By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Narendra modi: 2027ಕ್ಕೆ ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಪೂರ್ಣ | ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Narendra modi: 2027ಕ್ಕೆ ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಪೂರ್ಣ | ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆ

ಮುಖ್ಯ ಸುದ್ದಿ

Narendra modi: 2027ಕ್ಕೆ ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಪೂರ್ಣ | ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆ

chitradurganews.com
Last updated: 3 October 2024 00:07
chitradurganews.com
9 months ago
Share
V.Somanna railway meating
ಅಧಿಕಾರಿಗಳ ಸಭೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 02 october 2024

ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗ ಹಾಗೂ ಪಾವಗಡ-ರಾಯದುರ್ಗ ನೂತನ ರೈಲ್ವೆ ಯೋಜನೆ 2027ರ ಜನವರಿಯೊಳಗೆ ಪೂರ್ಣಗೊಂಡು ಲೋಕಾರ್ಪಣೆಯಾಗಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ತುಮಕೂರು-ಚಿತ್ರದುರ್ಗ-ದಾವಣಗೆರೆ ಹಾಗೂ ರಾಯದುರ್ಗ-ಪಾವಗಡ ನೂತನ ರೈಲ್ವೆ ಮಾರ್ಗಗಳ ಭೂಸ್ವಾಧೀನ ಪ್ರಕ್ರಿಯೆ ಕುರಿತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಇದನ್ನೂ ಓದಿ: ಕೆರೆಗಳಿಗೆ ನೀರು ತುಂಬಿಸುವುದು ನನ್ನ ಮೊದಲ ಆದ್ಯತೆ | ಶಾಸಕ ಎಂ.ಚಂದ್ರಪ್ಪ

2140 ಕೋಟಿ ರೂ. ವೆಚ್ಚದಲ್ಲಿ ನೂತನ ರೈಲ್ವೆ ಮಾರ್ಗಗಳ ನಿರ್ಮಾಣ ಕಾರ್ಯಕ್ಕೆ ಯೋಜನೆ ರೂಪಿಸಲಾಗಿದೆ. ಈ ಮೊದಲು ರಾಜ್ಯ ಹಾಗೂ ಕೇಂದ್ರ ಸರ್ಕಾರ ಶೇ.50-50ರ ಅನುಪಾತದಲ್ಲಿ ಯೋಜನೆ ಜಾರಿಗೊಳಿಸುವ ತೀರ್ಮಾನಿಸಲಾಗಿತ್ತು. ಇದನ್ನು ಬದಲಿಸಿ ರಾಜ್ಯ ಸರ್ಕಾರ ಭೂ ಸ್ವಾಧೀನ ವೆಚ್ಚವನ್ನು ಭರಿಸಿ, ಯೋಜನೆಗೆ ಭೂಮಿ ಹಸ್ತಾಂತರಿಸಿದರೆ ರೈಲ್ವೆ ಇಲಾಖೆಯಿಂದಲೇ ಯೋಜನೆಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಲಾಗುವುದು ಎಂದರು.

Davangere, Chitradurga and Tumkur direct train route
ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ನೇರ ರೈಲು ಮಾರ್ಗ

ಎರಡು ನೂತನ ರೈಲ್ವೆ ಮಾರ್ಗಗಳಿಗೆ 2409 ಎಕರೆ ಭೂಮಿ ಅವಶ್ಯಕತೆ ಇದ್ದು, ಇದರಲ್ಲಿ ಕೇವಲ 280 ಎಕರೆ ಭೂಸ್ವಾಧೀನ ಪ್ರಕ್ರಿಯೆ ಬಾಕಿ ಇದೆ. ರೈಲ್ವೆ ಮಾರ್ಗಕ್ಕೆ ಈಗಾಗಲೆ 1100 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ನಂತರ ಪ್ರಧಾನಮಂತ್ರಿಗಳ ಸೂಚನೆಯಂತೆ 2027ರ ಜನವರಿ ವೇಳೆಗೆ ನೂತನ ರೈಲ್ವೆ ಮಾರ್ಗಗಳ ನಿರ್ಮಾಣ ಮಾಡಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra modi)  ಹಾಗೂ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರಿಂದ ಲೋಕಾರ್ಪಣೆ ಮಾಡುವುದಾಗಿ ಸಚಿವ ವಿ.ಸೋಮಣ್ಣ ತಿಳಿಸಿದರು.

ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಆದ್ಯತೆ:

ಪ್ರಸ್ತುತ ನೂತನ ರೈಲ್ವೆ ಮಾರ್ಗಗಳನ್ನು ನಿರ್ಮಾಣ ಮಾಡುವ ವೇಳೆ ರೈಲ್ವೆ ಕೆಳ ಸೇತುವೆ ನಿರ್ಮಾಣದ ಬದಲಿಗೆ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಚಿವ ವಿ.ಸೋಮಣ್ಣ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಳೆ ನೀರು ಸಂಗ್ರಹಗೊಂಡು ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿರುವ ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿನ ರೈಲ್ವೆ ಕೆಳಸೇತುವೆ ದುರಸ್ತಿ ಕಾರ್ಯವನ್ನು ಸಂಸದ ಗೋವಿಂದ ಎಂ ಕಾರಜೋಳ ಅವರ ಸಲಹೆ ಪಡೆದು, ರೈಲ್ವೆ ಕೆಳ ಸೇತುವೆಗಳ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

156 ಎಕರೆ ಭೂಸ್ವಾಧೀನ ಪ್ರಕ್ರಿಯೆ ಬಾಕಿ:

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗ ಯೋಜನೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ 1211 ಎಕರೆ ಭೂ ಸ್ವಾಧೀನಕ್ಕೆ ರೈಲ್ವೆ ಇಲಾಖೆಯಿಂದ ಕೋರಲಾಗಿತ್ತು. ಇದುವರೆಗೆ 1026 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು ರೈಲ್ವೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ.

ಭರಮಸಾಗರ-ಚಿತ್ರದುರ್ಗ, ಚಿತ್ರದುರ್ಗ-ಹಿರಿಯೂರು ಹಾಗೂ ಹಿರಿಯೂರು-ತಾವರಕೆರೆ ನಡುವೆ ಮೂರು ಹಂತದಲ್ಲಿ ಭೂಸ್ವಾಧೀನ ನಡೆಸಲಾಗುತ್ತಿದೆ. ಒಟ್ಟು 156 ಎಕರೆ ಭೂಸ್ವಾಧೀನದ ಅಂತಿಮ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಶೇ.90ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಹಂತಗಳಲ್ಲಿ ಈಗಾಗಲೇ ರೈಲ್ವೆ ಇಲಾಖೆಯಿಂದ ಕಾಮಗಾರಿಗಳನ್ನು ಆರಂಭಿಸಲಾಗಿದ್ದು, ಯಾವುದೇ ತೊಂದರೆ ಇಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆಯಲ್ಲಿ ಮಾಹಿತಿ ನೀಡಿದರು.

ಬೆಳೆ ಕಟಾವಿನ ನಂತರ ಕೆಲಸ ಮಾಡಿ:

ನೇರ ರೈಲ್ವೆ ಮಾರ್ಗ ಯೋಜನೆಯ ದಾವಣಗೆರೆ- ಭರಮಸಾಗರ-ಚಿತ್ರದುರ್ಗ ಮಧ್ಯದಲ್ಲಿ ಭೂಸ್ವಾಧೀನಪಡಿಸಿಕೊಂಡ ಜಮೀನಿನಲ್ಲಿ ರೈತರು ಬೆಳೆಗಳನ್ನು ಬೆಳೆದಿದ್ದಾರೆ. ರೈತರಿಗೆ ತೊಂದರೆಯಾಗದಂತೆ ಇನ್ನೂ 1 ತಿಂಗಳ ಬಳಿಕ ಬೆಳೆ ಕಟಾವು ನಂತರ ರೈಲ್ವೆ ಕಾಮಗಾರಿಗಳನ್ನು ಆರಂಭಿಸುವಂತೆ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರೈಲ್ವೇ ಇಲಾಖೆಯಲ್ಲಿ ಕ್ರಾಂತಿಕಾರಕ ಬದಲಾವಣೆ:

ರೈಲ್ವೆ ಇಲಾಖೆಯಲ್ಲಿ ಸಾಕಷ್ಟು ಕ್ರಾಂತಿಕಾರಕ ಬದಲಾವಣೆಗಳನ್ನು ತರಲಾಗಿದೆ. ಪ್ರಯಾಣಿಕರ ಸುರಕ್ಷತೆ ಹಿತದೃಷ್ಟಿಯಿಂದ ಹಾಗೂ ರೈಲ್ವೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ “ಕವಚ್” ರಕ್ಷಣಾ ವ್ಯವಸ್ಥೆಯನ್ನು ಪ್ರತಿ ರೈಲಿನಲ್ಲಿಯೂ ಅಳವಡಿಸಲು ಚಿಂತನೆ ನಡೆಸಲಾಗಿದೆ.

ಕವಚ್ ವ್ಯವಸ್ಥೆಯು ವಿಮಾನದ ಬ್ಲಾಕ್‍ಬಾಕ್ಸ್ ಮಾದರಿಯಲ್ಲಿ ರೈಲಿನ ಎಲ್ಲ ಚಲನವಲನಗಳನ್ನು ಸಂಗ್ರಹಿಸಲಿದೆ. ಇದರಿಂದ ಅಪಘಾತಗಳು ಉಂಟಾದ ಸಂದರ್ಭದಲ್ಲಿ ತಾಂತ್ರಿಕ ಲೋಪದೋಷಗಳನ್ನು ಪತ್ತೆಹಚ್ಚಲು ಸಹಕಾರಿಯಾಗಲಿದೆ ಎಂದರು.

ಇದನ್ನೂ ಓದಿ: ಮಾಡದಕೆರೆ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ದೇಶದ 24 ರಾಜ್ಯಗಳ 303 ಜಿಲ್ಲೆಗಳಲ್ಲಿ 103 ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ. ರಾಜ್ಯದಲ್ಲಿ 10 ವಂದೇ ಭಾರತ್ ಕಾರ್ಯಾಚರಣೆ ನಡೆಸುತ್ತಿವೆ. ಕೇವಲ ಮೂರು ವರ್ಷಗಳಲ್ಲಿ ಈ ಸಾಧನೆ ಮಾಡಲಾಗಿದೆ. ರೈಲು ಸಂಚಾರದ ವೇಗ ಹೆಚ್ಚಳಕ್ಕೆ ಕ್ರಮಕೈಗೊಂಡಿದ್ದು, ಗಂಟೆಗೆ ಗರಿಷ್ಟ 160 ಕಿ.ಮೀ ವೇಗದ ಮಿತಿಯನ್ನು ತಲುಪಲು ಪ್ರಯತ್ನಿಸಲಾಗುತ್ತಿದೆ.

ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ 49 ಸಾವಿರ ಕಿ.ಮೀ ಉದ್ದದ ರೈಲ್ವೆ ಹಳಿ ಡಬ್ಲಿಂಗ್ ಕಾರ್ಯ ಮಾಡಲಾಗಿದೆ. ಶೇ.27 ರಷ್ಟು ಇದ್ದ ರೈಲ್ವೆ ಮಾರ್ಗಗಳ ವಿದ್ಯುದೀಕರಣವನ್ನು ಶೇ.98ರಷ್ಟು ಪ್ರಗತಿ ಸಾಧಿಸಲಾಗಿದೆ. ದೇಶದ ಎಲ್ಲ ಜಿಲ್ಲಾ ಕೇಂದ್ರಗಳ ರೈಲ್ವೆ ನಿಲ್ದಾಣಗಳನ್ನು ಏರ್‍ಪೋರ್ಟ್‍ಗಳ ಮಾದರಿಯಲ್ಲಿ ನವೀಕರಣಗೊಳಿಸಲಾಗುತ್ತಿದೆ.

ಕೇರಳ, ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಹಾದುಹೋಗಿರುವ 741 ಕಿ.ಮೀ ಉದ್ದದ ಕೊಂಕಣ ರೈಲ್ವೆಯನ್ನು ರೈಲ್ವೆ ಇಲಾಖೆಯ ನೇರ ಆಡಳಿತಕ್ಕೆ ಒಳಪಡಿಸಿ, ಹಳಿಗಳ ಡಬ್ಲಿಂಗ್ ಮಾಡುವ ಕಾರ್ಯಕ್ಕೆ ರೈಲ್ವೆ ಖಾತೆ ಸಚಿವ ಅಶ್ವಿನ್ ವೈಷ್ಣವ್ ಒಲವು ತೋರಿದಿದ್ದಾರೆ.

ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಒಂದೂವರೆ ತಿಂಗಳಲ್ಲಿ ಅನುದಾನ | ಸಚಿವ ವಿ.ಸೋಮಣ್ಣ ಭರವಸೆ

ಉತ್ತರ ಪ್ರದೇಶದ ಪ್ರಯಾಗ್ ರಾಜ್‍ನಲ್ಲಿ ಬರುವ ಜನವರಿಯಲ್ಲಿ ಕುಂಭಮೇಳ ಜರುಗಲಿದ್ದು, ಸುಮಾರು 40 ಕೋಟಿಗೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಹಿನ್ನಲೆಯಲ್ಲಿ ರೈಲ್ವೆ ಇಲಾಖೆಯಿಂದ 600 ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಲಾಗುವುದು. ಪ್ರಯಾಗ್ ರಾಜ್‍ಗೆ ತೆರಳುವ ಭಕ್ತರಿಗೆ ಏಕರೂಪದ ಟಿಕೆಟ್ ವ್ಯವಸ್ಥೆ ಮಾಡುವ ಚಿಂತನೆ ನಡೆಸಲಾಗಿದ್ದು, ಟಿಕೆಟ್ ಪಡೆದವರು ಯಾವುದೇ ರೈಲಿನಲ್ಲಿ ಪ್ರಯಾಣಿಸಬಹುದಾಗಿದೆ ಎಂದರು.

ಸಭೆಯಲ್ಲಿ ಸಂಸದ ಗೋವಿಂದ ಎಂ ಕಾರಜೋಳ, ಶಾಸಕರಾದ ಎಂ.ಚಂದ್ರಪ್ಪ, ಟಿ.ರಘುಮೂರ್ತಿ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ನೇರ ರೈಲ್ವೆ ಮಾರ್ಗ ಭೂಸ್ವಾಧೀನಾಧಿಕಾರಿ ವೆಂಕಟೇಶ್, ಬೆಂಗಳೂರು ಕಂಟೋನ್‍ಮೆಂಟ್ ನಿರ್ಮಾಣ ವಿಭಾಗದ ಮುಖ್ಯ ಆಡಳಿತಾಧಿಕಾರಿ ಸಂದೀಪ್ ಶರ್ಮಾ, ಮುಖ್ಯ ಇಂಜಿನಿಯರ್‍ಗಳಾದ ಪ್ರದೀಪ್ ಪುರಿ, ಸಂಜಯ್ ಬನ್ಸಾರಿ, ವಿಭಾಗೀಯ ಇಂಜಿನಿಯರ್ ರಜತ್, ಮೈಸೂರು ರೈಲು ವಿಭಾಗದ ಮಂಡಲ ವಾಣಿಜ್ಯ ವ್ಯವಸ್ಥಾಪಕ ಗಿರೀಶ್ ಕಲಗೊಂಡ, ತಹಶೀಲ್ದಾರ್ ಡಾ.ನಾಗವೇಣಿ ಇತರರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:2027ಕ್ಕೆ ಪೂರ್ಣChitradurgaChitradurga newsChitradurga UpdatesComplete by 2027Davangere-Chitradurga-Tumkur Rail LineDirect Rail LineKannada Latest NewsNarendra ModiTrainV. Somannaಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗನರೇಂದ್ರ ಮೋದಿನೇರ ರೈಲು ಮಾರ್ಗರೈಲುವಿ.ಸೋಮಣ್ಣ
Share This Article
Facebook Email Print
Previous Article SJM DENTAL ಕಾಲೇಜಿನಲ್ಲಿ ಪದವಿ ಪ್ರದಾನ | 55 ವಿದ್ಯಾರ್ಥಿಗಳಿಗೆ BDS ಪ್ರಮಾಣ ಪತ್ರ SJM DENTAL ಕಾಲೇಜಿನಲ್ಲಿ ಪದವಿ ಪ್ರದಾನ | 55 ವಿದ್ಯಾರ್ಥಿಗಳಿಗೆ BDS ಪ್ರಮಾಣ ಪತ್ರ
Next Article ಬೆಸ್ಕಾ BESCOM ಮಹತ್ವದ ಸೂಚನೆ | ಅಕ್ಟೋಬರ್ 4 ರಿಂದ 6 ರವರೆಗೆ ಬಿಲ್ ಪಾವತಿಸುವ ಮುನ್ನಾ ಈ ಸುದ್ದಿ ಓದಿ
Leave a Comment

Leave a Reply Cancel reply

Your email address will not be published. Required fields are marked *

ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up