೂ ಆದರು.
ಇದನ್ನೂ ಓದಿ: ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್
ಆದರೆ, ಕಳೆದ ಕೆಲ ದಿನಗಳ ಹಿಂದೆ ರಾಜಕೀಯದ ಕುರಿತು ನಾರಾಯಣಸ್ವಾಮಿ ಆಡಿದ್ದ ನಿರಾಸಕ್ತಿಯ ಮಾತುಗಳೇ ಟಿಕೇಟ್ ಘೋಷಣೆ ವಿಳಂಬಕ್ಕೆ ಕಾರಣ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ದಲಿತ ಎಡಗೈ ಸಮುದಾಯದ ಪ್ರಬಲ ನಾಯಕರಾಗಿರುವ ನಾರಾಯಣಸ್ವಾಮಿಗೆ ಟಿಕೇಟ್ ಪಕ್ಕಾ ಎನ್ನುವ ಲೆಕ್ಕಾಚಾರಗಳೂ ಕೇಳಿ ಬಂದಿವೆ. ಚಿತ್ರದುರ್ಗ ಬಿಜೆಪಿಯಿಂದಲೂ ಅವರ ಹೆಸರು ಶಿಫಾರಸ್ಸಾಗಿದೆ.
ಇದನ್ನೂ ಓದಿ: ಫೇಕ್ ಗಿರಾಕಿಗಳಿಗೆ ದೇವರು ಒಳ್ಳೆಯದು ಮಾಡಲಿ
ನಾರಾಯಣಸ್ವಾಮಿ ಭ್ರಷ್ಟ ರಾಜಕಾರಣದಲ್ಲಿ ಮುಂದುವರೆಯುವ ಬಗ್ಗೆ ಪ್ರಶ್ನೆ ಇಟ್ಟಿದ್ದ ಕಾರಣಕ್ಕೆ ಮಾಜಿ ಸಂಸದ ಜನಾರ್ಧನಸ್ವಾಮಿ, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಪುತ್ರ ಎಂ.ಸಿ.ರಘುಚಂದನ್ ಅಖಾಡಕ್ಕೆ ಇಳಿದಿದ್ದಾರೆ. ಹೈಕಮಾಂಡ್ ವಲಯದಲ್ಲಿ ಜನಾರ್ಧನಸ್ವಾಮಿ ಟಿಕೇಟ್ಗೆ ಪ್ರಬಲವಾಗಿ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ.
ಇನ್ನೂ ಎಂ.ಸಿ.ರಘುಚಂದನ್ ಕೂಡಾ ಟಿಕೇಟ್ ಸಿಗುವ ಬಲವಾದ ವಿಶ್ವಾಸದಲ್ಲಿ ಕ್ಷೇತ್ರದಲ್ಲಿ ಒಂದು ಸುತ್ತಿನ ಪ್ರಚಾರವನ್ನೇ ಮುಗಿಸಿದ್ದಾರೆ. ದೆಹಲಿ ನಾಯಕರನ್ನೂ ಭೇಟಿ ಮಾಡಿ ಮಾತುಕತೆ ನಡೆಸಿರುವ ಅವರು, ಯುವ ಕೋಟಾದಲ್ಲಿ ಟಿಕೇಟ್ ಸಿಗುವ ನಿರೀಕ್ಷೆ ಹೊಂದಿದ್ದಾರೆ.
ಇದನ್ನೂ ಓದಿ: ಚುನಾವಣೆ ಹೊಸ್ತಿಲಲ್ಲಿ ಸರ್ಕಾರಿ ನೌಕರರಿಗೆ ಬಂಪರ್
ಇದರೊಟ್ಟಿಗೆ ನಿವೃತ್ತ ಐಎಎಸ್ ಅಧಿಕಾರಿ ಎಂ.ಕೆ.ಶ್ರೀರಂಗಯ್ಯ, ಲಕ್ಷ್ಮೀನಾರಾಯಣ ಅವರ ಹೆಸರುಗಳು ಚಾಲ್ತಿಯಲ್ಲಿವೆ.
ಅಚ್ಚರಿಯ ಅಭ್ಯರ್ಥಿ ಆಗ್ತಾರಾ ಮಾದಾರ ಶ್ರೀ:
ಈ ನಡುವೆ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಹೆಸರು ಬಲವಾಗಿ ಕ್ಷೇತ್ರದಲ್ಲಿ ಸದ್ದು ಮಾಡಿದೆ. ಈ ಬಾರಿ ಸ್ವಾಮೀಜಿಗೆ ಬಿಜೆಪಿ ಟಿಕೇಟ್ ನೀಡುತ್ತದೆ ಎನ್ನುವ ಊಹಾಪೋಹಗಳು ರಾಜಕೀಯ ವಲಯದಲ್ಲಿ ಕೇಳಿ ಬಂದಿವೆ.
ಇದನ್ನೂ ಓದಿ: 49 ಸಾವಿರದ ಗಡಿ ತಲುಪಿದ ಅಡಿಕೆ ಧಾರಣೆ
ರಾಜ್ಯದ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಇಂತಹ ಪ್ರಯೋಗಕ್ಕೆ ಮುಂದಾಗಿದ್ದು, ಚಿತ್ರದುರ್ಗದಲ್ಲೂ ಅಚ್ಚರಿಯ ಅಭ್ಯರ್ಥಿಯಾಗಿ ಮಾದಾರ ಚನ್ನಯ್ಯ ಸ್ವಾಮೀಜಿ ಚುನಾವಣಾ ರಾಜಕಾರಣಕ್ಕೆ ಬರುತ್ತಾರಾ ಎನ್ನುವ ಕೌತುಕ ಕ್ಷೇತ್ರದಲ್ಲಿ ಮನೆ ಮಾಡಿದೆ.
ಕಾಂಗ್ರೆಸ್ ಪಾಳೆಯದಲ್ಲೂ ಮುಗಿಯದ ಗೊಂದಲ:
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಲ್ಲಿರುವ ಗೊಂದಲ ಕಾಂಗ್ರೆಸ್ ಪಕ್ಷದಲ್ಲೂ ಇದೆ. ಕಾಂಗ್ರೆಸ್ ಬಿಡುಗಡೆ ಮಾಡಿದ ಎರಡನೇ ಪಟ್ಟಿಯಲ್ಲಿ ಚಿತ್ರದುರ್ಗ ಅಭ್ಯರ್ಥಿಯಾಗಿ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಅವರ ಹೆಸರು ಅಂತಿಮವಾಗಿದೆ ಎನ್ನುತ್ತಿರುವಾಗಲೇ ಅವರ ಹೆಸರನ್ನು ತಡೆ ಹಿಡಿಯಲಾಗಿದೆ.
ಇದನ್ನೂ ಓದಿ: ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನಕ್ಕೆ ಅವಕಾಶ
ಈ ನಡುವೆ ಬಿ.ಎನ್.ಚಂದ್ರಪ್ಪ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ಪ್ರಭಾವಿ ಸಚಿವರೊಬ್ಬರು ನನ್ನ ಹೆಸರನ್ನು ತಡೆ ಹಿಡಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ನಕಲಿ ಜಾತಿ ಪ್ರಮಾಣ ಪತ್ರ ಇಟ್ಟುಕೊಂಡು ನನ್ನ ತೇಜೋವಧೆ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಪೂರಕವಾಗಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರ ಪುತ್ರ ವಿನಯ್ ತಿಮ್ಮಾಪುರ ಚಿತ್ರದುರ್ಗ ಕ್ಷೇತ್ರಕ್ಕೆ ಪ್ರಬಲ ಅಭ್ಯರ್ಥಿಯಾಗಿ ಓಡಾಡುತ್ತಿದ್ದಾರೆ. ತಮ್ಮ ಪುತ್ರನಿಗೆ ಟಿಕೇಟ್ ಕೊಡಿಸಲು ತಿಮ್ಮಾಪುರ ಲಾಬಿ ನಡೆಸುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.
ಇದನ್ನೂ ಓದಿ: ಅಪ್ಪಾಜಿ ನಡೆದಾಡಿದ ಚಿತ್ರದುರ್ಗ ನನ್ನೂರು | ಹ್ಯಾಟ್ರಿಕ್ ಹೀರೋ
ಇದೆಲ್ಲವನ್ನೂ ಮೀರಿ ಚಿತ್ರದುರ್ಗಕ್ಕೆ ಹೊರಗಿನವರು ಬೇಡ, ಸ್ಥಳೀಯರಿಗೆ ಟಿಕೇಟ್ ನೀಡಿ ಎಂದು 2009ರ ಚುನಾವಣೆಯಲಿ ಪರಾಭವಗೊಂಡಿದ್ದ ಡಾ.ಬಿ.ತಿಪ್ಪೇಸ್ವಾಮಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದಾರೆ.
ಇನ್ನೂ ಚಿತ್ರದುರ್ಗ ಕ್ಷೇತ್ರದಿಂದ ಭೋವಿ ಸಮುದಾಯಕ್ಕೆ ಟಿಕೇಟ್ ಕೊಡಬೇಕು ಎಂದು ನೇರ್ಲಗುಂಟೆಯ ಡಾ.ವೈ.ರಾಮಪ್ಪ ಬಲವಾಗಿ ಕುಳಿತಿದ್ದಾರೆ.
ಇದನ್ನೂ ಓದಿ: ರೈಲ್ವೇ ಇಲಾಖೆಯಲ್ಲಿ 9144 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಚಿತ್ರದುರ್ಗದ ಕಾಂಗ್ರೆಸ್ ಮುಖಂಡರಾ ಜಿ.ಎಸ್.ಮಂಜುನಾಥ್, ಯುವ ಮುಖಂಡ ಪಿ.ರಘು ಸೇರಿದಂತೆ ಹಲವು ನಾಯಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ತಾವು ಆಕಾಂಕ್ಷಿಗಳು ಎನ್ನುತ್ತಿದ್ದಾರೆ. ಇದರಿಂದ ಕಾಂಗ್ರೆಸ್ ಟಿಕೇಟ್ ಯಾರಿಗೆ ಎನ್ನುವುದು ದೊಡ್ಡ ಗೊಂದಲವಾಗಿದ್ದು, ಇಂದು ಅಥವಾ ನಾಳೆ ಅಂತಿಮವಾಗಿ ಘೋಷಣೆ ಆಗಬಹುದು ಎನ್ನಲಾಗುತ್ತಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
