
ಚಿತ್ರದುರ್ಗ ನ್ಯೂಸ್. ಕಾಂ: ಹಿಂದೂ ಮಹಾಗಣಪತಿ ಶೋಭಾಯಾತ್ರೆ ಅಂಗವಾಗಿ ಚಿತ್ರದುರ್ಗ ನಗರ ಮಧುವಣಗಿತ್ತಿಯಂತೆ ಕಂಗೊಳಿಸುತ್ತಿದೆ.
ಹೊಳಲ್ಕೆರೆ ರಸ್ತೆಯ ಚಂದ್ರವಳ್ಳಿ ಕ್ರಾಸ್ ನಿಂದ ಚಳ್ಳಕೆರೆ ಗೇಟ್ ವರೆಗೆ ಮಾರ್ಗದುದ್ದಕ್ಕೂ ಹಾಕಿರುವ ಬಂಗಾರದ ಬಣ್ಣದ ಲೈಟುಗಳು ಹೊಸ ನೋಟವನ್ನೇ ಕೊಡುತ್ತಿವೆ.

ಇನ್ನೂ ನಗರದ ಗಾಂಧಿ ವೃತ್ತ, ಮದಕರಿ ನಾಯಕರ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಕನಕ ವೃತ್ತ, ಒನಕೆ ಒಬವ್ವ ವೃತ್ತ, ಜೈನ ವೃತ್ತ, ಓಂ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತಿಗಳನ್ನು ವಿಶೇಷವಾಗಿ ಅಲಂಕರಿಸಲಾಗಿದೆ.


ಎಲ್ಲ ಕಡೆ ಜನ ಮುಗಿಬಿದ್ದು ಪೋಟೊ, ವಿಡಿಯೋ ತೆಗೆದುಕೊಳ್ಳುತ್ತಿದ್ದಾರೆ. ರಸ್ತೆಯುದ್ದಕ್ಕೂ ವಿಡಿಯೋ ಮಾಡಿಕೊಂಡು ಹೋಗುವ ದೃಶ್ಯ ಸಾಮಾನ್ಯವಾಗಿವೆ. ಮನೆ ಮಂದಿಯೆಲ್ಲಾ ಬಂದು ಸುಂದರ ದೃಶ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
ಇದೆಲ್ಲದರ ಜೊತೆಗೆ ಪ್ರವಾಸಿ ಮಂದಿರದ ಮುಂಭಾಗದ ಜೈನ ವೃತ್ತ ಹಾಗೂ ಓಂ ವೃತ್ತದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ವಿಶೇ ವ್ಯವಸ್ಥೆ ಮಾಡಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
